AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 28ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 28, 2026 | 12:40 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಗೃಹಾಲಂಕಾರ ವಸ್ತುಗಳ ಖರೀದಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಇದರಿಂದ ನಿಮಗೆ ಸಮಾಧಾನ- ತೃಪ್ತಿ ಸಿಗಲಿದೆ. ದೀರ್ಘ ಕಾಲದಿಂದ ನಿಮ್ಮ ಜತೆಗಿದ್ದು ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ದೂರದ ಪ್ರದೇಶಗಳಿಗೆ ತೆರಳುವ ವಿಚಾರ ತಿಳಿದುಬರಲಿದೆ. ಇದರಿಂದ ಭಾವನಾತ್ಮಕವಾಗಿ ಸ್ವಲ್ಪ ಕುಗ್ಗಿದಂತೆ ಭಾವನೆ ಮೂಡಲಿದೆ. ಆಸ್ತಮಾ ಸಮಸ್ಯೆ ಇರುವಂಥವರು ಸಾಮಾನ್ಯಕ್ಕಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಔಷಧ- ಮಾತ್ರೆಗಳಲ್ಲಿ ಬದಲಾವಣೆ ಮಾಡಿಕೊಂಡಿದ್ದೀರಿ ಅಂತಾದರೆ ಅದರಿಂದ ಆಗಿರುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಸಂಗಾತಿ ಜೊತೆಗೆ ಲಾಂಗ್ ಡ್ರೈವ್ ಗೆ ತೆರಳುವಂಥ ಯೋಗ ಇದೆ. ಇಷ್ಟು ಸಮಯ ನಿಮ್ಮ ಮನಸ್ಸಲ್ಲಿ ಇಟ್ಟುಕೊಂಡು, ಹೇಳದೇ ಇದ್ದಂಥ ಕೆಲವು ವಿಷಯಗಳನ್ನು ಹಂಚಿಕೊಳ್ಳಲಿದ್ದೀರಿ. ಹೊಸ ಕೋರ್ಸ್ ಸೇರಿಕೊಳ್ಳುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ವೃತ್ತಿಪರರು ನೀವಾಗಿದ್ದರೆ ನಿಮಗೆ ಗೊತ್ತಿರುವ ಮಾಹಿತಿಯೇ ಇದ್ದರೂ ಅದರ ಬಗ್ಗೆ ಇತರರಿಗೆ ಮಾಹಿತಿ ನೀಡುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಪರಿಶೀಲನೆ ಮಾಡಿಕೊಳ್ಳುವುದು ಒಳ್ಳೆಯದು. ಕುಟುಂಬದ ಸದಸ್ಯರು ಹೇಳುವ ಕೆಲವು ವಿಚಾರಗಳಿಗೆ ಖರ್ಚು- ವೆಚ್ಚದ ಕಾರಣ ನೀಡಿ, ಅದು ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಎತ್ತರದ ಸ್ಥಳಕ್ಕೆ ಹತ್ತುವಾಗ- ಇಳಿಯುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ಉದ್ಯೋಗವೇ ಈ ರೀತಿಯಾದದ್ದು ಎಂದಾದಲ್ಲಿ ಸಾಮಾನ್ಯ ದಿನಗಳಲ್ಲಿ ನೀವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿನ ಎಚ್ಚರಿಕೆ ಹಾಗೂ ಏಕಾಗ್ರತೆ ಬಹಳ ಮುಖ್ಯ. ಆಪತ್ಕಾಲಕ್ಕೆ ಎಂದುಕೊಂಡು ನೀವು ಕೂಡಿಟ್ಟಿದ್ದ ಹಣವನ್ನು ತೆಗೆದುಕೊಳ್ಳಬೇಕು ಎಂಬ ಸ್ಥಿತಿ ಉದ್ಭವಿಸಲಿದೆ. ಸಂಗಾತಿಯಿಂದ, ನೀವು ಬಹಳ ಪ್ರೀತಿ- ಗೌರವದಿಂದ ಕಾಣುವ ವ್ಯಕ್ತಿಗಳಿಂದ ನಿಂದನೆ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ನನ್ನ ಅತ್ತೆ ಮಕ್ಕಳು ಜೀತಕ್ಕೆ ಇದ್ದರು: ಭಾವುಕವಾಗಿ ಮಾತನಾಡಿದ ದುನಿಯಾ ವಿಜಯ್
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಬೆಂಗಳೂರಿನಲ್ಲಿಲ್ಲೂ ಗನ್​ ತೋರಿಸಿ ಬಂಗಾರದ ಅಂಗಡಿ ದರೋಡೆ
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