AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ

ಜನವರಿ 27ರಂದು ಜನ್ಮಸಂಖ್ಯೆ 1, 2, 3ರ ಜನರಿಗೆ ಸಂಖ್ಯಾಶಾಸ್ತ್ರದ ಪ್ರಕಾರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರು ಮನೆಯ ಖರ್ಚು, ಸಂಬಂಧಗಳ ಬಗ್ಗೆ ಗಮನ ಕೊಡಿ; 2ರವರು ಹೊಸ ಅವಕಾಶಗಳನ್ನು ಎಚ್ಚರಿಕೆಯಿಂದ ನೋಡಿ, ಖರ್ಚು ನಿಯಂತ್ರಿಸಿ; 3ರವರು ತಾಳ್ಮೆಯಿಂದಿರಿ, ಕೋಪದಿಂದ ದೂರವಿರಿ. ಹಣಕಾಸು ಹಾಗೂ ಉದ್ಯೋಗದಲ್ಲಿ ಲಾಭದ ಸಾಧ್ಯತೆಯಿದ್ದು, ಪ್ರವಾಸದ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಜನ್ಮಸಂಖ್ಯೆ ಪ್ರಕಾರ ಇಂದಿನ ಶುಭ-ಅಶುಭ ಫಲಗಳನ್ನು ತಿಳಿಯಿರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
| Edited By: |

Updated on: Jan 27, 2026 | 2:36 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈ ದಿನ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳು ಮುಖ್ಯ ಸ್ಥಾನ ಪಡೆದುಕೊಳ್ಳುತ್ತವೆ. ಮನೆ ಖರ್ಚು, ಅಲಂಕಾರ ಅಥವಾ ದುರಸ್ತಿ ಬಗ್ಗೆ ಚರ್ಚೆ ನಡೆಯಬಹುದು. ದಿನಸಿ ಪದಾರ್ಥಗಳ ಖರೀದಿಯಲ್ಲಿ ಖರ್ಚು ಹೆಚ್ಚಾಗಲಿದೆ. ಸಾವಯವ ಉತ್ಪನ್ನಗಳ ಖರೀದಿಗಾಗಿಯೋ ಅಥವಾ ಒಣಹಣ್ಣುಗಳ ಖರೀದಿಗೋ ಹೆಚ್ಚು ಖರ್ಚು ಬರಲಿದೆ. ಇನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ. ಭಾವುಕತೆಗೆ ಒಳಗಾಗಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಸಂಬಂಧಗಳಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇಡೀ ದಿನ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ಬಿಡುವಿಲ್ಲದಷ್ಟು ಕೆಲಸಗಳಲ್ಲಿ ತೊಡಗಿರುತ್ತೀರಿ. ಫೋನ್ ಕರೆಗಳು, ಸಂದೇಶಗಳು, ಭೇಟಿಗಳು ಜಾಸ್ತಿ ಆಗುತ್ತವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಅವಕಾಶದ ಮಾತು ಬರಬಹುದು, ಆದರೆ ತಕ್ಷಣ ಒಪ್ಪಿಕೊಳ್ಳಬೇಡಿ. ಪ್ರಭಾವಿಗಳ ಸಂಪರ್ಕದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇನ್ನು ಒಂದು ಕಡೆ ಹಣ ಬರುತ್ತದೆ, ಆದರೆ ಖರ್ಚು ಸಹ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣ ಮಾಡುವಾಗ ಸಮಯ ಮತ್ತು ಹಣ ಎರಡಕ್ಕೂ ಲೆಕ್ಕವಿರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪ್ರಯಾಣದಲ್ಲಿ, ಉದ್ಯೋಗಕ್ಕೆ ಸಂಬಂಧಿಸಿದ ವಿಚಾರದಲ್ಲಿ ಏಕಾಏಕಿ ಸಿಟ್ಟು ಹೊರ ಹಾಕುವುದಕ್ಕೆ ಹೋಗಬೇಡಿ. ಈ ದಿನ ತಾಳ್ಮೆ ಬಹಳ ಅಗತ್ಯ. ಸರ್ಕಾರಿ ಕೆಲಸ, ದಾಖಲೆ ಅಥವಾ ಬ್ಯಾಂಕ್ ಸಂಬಂಧಿಸಿದ ವಿಚಾರಗಳಲ್ಲಿ ವಿಳಂಬ ಆಗಬಹುದು. ಹಣಕಾಸಿನ ವಿಷಯದಲ್ಲಿ ಸಣ್ಣ ಲಾಭದ ಸೂಚನೆ ಇದ್ದರೂ ಅದನ್ನು ಎಲ್ಲರಿಗೂ ಹೇಳಿಕೊಳ್ಳಬೇಡಿ. ನಿಮ್ಮಲ್ಲಿ ಕೆಲವರು ಚಿನ್ನ- ಬೆಳ್ಳಿ ಇತರ ಬೆಲೆ ಬಾಳುವ ಲೋಹದಲ್ಲಿ ಹೂಡಿಕೆ ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು