AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ

ಜನ್ಮಸಂಖ್ಯೆ 4 ರವರಿಗೆ ಇಂದು ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರಿಕೆ ಅಗತ್ಯ. ತಕ್ಷಣಕ್ಕೆ ಕೆಲಸ ಮಾಡಬೇಕೆಂಬ ಒತ್ತಾಯಕ್ಕೆ ಜಾಗ್ರತೆಯಿಂದ ಪ್ರತಿಕ್ರಿಯಿಸಿ. ಕಷ್ಟವೆಂದುಕೊಂಡಿದ್ದ ಸರ್ಕಾರಿ ಕೆಲಸ ಸುಲಭವಾಗಿ ಮುಗಿಯಲಿದೆ. ಸಾಲ ಕೊಡುವ ವಿಚಾರದಲ್ಲಿ ಎಚ್ಚರವಿರಲಿ, ವಸೂಲಿ ಕಷ್ಟವಾದೀತು. ಹಲ್ಲಿನ ನೋವಿನ ಸಮಸ್ಯೆ ಇರುವವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆತುರದ ನಿರ್ಧಾರಗಳಿಂದ ದೂರವಿರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 06, 2026 | 2:44 AM

Share

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈಗಿಂದ ಈಗಲೇ ಕೆಲಸ ಆಗಬೇಕು, ಹೆಚ್ಚಿಗೆ ಹಣ ಆದರೂ ಕೊಡಲು ತಯಾರಾಗಿದ್ದೀವಿ ಅಂತ ನಿಮ್ಮ ಬಳಿ ಕೆಲಸಕ್ಕೆ ಒತ್ತಾಯ ಮಾಡುತ್ತಾ ನಿಂತಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿದ ನಂತರ ಹೂಂ ಅನ್ನುವುದು ಒಳ್ಳೆಯದು. ಸುಲಭಕ್ಕೆ ಆಗದು ಎಂದುಕೊಂಡಿದ್ದ ಸರ್ಕಾರಿ ಕೆಲಸವೊಂದು ಸಲೀಸಾಗಿ ಮುಗಿಯಲಿದೆ. ಬಹಳ ದಿನಗಳಿಂದ ಬೆನ್ನಟ್ಟಿದ್ದಾರೆ ಎಂಬ ಕಾರಣಕ್ಕೆ ಸಾಲ ಕೊಡುವುದಕ್ಕೆ ಒಪ್ಪಿಕೊಂಡಲ್ಲಿ ಅದನ್ನು ವಾಪಸ್ ವಸೂಲಿ ಮಾಡುವುದರ ಒಳಗೆ ಹೈರಾಣಾಗಲಿದ್ದೀರಿ. ಹಲ್ಲಿನ ನೋವಿನ ಸಮಸ್ಯೆ ಇರುವವರು ಜಾಗ್ರತೆಯಿಂದ ಇರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಛಲದೊಳ್ ದುರ್ಯೋಧನ ಎಂಬ ಮಾತಿನಂತೆ ನಿಮ್ಮ ಹಿಂದಿನ ಸಿಟ್ಟು, ಪ್ರತೀಕಾರವನ್ನು ತೀರಿಸಿಕೊಳ್ಳುವ ಮನಸ್ಥಿತಿಯಲ್ಲಿ ಇರುತ್ತೀರಿ. ಹೊಸ ಬಟ್ಟೆ, ಫ್ಯಾಷನ್ ದಿರಿಸುಗಳ ಖರೀದಿಗೆ ಹಣ ಖರ್ಚು ಮಾಡುವ ಯೋಗ ಈ ದಿನ ಇದೆ. ಬಹಳ ದಿನಗಳಿಂದ ಬಾಕಿ ಉಳಿದುಹೋಗಿದ್ದ ಹಣವನ್ನು ನಾಜೂಕಾಗಿ ವಸೂಲಿ ಮಾಡುವುದಕ್ಕೆ ಸಾಧ್ಯ ಆಗಲಿದೆ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಇರಲಿದೆ. ಮುಖ್ಯವಾದ ಕೆಲಸವೊಂದನ್ನು ಪೂರ್ತಿ ಮಾಡಿಕೊಂಡು ಬರುವುದಕ್ಕೆ ನಿಮಗೆ ವಹಿಸಲಿದ್ದಾರೆ.

ಇದನ್ನೂ ಓದಿ: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮೆಟ್ಟಿಲು ಹತ್ತುವಾಗ ಇಳಿಯುವಾಗ ಜಾಗ್ರತೆ ಇರಲಿ. ಮನೆಯಲ್ಲಿ ಆಗಬೇಕಾದ ಕೆಲಸ- ಕಾರ್ಯಗಳನ್ನು ಮುಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವ್ಯಕ್ತಿಗಳನ್ನು ಕರೆಸಿ, ಮಾತನಾಡಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ನೀವು ಒಪ್ಪಿಕೊಂಡ ಕೆಲಸಗಳಿಗೆ ಹೆಚ್ಚು ಸಮಯವನ್ನು ಎತ್ತಿಡಬೇಕಾದ ಸನ್ನಿವೇಶ ಎದುರಾಗಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ ವಿವಾಹ ವಯಸ್ಕರಿಗೆ ಶುಭ ವಾರ್ತೆ ಕೇಳಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?