AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯವಹಾರ, ಹಣಕಾಸು ಸಮಸ್ಯೆ ಕಾಡಲಿದ್ದು, ಯಾವುದೇ ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಳ್ಳಬೇಡಿ ಎಂದು ಸಂಖ್ಯಾಶಾಸ್ತ್ರ ಭವಿಷ್ಯ ಹೇಳುತ್ತದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
| Edited By: |

Updated on: Jan 24, 2026 | 1:45 AM

Share

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು ಯಾರನ್ನು ನೆರವಿಗೆ ಬರಬಹುದು ಎಂದು ಭಾವಿಸಿರುತ್ತೀರೋ ಅವರು ಸಹ ನಿಮ್ಮ ಸಹಾಯಕ್ಕೆ ಬರುವುದಕ್ಕೆ ಆಗಲ್ಲ. ಸಂಬಂಧಿಕರು ನಿಮ್ಮ ಆರ್ಥಿಕ ಪರಿಸ್ಥಿತಿ ಬಗ್ಗೆ ಹೀಗಳೆದರೆ ಅದನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಉತ್ತಮ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ತಂದೆ- ತಾಯಿಯ ಆಶೀರ್ವಾದ ನಿಮ್ಮ ಮೇಲೆ ಅತ್ಯುತ್ತಮವಾಗಿ ಇರಲಿದೆ. ಬಾಹ್ಯದಿಂದ ನಿಮ್ಮ ಮೇಲೆ ಒತ್ತಡ ಬಂದರೂ ಅದನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದೀರಿ. ಸ್ತ್ರೀಶಕ್ತಿ ಸಂಘಗಳಲ್ಲಿ ಇರುವಂಥವರಿಗೆ ನಾಯಕತ್ವ ವಹಿಸುವಂಥ ಅವಕಾಶಗಳಿವೆ. ಮನೆಗೆ ಅಲಂಕಾರಿಕ ವಸ್ತುಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗೆ ಇದೆ. ಕರ್ಟನ್ ಮೊದಲಾದ ವಸ್ತುಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಹೊಸ ಜವಾಬ್ದಾರಿಗಳನ್ನು ಧೈರ್ಯವಾಗಿ ವಹಿಸಿಕೊಳ್ಳಿ. ದೀರ್ಘಾವಧಿಯಲ್ಲಿ ಅನುಕೂಲ ಆಗಲಿದೆ.

ಇದನ್ನೂ ಓದಿ: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಬ್ಯಾಂಕ್ ವ್ಯವಹಾರಗಳನ್ನು ಮಾಡುವಾಗ ಅತಿಯಾದ ನಿರೀಕ್ಷೆ ಇಟ್ಟುಕೊಂಡು ಮುಂದುವರಿದಲ್ಲಿ ಅಂದುಕೊಂಡಂತೆ ಕೆಲಸ ಆಗದೆ ಬೇಸರಕ್ಕೆ ಕಾರಣ ಆಗಲಿದೆ. ಈಗಾಗಲೇ ಮನೆ ನಿರ್ಮಾಣ ಮಾಡುತ್ತಿದ್ದೀರಿ, ಅದಕ್ಕೆ ಹಣಕಾಸಿನ ಸಮಸ್ಯೆ ಆಗಿದೆ ಎಂದಾದಲ್ಲಿ ಅದು ಉಲ್ಬಣ ಆಗಲಿದೆ. ಸ್ನೇಹಿತರು ಅಥವಾ ಸಂಬಂಧಿಕರು ಅಥವಾ ನೀವು ಬಹಳ ಗೌರವಿಸುವಂಥ ವ್ಯಕ್ತಿಗಳು ಒತ್ತಡ ತಂದರು ಎಂಬ ಕಾರಣಕ್ಕಾಗಿ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ನಿಮಗೇ ಸರಿ ಎಂದು ಅನಿಸುವ ತನಕ ಯಾವ ಹೊಸ ಪ್ರಾಜೆಕ್ಟ್ ಒಪ್ಪಿಕೊಳ್ಳದಿರಿ.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್