AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 23ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 23, 2026 | 12:20 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ. ಕುಟುಂಬ ಸದಸ್ಯರು, ಸ್ನೇಹಿತರು, ಕೊನೆಗೆ ಸಹೋದ್ಯೋಗಿಗಳ ಸಹ ತಂತಮ್ಮ ಕೆಲಸದಲ್ಲಿ ಮುಳುಗಿ ಹೋಗುವುದರಿಂದ ಇಂಥದ್ದೊಂದು ಭಾವನೆ ನಿಮ್ಮಲ್ಲಿ ಹುಟ್ಟಿಕೊಳ್ಳಲಿದೆ. ಉದ್ಯೋಗ, ವೃತ್ತಿ- ವ್ಯಾಪಾರ ಹೀಗೆ ಯಾವುದೇ ವಿಚಾರದಲ್ಲಿಯೇ ಆಗಿರಲಿ, ಭೇಟಿ ಆಗಬೇಕು ಎಂದು ಸಮಯ ಕೇಳಿ, ಅದರ ಅಗತ್ಯವನ್ನು ಒತ್ತಿ ಹೇಳಿದ ನಂತರವೂ ಕೊನೆ ಕ್ಷಣದಲ್ಲಿ ನಿಮ್ಮನ್ನು ಇವತ್ತು ಕಾಣಲಿಕ್ಕೆ ಆಗಲ್ಲ ಎಂದು ವ್ಯಕ್ತಿಯೊಬ್ಬರು ಹೇಳಲಿದ್ದಾರೆ. ಇದರಿಂದ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಕುಗ್ಗುವಂತೆ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದ ಒಳಗಾಗಿ ಪೂರ್ಣ ಮಾಡುವುದು ಅಸಾಧ್ಯ ಎಂಬುದು ಖಚಿತ ಆಗಲಿದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಿಸಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