Horoscope: ದುಂದುವೆಚ್ಚವನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾದೀತು

ಅಕ್ಟೋಬರ್ 11,​ 2024: ಇಂದು ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಆಭರಣವನ್ನು ಖರೀದಿಸಲು ಸಾಲವನ್ನು ಮಾಡಬೇಕಾಗುವುದು ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿದ್ದು ಅದು ದಾಂಪತ್ಯದಲ್ಲಿ ಮೇಲೂ ಪರಿಣಾಮವನ್ನು ಬೀರಬಹುದು. ಹಾಗಾದರೆ ಅಕ್ಟೋಬರ್ 11ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ದುಂದುವೆಚ್ಚವನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾದೀತು
ದುಂದುವೆಚ್ಚವನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾದೀತು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2024 | 12:05 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಸುಕರ್ಮ​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:51 ರಿಂದ 12:19, ಯಮಘಂಡ ಕಾಲ ಮಧ್ಯಾಹ್ನ 03:17ರಿಂದ 04:45ರವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22 ರವರೆಗೆ.

ಮೇಷ ರಾಶಿ: ವಿದೇಶದಲ್ಲಿ ಇರವ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸುವರು. ಆದರೆ ಅಲ್ಲಿಯವರೆಗೆ ತಾಳ್ಮೆಯನ್ನು ಇಟ್ಟುಕೊಳ್ಳುವುದು ಮುಖ್ಯವಾಗಿ ಇರಲಿ. ಆಸ್ತಿಯ ತಕರಾರುಗಳು ಇತ್ಯರ್ಥವಾಗುವ ಸಮಯ ಹತ್ತಿರ ಬರುತ್ತಿದೆ. ಶಾಂತತೆಯನ್ನು ಕಾಯ್ದುಕೊಳ್ಳಿರಿ. ನಿಮಗೆ ದಕ್ಕಬೇಕಾದ ಪ್ರಮಾಣಕ್ಕಿಂತಲೂ ಹೆಚ್ಚಾಗಿ ದೊರೆಯುವ ಸಾಧ್ಯತೆ ಇರುತ್ತದೆ. ಸ್ವಂತ ವಿಚಾರದಲ್ಲಿ ಮಧ್ಯಪ್ರವೇಶವನ್ನು ನಿಮ್ಮ ವ್ಯವಹಾರವು ಅಧಿಕ ಲಾಭವನ್ನು ಗಳಿಸಬಹುದು. ಅಧಿಕಾರಿ ವರ್ಗ ನಿಮ್ಮ ಮೇಲೆ ಕಣ್ಣಿಡಬಹುದು. ವಾಗ್ವಾದಗಳಿಗೆ ನೀವು ಅವಕಾಶಶನ್ನು ಕೊಡುವುದು ಬೇಡ. ಆಪ್ತರೊಂದಿಗೆ ಭಿನ್ನಾಭಿಪ್ರಾಯ ಬರಬಹುದು. ದೀರ್ಘಾವಧಿಯ ಹೂಡಿಕೆಯು ನಿಮಗೆ ಲಾಭವಾಗಲಿದೆ. ನಿಮಗೆ ಸಂಗಾತಿಯ ಸಹಾಯವು ಸಿಗಬಹುದು. ಸಹೋದರನಿಂದ ಮನೆಯಲ್ಲಿ ಕಿರಿಕಿರಿ ಆಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು.

