AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನವರಿ 9ರಂದು ಜನ್ಮಸಂಖ್ಯೆ 7, 8, 9ರವರ ದಿನಭವಿಷ್ಯವನ್ನು ಸಂಖ್ಯಾಶಾಸ್ತ್ರ ಆಧಾರದಲ್ಲಿ ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 9ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ರಾಶಿಫಲ ತಿಳಿದು, ದಿನವನ್ನು ಉತ್ತಮವಾಗಿ ಯೋಜಿಸಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 09, 2026 | 12:47 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮನ್ನು ನೀವು ವಿಶ್ಲೇಷಿಸಿಕೊಳ್ಳುವ ದಿನ ಇದಾಗಿರುತ್ತದೆ. ಜನರ ಗುಂಪಿನ ನಡುವೆ ಇರುವುದಕ್ಕಿಂತ ಒಂಟಿಯಾಗಿ ಕೆಲಸ ಮಾಡಲು ಇಷ್ಟಪಡುತ್ತೀರಿ. ಸಂಶೋಧನೆ ಕ್ಷೇತ್ರದಲ್ಲಿ ಇರುವವರಿಗೆ ಮತ್ತು ಬರಹಗಾರರಿಗೆ ಹೊಸ ಆಲೋಚಬೆಗಳು ಹೊಳೆಯಲಿವೆ. ಧಾರ್ಮಿಕ ಕೆಲಸಗಳಿಗಾಗಿ ಸ್ವಲ್ಪ ಹಣ ವಿನಿಯೋಗಿಸುವಿರಿ. ಹಳೆಯ ಗೆಳೆಯನೊಬ್ಬ ಸಹಾಯ ಕೇಳಿ ಬರಬಹುದು, ಆದರೆ ಶಕ್ತಿ ಮೀರಿ ಸಾಲ ನೀಡಬೇಡಿ. ರಾತ್ರಿ ನಿದ್ರಾಹೀನತೆ ಕಾಡಬಹುದು, ಮಲಗುವ ಮುನ್ನ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಉದ್ಯೋಗಸ್ಥರಿಗೆ ಕಠಿಣ ಶ್ರಮದ ದಿನ. ಯುಪಿಐ ಪಾವತಿ ವಿಧಾನ ಬಳಸುತ್ತಿದ್ದೀರಿ ಅಂತಾದಲ್ಲಿ ಯಾವ ಸಂಖ್ಯೆಗೆ ಹಾಗೂ ಎಷ್ಟು ಮೊತ್ತ ವರ್ಗಾವಣೆ ಮಾಡುತ್ತಿದ್ದೀರಿ ಎಂಬುದನ್ನು ಪರಿಶೀಲಿಸಿಕೊಳ್ಳಿ. ಕಾನೂನು ಸಂಬಂಧಿತ ಸಮಸ್ಯೆಗಳು ಬಗೆಹರಿಯುವ ಲಕ್ಷಣಗಳಿವೆ. ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ಶುಭ ದಿನ. ಕೆಲಸಗಾರರ ಕೊರತೆ ಇಂದು ನಿಮ್ಮನ್ನು ಕಾಡಬಹುದು. ಆದರೂ ಸೋಲೊಪ್ಪದೆ ಕೆಲಸ ಮುಗಿಸುವಿರಿ. ಬೆನ್ನು ಅಥವಾ ಕುತ್ತಿಗೆ ನೋವು ಕಾಡಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ಶಕ್ತಿಯ ಮಟ್ಟ ತುಂಬಾ ಹೆಚ್ಚಿರುತ್ತದೆ. ಆದರೆ ಆ ಶಕ್ತಿಯನ್ನು ಕೋಪಕ್ಕೆ ಬಳಸದೆ ಕೆಲಸಕ್ಕೆ ಬಳಸಿ. ಭೂ ವ್ಯವಹಾರ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ತೊಡಗಿದವರಿಗೆ ಇಂದು ಲಾಭದಾಯಕ ಒಪ್ಪಂದಗಳು ಸಿಗಲಿವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಉತ್ತಮ ಫಲಿತಾಂಶದ ಮುನ್ಸೂಚನೆ ಇದೆ. ವಾಹನ ಚಾಲನೆಯಲ್ಲಿ ಅತಿ ವೇಗ ಬೇಡ. ರಕ್ತದೊತ್ತಡ ಇರುವವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಕೆಂಪು ಬಣ್ಣದ ಹಣ್ಣುಗಳ ಸೇವನೆ ಅಥವಾ ದಾನ ಮಾಡುವುದು ಶುಭದೆ.

ಲೇಖನ- ಎನ್‌.ಕೆ.ಸ್ವಾತಿ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!