AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 22, 2026 | 12:29 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ ಕೂಡ ಕೇಳಲಿದ್ದಾರೆ

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಏನು ಆಗುತ್ತಿದೆ ಎಂದು ಗೊತ್ತೇ ಇಲ್ಲದಂತೆ ನಿಮ್ಮ ಪರಿಸ್ಥಿತಿ ಆಗಲಿದೆ. ಯಾವುದೇ ತೀರ್ಮಾನ ಮಾಡಿದರೂ ಅದರಿಂದ ಸಮಾಧಾನ ತರುವಂಥದ್ದೇನೂ ಆಗಬಹುದು ಎಂಬ ವಿಶ್ವಾಸ ನಿಮ್ಮಲ್ಲಿ ಮೂಡುವುದಿಲ್ಲ. ನಿಮ್ಮ ಬಳಿ ಇರುವಂಥ ವಾಹನ ಒಂದನ್ನು ಮಾರಾಟ ಮಾಡುವುದಕ್ಕೆ ಮುಂದಾಗಲಿದ್ದೀರಿ. ಕುಟುಂಬ ಸದಸ್ಯರಿಗೆ ಈ ಬಗ್ಗೆ ಒಮ್ಮತ ಇಲ್ಲದಿದ್ದರೂ ನಿಮ್ಮ ನಿಲುವು ಬದಲಿಸುವ ಮನಸ್ಥಿತಿಯಲ್ಲಿ ಇರುವುದಿಲ್ಲ. ಹೋಟೆಲ್ ನಲ್ಲಿ ಕೆಲಸ ಮಾಡುವಂಥವರಿಗೆ ಒತ್ತಡದ ದಿನ ಇದಾಗಿರುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಭವಿಷ್ಯದಲ್ಲಿ ಆಗಬಹುದಾದ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ದೊರೆಯುತ್ತಾ ಸಾಗುತ್ತದೆ. ನಿಮಗೆ ದೊಡ್ಡ ಹುದ್ದೆಯೊಂದರ ಜವಾಬ್ದಾರಿ ನೀಡುವ ಕುರಿತು ಮೇಲಧಿಕಾರಿಗಳು ಸುಳಿವು ಕೊಡಲಿದ್ದಾರೆ. ಈ ಹಿಂದೆ ನಿಮ್ಮಿಂದ ಆದಂಥ ಸಹಾಯವನ್ನು ನೆನಪಿನಲ್ಲಿ ಇಟ್ಟುಕೊಂಡು, ಸ್ನೇಹಿತರು ಈಗ ನಿಮ್ಮ ಅಗತ್ಯಕ್ಕೆ ಸ್ಪಂದಿಸಲಿದ್ದಾರೆ. ಬ್ಯಾಂಕ್ ನಲ್ಲಿ ಲಾಕರ್ ಅನ್ನು ಪಡೆದುಕೊಳ್ಳುವುದಕ್ಕೆ ನಿಮ್ಮಲ್ಲಿ ಕೆಲವರು ಪ್ರಯತ್ನವನ್ನು ಮಾಡಲಿದ್ದೀರಿ. ಅಥವಾ ಮನೆಗೆ ಅಂಥ ಲಾಕರ್ ಅನ್ನು ಖರೀದಿಸಿ ತರುವಂಥ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು