AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 12ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗಳ ಬಗ್ಗೆ ಜಾಗರೂಕರಾಗಿರಿ. ಯಾವುದನ್ನೂ ಮುಚ್ಚಿಡಬೇಡಿ, ಸತ್ಯವು ಎಷ್ಟೇ ಕಹಿಯಾಗಿದ್ದರೂ ಅದು ನಿಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 12, 2026 | 12:25 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗಳ ಬಗ್ಗೆ ಜಾಗರೂಕರಾಗಿರಿ

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕುಟುಂಬದಲ್ಲಿ ಸಣ್ಣಪುಟ್ಟ ಗೊಂದಲಗಳು ಉಂಟಾಗಬಹುದು, ವಿಶೇಷವಾಗಿ ಒಡಹುಟ್ಟಿದವರ ಜೊತೆ ಆಸ್ತಿ ಅಥವಾ ಹಣದ ವಿಚಾರಕ್ಕೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ಹೆಣ್ಣುಮಕ್ಕಳಿಗೆ ಈ ದಿನ ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ. ಅದೇ ವೇಳೆ ದೂರದ ಊರಿನಿಂದ ಆಮಂತ್ರಣ ಅಥವಾ ಶುಭ ವಾರ್ತೆ ಬರಲಿದೆ. ಪ್ರೀತಿಪಾತ್ರರ ಜೊತೆಗಿನ ಸಂಬಂಧದಲ್ಲಿ ಇಂದು ‘ಪಾರದರ್ಶಕತೆ’ ಬಹಳ ಮುಖ್ಯ. ಯಾವುದನ್ನೂ ಮುಚ್ಚಿಡಬೇಡಿ, ಸತ್ಯವು ಎಷ್ಟೇ ಕಹಿಯಾಗಿದ್ದರೂ ಅದು ನಿಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸೌಂದರ್ಯವರ್ಧಕ ಮಾರಾಟಗಾರರು ಅಥವಾ ಫ್ಯಾಷನ್ ರಂಗದಲ್ಲಿರುವವರಿಗೆ ದೊಡ್ಡ ಮಟ್ಟದ ವ್ಯವಹಾರ ನಡೆಯಲಿದೆ. ಆರ್ಥಿಕವಾಗಿ ಸ್ಥಿತಿ ಗಟ್ಟಿಯಾಗಿದ್ದರೂ, ಅತಿಯಾದ ಐಷಾರಾಮಿ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಮನೆಯ ಹಿರಿಯ ಮಹಿಳೆಯರ ಸಲಹೆಯು ನಿಮಗೆ ಆಪತ್ಕಾಲದಲ್ಲಿ ನೆರವಾಗಲಿದೆ. ನೀವು ಇತರರ ಸೌಂದರ್ಯಕ್ಕಿಂತ ಗುಣಕ್ಕೆ ಆದ್ಯತೆ ನೀಡಿ ವ್ಯವಹರಿಸುವುದು ಒಳಿತು. ಚರ್ಮದ ಅಲರ್ಜಿ ಅಥವಾ ಕಣ್ಣಿನ ಉರಿ ಕಾಣಿಸಿಕೊಳ್ಳಬಹುದು. ವಿವಾಹ ಆಕಾಂಕ್ಷಿಗಳಿಗೆ ಇಂದು ಮನಸ್ಸಿಗೆ ಒಪ್ಪುವಂತಹ ಸಂಬಂಧಗಳು ಬರುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್