AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 25, 2026 | 12:30 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಒಂದೊಳ್ಳೆ ಸಮಯ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕುಟುಂಬದಲ್ಲಿ ಸಾಮರಸ್ಯ ಇರುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆಯೇ ಇತರ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ವ್ಯಾಪಾರ- ವ್ಯವಹಾರದಲ್ಲಿನ ಹೂಡಿಕೆ ವಿಚಾರಗಳಿಗೆ ಪ್ಲಾನಿಂಗ್, ಬಜೆಟ್ ಮಾಡಿಕೊಳ್ಳಲಿದ್ದೀರಿ. ಯಾರು ಉದ್ಯೋಗದಲ್ಲಿ ದೀರ್ಘ ಕಾಲದ ಅಂತರ ಬಂದು, ಈಗ ಕೆಲಸಕ್ಕೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಪ್ರತಿಷ್ಠಿತ ಸಂಸ್ಥೆಯೊಂದರಿಂದ ಆಫರ್ ಬರುವಂಥ ಸೂಚನೆ ಇದೆ. ಅದರಲ್ಲಿಯೂ ನಿಮಗೆ ಅನುಕೂಲ ಆಗುವಂಥ ಪಾಳಿಯಲ್ಲಿಯೇ ಅಥವಾ ಶಾಶ್ವತವಾಗಿ ವರ್ಕ್ ಫ್ರಮ್ ಹೋಮ್ ದೊರೆಯುವಂಥ ಕೆಲಸ ಅದಾಗಿರುವ ಸಾಧ್ಯತೆ ಹೆಚ್ಚಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಉದ್ಯೋಗ ಅಥವಾ ವ್ಯಾಸಂಗದ ಸಲುವಾಗಿ ವಿದೇಶದಲ್ಲಿ ವಾಸ ಆಗಿದ್ದೀರಿ ಅಂತಾದಲ್ಲಿ ಖರ್ಚು- ವೆಚ್ಚವನ್ನು ನಿಭಾಯಿಸುವುದು ಕಷ್ಟವಾಗಲಿದೆ. ಇಷ್ಟು ಸಮಯ ನಿಮಗೆ ನೆರವಾಗುತ್ತಿದ್ದ ಕೆಲವು ಪರಿಸ್ಥಿತಿ ಇನ್ನು ಮುಂದೆ ಹಾಗಿರುವುದಿಲ್ಲ ಎಂಬುದು ಗಮನಕ್ಕೆ ಬರಲಿದೆ. ಸ್ಥಳ ಬದಲಾವಣೆ ಅಥವಾ ನಿಮ್ಮ ನಿರ್ಧಾರದಲ್ಲಿಯೇ ಬದಲಾವಣೆ ಮಾಡಿಕೊಂಡು ಬಿಡುವ ಸಾಧ್ಯತೆ ಇದೆ. ಯಾವುದಾದರೂ ವಿಷಯ ಪೋಷಕರಿಂದ ಮುಚ್ಚಿಟ್ಟಿದ್ದೀರಿ ಅಂದರೆ ಅದನ್ನು ಹೇಳಿಕೊಂಡು ಬಿಡುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್