AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 23ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 23, 2026 | 12:20 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ. ಕುಟುಂಬ ಸದಸ್ಯರು, ಸ್ನೇಹಿತರು, ಕೊನೆಗೆ ಸಹೋದ್ಯೋಗಿಗಳ ಸಹ ತಂತಮ್ಮ ಕೆಲಸದಲ್ಲಿ ಮುಳುಗಿ ಹೋಗುವುದರಿಂದ ಇಂಥದ್ದೊಂದು ಭಾವನೆ ನಿಮ್ಮಲ್ಲಿ ಹುಟ್ಟಿಕೊಳ್ಳಲಿದೆ. ಉದ್ಯೋಗ, ವೃತ್ತಿ- ವ್ಯಾಪಾರ ಹೀಗೆ ಯಾವುದೇ ವಿಚಾರದಲ್ಲಿಯೇ ಆಗಿರಲಿ, ಭೇಟಿ ಆಗಬೇಕು ಎಂದು ಸಮಯ ಕೇಳಿ, ಅದರ ಅಗತ್ಯವನ್ನು ಒತ್ತಿ ಹೇಳಿದ ನಂತರವೂ ಕೊನೆ ಕ್ಷಣದಲ್ಲಿ ನಿಮ್ಮನ್ನು ಇವತ್ತು ಕಾಣಲಿಕ್ಕೆ ಆಗಲ್ಲ ಎಂದು ವ್ಯಕ್ತಿಯೊಬ್ಬರು ಹೇಳಲಿದ್ದಾರೆ. ಇದರಿಂದ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಕುಗ್ಗುವಂತೆ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದ ಒಳಗಾಗಿ ಪೂರ್ಣ ಮಾಡುವುದು ಅಸಾಧ್ಯ ಎಂಬುದು ಖಚಿತ ಆಗಲಿದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಿಸಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್