AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 25, 2026 | 12:25 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ದಿನವಿಡೀ ಪ್ರೊಡಕ್ಟಿವ್ ಆದಂಥ ಕೆಲಸ- ಕಾರ್ಯ, ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತೀರಿ. ಸಂಬಂಧ- ಸ್ನೇಹದಲ್ಲಿ ಈ ಹಿಂದೆ ಯಾರಿಗೆ ಸಮಯ ನೀಡುವುದಕ್ಕೆ ಸಾಧ್ಯವಾಗಿಲ್ಲ ಎಂದು ನಿಮಗೆ ಅನಿಸಿರುತ್ತದೋ ಅಂಥವರ ಜತೆಗೆ ಕಾಲ ಕಳೆಯಲಿದ್ದೀರಿ. ಕೃಷಿ ಉತ್ಪನ್ನಗಳ ಮಾರ್ಕೆಟಿಂಗ್ ನಲ್ಲಿ ತೊಡಗಿಕೊಂಡಿದ್ದೀರಿ ಅಂತಾದಲ್ಲಿ ಆದಾಯದಲ್ಲಿ ಹೆಚ್ಚಳ ಆಗಲಿದೆ. ಇನ್ನು ಕೃಷಿಕರು ಕೆಲವು ಯಂತ್ರ- ಉಪಕರಣಗಳ ಖರೀದಿಗಾಗಿ ವಿಚಾರಣೆ ನಡೆಸಲಿದ್ದೀರಿ, ಅದಕ್ಕಾಗಿ ಕೊಟೇಷನ್ ಪಡೆದುಕೊಳ್ಳುವ ಸಾಧ್ಯತೆ ಸಹ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಕಾರ್ಯ ವೈಖರಿಯಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಕೆಲಸ ಪೂರ್ತಿ ಆಗುವ ಮುನ್ನ ಅದರ ಬಗ್ಗೆ ಯಾರ ಜತೆಗೂ ಚರ್ಚೆ ಮಾಡಬಾರದು ಎಂಬ ತೀರ್ಮಾನ ಕೈಗೊಳ್ಳಲಿದ್ದೀರಿ. ಯಾವುದಕ್ಕೂ ಇರಲಿ ಎಂದುಕೊಂಡು, ಕಳೆದ ಕೆಲ ಸಮಯದಿಂದ ಕೂಡಿಡುತ್ತಾ ಬಂದಿದ್ದ ಆಪತ್ ಕಾಲದ ಮೊತ್ತವೊಂದು ಈ ದಿನ ಸಹಾಯಕ್ಕೆ ಬರಲಿದೆ. ತಕ್ಷಣಕ್ಕೆ ಹೊಂದಾಣಿಕೆ ಮಾಡಬೇಕು ಎಂಬಂಥ ವಸ್ತು, ಹಣ ಅಥವಾ ವ್ಯಕ್ತಿಗಳನ್ನು ಶ್ರದ್ಧೆಯಿಂದ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ತಲೆಮಾರಿನ ಅಂತರ, ಅಂದರೆ ಜನರೇಷನ್ ಗ್ಯಾಪ್ ಅಂತಾರಲ್ಲ ಈ ದಿನ ನಿಮ್ಮ ಅನುಭವಕ್ಕೆ ಬರಲಿದೆ. ಹಣಕಾಸಿನ ನಿರ್ಧಾರದ ವಿಷಯಕ್ಕೆ ಯಾರಿಗೂ ಸಲಹೆ ನೀಡುವುದಕ್ಕೋ ಅಥವಾ ಹೀಗೇ ನಡೆದುಕೊಳ್ಳಿ ಎನ್ನುವುದಕ್ಕೋ ಹೋಗಬೇಡಿ. ನಿಮ್ಮ ಸಲಹೆಗಳು ಉಪಯುಕ್ತ ಅಲ್ಲ ಎಂಬುದನ್ನು ನೇರವಾಗಿಯೇ ಹೇಳಿ, ಅದನ್ನು ಸಾಬೀತು ಸಹ ಮಾಡಿಬಿಡುವ ಅಪಾಯ ಇದೆ. ಹೀಗಾದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿ ಹೋಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಸೀಸನಲ್ ವ್ಯವಹಾರದ ಅವಕಾಶವೊಂದು ದೊರೆಯಲಿದೆ. ಒಂದೆರಡು ತಿಂಗಳ ಮಟ್ಟಿಗೆ ಮಾತ್ರ ಆದಾಯ ತಂದುಕೊಡುವಂಥವು.

ಲೇಖನ- ಸ್ವಾತಿ ಎನ್.ಕೆ.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್