ವೃಷಭ ರಾಶಿ: ಇಂದು ವ್ಯಾವಹಾರಿಕವಾಗಿರುವ ಮನಶ್ಚಾಂಚಲ್ಯ ಅನೇಕ ವಿಧವಾಗಿ ನಿಮ್ಮನ್ನು ಕಾಡಬಹುದು.‌ ನಿಮ್ಮ ಪ್ರಯಾಣವನ್ನು ತಡೆಯಬಹುದು. ಧನಲಾಭವಾದರೂ ಮನಸ್ಸಿನಲ್ಲಿ ಬೇಸರದ ತುಂಬಿ ಇರುವುದು. ವೃತ್ತಿಯ ಒತ್ತಡವನ್ನು ಮನೆಗೆ ತರುವುದು ಬೇಡ. ನೀವು ಪರಿಚಿತರಿಂದ ಪ್ರಯೋಜನ ಪಡೆಯಲು ಬಯಸುವಿರಿ. ವೃತ್ತಿಜೀವನದಲ್ಲಿ ಅಧಿಕಾರಿಗಳು ನಿಮ್ಮ ಮಾತನ್ನು ಕೇಳಿ, ಬೇಕಾದುದನ್ನು ಮಾಡಿಕೊಡುವರು. ಯಂತ್ರಗಳ ವ್ಯವಹಾರದಲ್ಲಿ ಹೆಚ್ಚು ಲಾಭ ಇರಲಿದೆ. ಈ ಸಮಯವು ಪ್ರೇಮಕ್ಕೆ ಒಳ್ಳೆಯದು. ನಿಮ್ಮಿಂದ ಯಾರಿಗೂ ಅಗೌರವ ಕೊಡುವುದು ಬೇಡ. ಸಹೋದ್ಯೋಗಿಗಳ ಕೆಲಸದಿಂದ ನಿಮಗೆ ಸಿಟ್ಟು ಬರಬಹುದು. ಅದನದನು ಅಲ್ಲಿಯೇ ನುಂಗಿಕೊಳ್ಳಿ. ನಿಮ್ಮ ನಿವೃತ್ತಿಯಿಂದ ಬೇಸರವಾಗುವುದು. ತಪ್ಪು ನಿರ್ಧಾರವನ್ನು ನಡುವೆ ಇವು ತೆಗೆದುಕೊಂಡು ಪಶ್ಚಾತ್ತಾಪ ಪಡಬೇಕಾದೀತು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ: ಇಂದು ಹಿತಶತ್ರುಗಳು ನಿಮಗೆ ಬರುವ ಲಾಭವನ್ನು ತಪ್ಪಿಸುವರು. ಸಮಾಜದಿಂದ ಸಿಗುವ ಗೌರವವೂ ಬಾರದೇ ಇರುವುದು. ಬಂಧುಗಳು ನಿಮ್ಮ ಸಹಾಯವನ್ನು ಕೇಳಬಹುದು. ಕುಟುಂಬದ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯುವಿರಿ. ನೀವು ಅಂದುಕೊಂಡಷ್ಟು ಲಾಭವು ಸಿಗುವತನಕ ಕಾರ್ಯವನ್ನು ನಿಲ್ಲಿಸಲಾರಿರಿ. ಸಂಗಾತಿಯ ಸಲಹೆಯನ್ನು ಸ್ವೀಕರಿಸಿರಿ. ಮಕ್ಕಳು ಶುಭಯೋಗವನ್ನು ಉಂಟು ಮಾಡುವರು. ದುಂದುವೆಚ್ಚವನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾದೀತು. ನೌಕರರಿಂದ ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಹೆಚ್ಚು ಕೇಳಿಬರಬಹುದು. ಸ್ವಲ್ಪಮಟ್ಟಿಗೆ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಧಾರ್ಮಿಕ ಆಚರಣೆಗಳಲ್ಲಿ ಮನಸ್ಸು ಕೂಡದು. ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ನಿಮಗೆ ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕಟಕ ರಾಶಿ: ಇಂದು ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಆಭರಣವನ್ನು ಖರೀದಿಸಲು ಸಾಲವನ್ನು ಮಾಡಬೇಕಾಗುವುದು ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿದ್ದು ಅದು ದಾಂಪತ್ಯದಲ್ಲಿ ಮೇಲೂ ಪರಿಣಾಮವನ್ನು ಬೀರಬಹುದು. ಸಹೋದರನ ಕಡೆಯಿಂದ ನಿಮಗೆ ಸಹಾಯವಾಗುವುದು. ನಿಮ್ಮ ಕೆಲಸಕ್ಕೆ ಸಮಾಜದಲ್ಲಿ ಗೌರವ ಸಿಗಬಹುದು. ವ್ಯವಹಾರದ ಅಭಿವೃದ್ಧಿಯಾಗಿ ವಿದೇಶಿ ಸಂಪರ್ಕವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ನೀವೇ ಕಲ್ಪನೆಯನ್ನು ಮಾಡಿಕೊಂಡು ನಿಮ್ಮವರನ್ನು ದೂರವಿಡುವಿರಿ. ಸಜ್ಜನರ ಸಹವಾಸವು ನಿಮಗೆ ಸಿಗಲಿದೆ.ಸಂಗಾತಿಯ ಮಾತುಗಳು ನಿಮಗೆ ಪಥ್ಯವಾಗಬಹುದು. ತಂದೆಗೆ ಇಂದು ನೀವು ಸಹಾಯ ಮಾಡುವಿರಿ. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು. ಅನಾಮಿಕರ ಜೊತೆ ಅತಿಯಾದ ಸಲುಗೆ ಬೇಡ. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು.

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು