AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jupiter Transit: ಗುರು ಪುನರ್ವಸು ನಕ್ಷತ್ರದಲ್ಲಿ ಸಂಚಾರ; 4 ರಾಶಿಗಳಿಗೆ ಅದೃಷ್ಟದ ಸುರಿಮಳೆ

ದೇವಗುರು ಬೃಹಸ್ಪತಿಯು ಪ್ರಸ್ತುತ ಮಿಥುನ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಗುರುವೇ ಈ ನಕ್ಷತ್ರದ ಅಧಿಪತಿಯಾಗಿರುವುದರಿಂದ, ಇದು ಅತ್ಯಂತ ಪ್ರಭಾವಶಾಲಿ ಯೋಗ. ಜ್ಞಾನ, ಸಂಪತ್ತು, ಸಂಬಂಧ ಹಾಗೂ ಅದೃಷ್ಟದ ಕಾರಕನಾದ ಗುರು ತನ್ನ ದೃಷ್ಟಿಯಿಂದ ಮಿಥುನ, ತುಲಾ, ಧನು, ಕುಂಭ ರಾಶಿಗಳಿಗೆ ವಿಶೇಷ ಶುಭಫಲಗಳನ್ನು ನೀಡಲಿದ್ದಾನೆ. ಹಳೆಯ ಕೆಲಸಗಳು ಪೂರ್ಣಗೊಂಡು ಹೊಸ ಅವಕಾಶಗಳು ಒದಗಿ ಬಂದು ಜೀವನದಲ್ಲಿ ಸಮೃದ್ಧಿ ತರಲಿದೆ.

Jupiter Transit: ಗುರು ಪುನರ್ವಸು ನಕ್ಷತ್ರದಲ್ಲಿ ಸಂಚಾರ; 4 ರಾಶಿಗಳಿಗೆ ಅದೃಷ್ಟದ ಸುರಿಮಳೆ
Punarvasu Nakshatra, Guru Transit
ಅಕ್ಷತಾ ವರ್ಕಾಡಿ
|

Updated on:Mar 13, 2026 | 3:51 PM

Share

​ಜ್ಯೋತಿಷ್ಯ ಶಾಸ್ತ್ರದಲ್ಲಿ ದೇವಗುರು ಬೃಹಸ್ಪತಿಯನ್ನು ಶುಭ ಗ್ರಹ ಎಂದು ಕರೆಯಲಾಗುತ್ತದೆ. ಗುರುವು ಜ್ಞಾನ, ಸಂತಾನ, ಭಾಗ್ಯ ಮತ್ತು ಸಮೃದ್ಧಿಯ ಕಾರಕ. ಪ್ರಸ್ತುತ ಗುರುವು ಮಿಥುನ ರಾಶಿಯ ಪುನರ್ವಸು ನಕ್ಷತ್ರದ ಮೂಲಕ ಸಂಚರಿಸುತ್ತಿದ್ದಾನೆ. ಪುನರ್ವಸು ನಕ್ಷತ್ರದ ಅಧಿಪತಿಯೂ ಸ್ವತಃ ಗುರುವೇ ಆಗಿರುವುದರಿಂದ, ಈ ಸಂಚಾರವು ಅತ್ಯಂತ ಶಕ್ತಿಯುತ ಹಾಗೂ ಪ್ರಭಾವಶಾಲಿಯಾಗಿದೆ.

​ಗುರುವಿನ ದೃಷ್ಟಿ ಸ್ಥಾನ:

​ಗುರುವು ತಾನು ಕುಳಿತಿರುವ ಸ್ಥಾನದಿಂದ 5, 7 ಮತ್ತು 9ನೇ ಮನೆಯನ್ನು ಪೂರ್ಣ ದೃಷ್ಟಿಯಿಂದ ನೋಡುತ್ತಾನೆ. ಮಿಥುನ ರಾಶಿಯಲ್ಲಿರುವ ಗುರುವು ಈ ಕೆಳಗಿನ ರಾಶಿಗಳ ಮೇಲೆ ತನ್ನ ಪ್ರಭಾವ ಬೀರುತ್ತಾನೆ.

  • ತುಲಾ ರಾಶಿ: ಇದು ಪಂಚಮ ದೃಷ್ಟಿ ಅಥವಾ ಸಂತಾನ ದೃಷ್ಟಿ, ಇದು ಜ್ಞಾನ ಮತ್ತು ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ.
  • ಧನು ರಾಶಿ: ಇದು ಸಪ್ತಮ ದೃಷ್ಟಿ ಅಥವಾ ಕಂಕಣ ದೃಷ್ಟಿ, ಇದು ಸಂಬಂಧಗಳು ಮತ್ತು ಪಾಲುದಾರಿಕೆಯನ್ನು ವೃದ್ಧಿಸುತ್ತದೆ.
  • ಕುಂಭ ರಾಶಿ: ಇದು ನವಮ ದೃಷ್ಟಿ ಅಥವಾ ಭಾಗ್ಯ ದೃಷ್ಟಿ. ಇದು ಅದೃಷ್ಟ ಮತ್ತು ಧಾರ್ಮಿಕ ಏಳಿಗೆಯನ್ನು ಸೂಚಿಸುತ್ತದೆ.

