AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 21ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 21, 2026 | 12:08 AM

Share

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುವಂಥ ಹಾಗೂ ಒಳಿತು ಆಗುವಂಥ ಹೊಸ ವಿಚಾರಗಳನ್ನು ಹೊಸ ಜನರು ತೆಗೆದುಕೊಂಡು ಬರಲಿದ್ದಾರೆ. ಇಷ್ಟು ಸಮಯ ನಿಮ್ಮ ಮಾತನ್ನು ಯಾರು ಕೇಳಿಸಿಕೊಳ್ಳುತ್ತಾರೆ ಅಂತೇನಾದರೂ ನೀವು ಅಂದುಕೊಳ್ಳುತ್ತಾ ಇದ್ದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ. ಇಂಥ ಸಂದರ್ಭದಲ್ಲಿ ನೀವು ಮಾತನಾಡುವ ವಿಷಯ ಹಾಗೂ ಬಳಸುವ ಪದಗಳ ಕಡೆಗೆ ಗಮನವನ್ನು ನೀಡಿ. ಕೆಲಸಗಳು ನಿಧಾನ ಗತಿಯಲ್ಲಿಯೇ ಸಾಗಿದರೂ ಫಲಗಳು ಉತ್ತಮ ರೀತಿಯಲ್ಲಿ ದೊರೆಯಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸಣ್ಣ- ಸಣ್ಣ ಸಂಗತಿಗಳಿಗೂ ನೀವು ನೀಡುವ ಪ್ರಾಮುಖ್ಯ, ಕೆಲಸಗಳಲ್ಲಿ ಕಾಣುವ ಅಚ್ಚುಕಟ್ಟುತನಕ್ಕೆ ಮೆಚ್ಚುಗೆ ಬರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಶಿಸ್ತು ಹಾಗೂ ಯಾವುದೇ ವಿಚಾರದಲ್ಲಿಯೂ ಇರುವ ಸ್ಪಷ್ಟತೆಗೆ ಫಲಿತಾಂಶಗಳು ನಿದರ್ಶನ ಆಗುತ್ತವೆ. ಇತರರಿಗೆ ಚಿಕ್ಕದು ಎನಿಸಿದಂಥ ಹಣಕಾಸಿನ ವಿಚಾರದ ನಿರ್ಧಾರವೊಂದು ದೊಡ್ಡ ಬದಲಾವಣೆಯನ್ನೇ ತರಲಿದೆ. ಭವಿಷ್ಯಕ್ಕೂ ಸಹಾಯಕ ಆಗಲಿದೆ. ನಿಮ್ಮ ಪ್ರೀತಿಪಾತ್ರರ ಜೊತೆಗೆ ನೀವು ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರು ಹೇಳುವುದನ್ನು ಕೇಳಿಸಿಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!