​ರಾಶಿಗಳ ಮೇಲೆ ಶುಭಾಶುಭ ಫಲಗಳು:

ಮಿಥುನ ರಾಶಿ :

ಗುರುವು ನಿಮ್ಮ ರಾಶಿಯಲ್ಲೇ ಇರುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಪುನರ್ವಸು ನಕ್ಷತ್ರದಲ್ಲಿ ಗುರು ಇರುವುದರಿಂದ ಹಳೆಯ ಬಾಕಿ ಉಳಿದ ಕೆಲಸಗಳು ಮರುಜೀವ ಪಡೆಯುತ್ತವೆ. ಆದರೆ, ತೂಕ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಜ್ಞಾನಾರ್ಜನೆಗೆ ಇದು ಸುವರ್ಣಾವಕಾಶ.

​ತುಲಾ ರಾಶಿ :

​ತುಲಾ ರಾಶಿಯವರಿಗೆ ಈ ಕಾಲವು ವರದಾನದಂತಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಮತ್ತು ಸಂಶೋಧಕರಿಗೆ ಅತ್ಯುತ್ತಮ ಫಲಗಳು ದೊರೆಯಲಿವೆ. ಮಕ್ಕಳಿಲ್ಲದ ದಂಪತಿಗಳಿಗೆ ಸಂತಾನ ಭಾಗ್ಯದ ಯೋಗವಿದೆ. ನಿಮ್ಮ ಹೂಡಿಕೆಗಳಿಂದ ನಿರೀಕ್ಷಿತ ಲಾಭ ಪಡೆಯುವಿರಿ. ಕಲಾತ್ಮಕ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಹುಡುಕಿ ಬರಲಿವೆ.

​ಧನು ರಾಶಿ:

ಧನು ರಾಶಿಯ ಅಧಿಪತಿಯೂ ಗುರುವೇ ಆಗಿರುವುದರಿಂದ, ಸಪ್ತಮ ದೃಷ್ಟಿಯು ವಿವಾಹದ ಕನಸು ಕಾಣುತ್ತಿರುವವರಿಗೆ ಶುಭ ವಾರ್ತೆ ತರಲಿದೆ. ವೈವಾಹಿಕ ಜೀವನದಲ್ಲಿನ ಕಲಹಗಳು ದೂರವಾಗಿ ಪ್ರೀತಿ ಹೆಚ್ಚುತ್ತದೆ. ವ್ಯಾಪಾರದಲ್ಲಿ ಹೊಸ ಒಪ್ಪಂದಗಳು ಲಾಭದಾಯಕವಾಗಲಿವೆ. ಸಾಮಾಜಿಕವಾಗಿ ನಿಮ್ಮ ಗೌರವವು ದುಪ್ಪಟ್ಟಾಗಲಿದೆ.

ಇದನ್ನೂ ಓದಿ: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

​ಕುಂಭ ರಾಶಿ:

​ಕುಂಭ ರಾಶಿಯವರಿಗೆ ಅದೃಷ್ಟವು ಕೈಹಿಡಿಯಲಿದೆ. ಪಿತೃಾರ್ಜಿತ ಆಸ್ತಿಯ ವಿವಾದಗಳು ಬಗೆಹರಿಯಲಿವೆ. ದೂರದ ಪ್ರಯಾಣ ಅಥವಾ ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವ ಪ್ರಯತ್ನಗಳು ಯಶಸ್ವಿಯಾಗಲಿವೆ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಮಾನಸಿಕ ಶಾಂತಿ ನೀಡುತ್ತದೆ.

​ಪುನರ್ವಸು ನಕ್ಷತ್ರ:

ಪುನರ್ವಸು ಎಂದರೆ ಮತ್ತೆ ಸಂಪತ್ತು ಎಂದರ್ಥ. ಈ ನಕ್ಷತ್ರದಲ್ಲಿರುವ ಗುರುವು ಸೋಲನ್ನು ಗೆಲುವನ್ನಾಗಿ ಪರಿವರ್ತಿಸುವ ಶಕ್ತಿ ಹೊಂದಿದ್ದಾನೆ. ಕಳೆದುಕೊಂಡ ಗೌರವ ಅಥವಾ ಹಣವನ್ನು ಮರಳಿ ಪಡೆಯಲು ಇದು ಸೂಕ್ತ ಕಾಲ.

​ಗುರುವಾರಗಳಂದು ಶಿವನ ದಕ್ಷಿಣಾಮೂರ್ತಿ ರೂಪವನ್ನು ಪೂಜಿಸುವುದು. ಹಳದಿ ಬಣ್ಣದ ವಸ್ತ್ರ ಅಥವಾ ಬೇಳೆಯನ್ನು ಅರ್ಚಕರಿಗೆ ಅಥವಾ ಬಡವರಿಗೆ ದಾನ ಮಾಡುವುದು. ​ – ಲೋಹಿತ ಹೆಬ್ಬಾರ್

Published On - 3:50 pm, Fri, 13 March 26

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು