Horoscope: ತಂದೆ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನ ಹಾಳು ಮಾಡೀತು

20 ಫೆಬ್ರವರಿ​​ 2025: ಗುರುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಅಪರಿಚಿತರ ನಡುವೆ ಆದ ಕಲಹವು ವಿಪರೀತಕ್ಕೆ ಹೋಗುವುದು. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ಹಾಗಾದರೆ ಫೆಬ್ರವರಿ 20ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ತಂದೆ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನ ಹಾಳು ಮಾಡೀತು
ತಂದೆ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನ ಹಾಳು ಮಾಡೀತು
Updated By: ಗಂಗಾಧರ​ ಬ. ಸಾಬೋಜಿ

Updated on: Feb 20, 2025 | 12:12 AM

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನೂರಾಧಾ, ಯೋಗ : ಗಂಡ, ಕರಣ : ವಣಿಜ, ಸೂರ್ಯೋದಯ – 06 – 55 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:47 – 14:14, ಯಮಘಂಡ ಕಾಲ 08:24 – 09:51, ಗುಳಿಕ ಕಾಲ 11:19 – 12:47.

ತುಲಾ ರಾಶಿ: ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಪ್ರಶಂಸಿಸಬಹುದು. ವಿವಾಹ ಸಂಬಂಧದ ಮಾತುಕತೆಗಳು ಸಮಾಧಾನ ಕೊಡದು. ಕೃತಘ್ನರಾಗಿ ಮೆರೆಯುವುದು ಬೇಡ. ಎಲ್ಲಿಯಾದರೂ ಜಾರಿ ಬೀಳಲು ಹೆಚ್ಚು ಸಮಯ ಬೇಡ. ಅಂಗಳವನ್ನೇ ಹಾರಲಾರದವನು ಆಕಾಶವನ್ನು ಹಾರಿಯಾನು ಎಂದು ನಿಮ್ಮನ್ನು ಲೇವಡಿ ಮಾಡಬಹುದು. ಎಷ್ಟೇ ಸೌಕರ್ಯವಿದ್ದರೂ ಇನ್ನಷ್ಟು ಬೇಕೆನಿಸಬಹುದು. ಅತಿಥಿಗಳ ಆಗಮನದಿಂದ ನಿಮ್ಮ ಯೋಜನೆಗಳು ಅಸ್ತವ್ಯಸ್ತ. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು. ಇದು ನಿಮಗೆ ಸಾಧನೆಗೆ ಪ್ರೇರಣೆಯೂ ಆಗಬಹುದು. ಹತ್ತಾರೂ ಆಲೋಚನೆಗಳು ಒಂದಾದಮೇಲೆ ಒಂದರಂತೆ ಬಂದು ನಿಮ್ಮ ದಿನಚರಿಯನ್ನು ಹಾಳು ಮಾಡಬಹುದು.

ವೃಶ್ಚಿಕ ರಾಶಿ: ಇಂದು ನೀವು ಕಾರ್ಯಕ್ಕೆ ಹೊರಡುವ ಮೊದಲೇ ತನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಯಾವುದನ್ನೂ ವ್ಯರ್ಥ ಎಂದು ಭಾವಿಸದೇ ಸಕಾರಾತ್ಮಕವಾಗಿ ಇರಿ. ಏಕಕಾಲದಲ್ಲಿ ಅನೇಕ ವಿಚಾರಗಳ ಚಿಂತನೆಯನ್ನು ನಡೆಸುವಿರಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗ್ಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಸಾಲದಿಂದ ಮುಕ್ತನಾಗಲು ನೀವು ಮಾಡುವ ಕಾರ್ಯ ವಿಫಲವಾಗುಬುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ. ಕಛೇರಿಯಲ್ಲಿ ನಿಮ್ಮದಾದ ಅಸ್ತಿತ್ವವನ್ನು ಹೆಚ್ಚಿಸಿಕೊಳ್ಳುವಿರಿ. ಕೆಲವು ಸಂದರ್ಭಗಳು ನಿಮ್ಮ ಪರೀಕ್ಷೆಗಾಗಿ ಬರಲಿದ್ದು ಅದನ್ನು ಎದುರಿಸುವುದು ನಿಮ್ಮ ಮೇಲಿದೆ. ಮೂರ್ಖರಂತೆ ವರ್ತಿಸಿ ಎಲ್ಲರ ನಡುವೆ ನಗೆಪಾಟಲಾಗುವಿರಿ.

ಧನು ರಾಶಿ: ಶತ್ರುಗಳು ಆಕ್ರಮಣ ಮಾಡುವ ಸೂಚನೆ ನಿಮಗೆ ಸಿಗಬಹುದು. ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ನಿಮ್ಮ ಎಲ್ಲಾ ಶ್ರಮದಾಯಕ ಯೋಜನೆ ಮತ್ತು ಸಂಘಟನೆಯು ಅಂತಿಮವಾಗಿ ಫಲವನ್ನು ನೀಡಲಿದೆ. ದೈಹಿಕ ಕ್ರೀಡೆ ಹಾಗೂ ಚಟುವಟಿಕೆಗಳಲ್ಲಿ ಜಯ. ವಿಶೇಷವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು. ನಿಗದಿತ ಸಮಯಕ್ಕಿಂತ ಮೊದಲೇ ಸಾಲವನ್ನು ತೀರಿಸಿದ್ದಕ್ಕೆ ನಿಮ್ಮಲ್ಲಿ ಅಹಂಕಾರವು ಜಾಗರೂಕವಾಗಬಹುದು. ಅನ್ಯರು ನೆನಪಿಟ್ಟುಕೊಳ್ಳುವ ಯಾವುದಾದರೂ ಕಾರ್ಯವನ್ನು ಮಾಡುವಿರಿ. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎನ್ನುವಂತೆ ನಿಮ್ಮ ಬಹಳ ದಿನದ ಕೂಡಿಟ್ಟ ಹಣವು ಕ್ಷಣಾರ್ಧದಲ್ಲಿ ಖಾಲಿಯಾಗಲಿದ್ದು ನಿಮಗೆ ಬೇಸರ ತರಿಸೀತು.

ಮಕರ ರಾಶಿ: ಅಚಾತುರ್ಯದಿಂದ ಮಾತನಾಡಿ ನಿಮ್ಮನ್ನು ನೀವೇ ಕೆಳಗೆ ಇಳಿಸಿಕೊಳ್ಳುವಿರಿ. ನೀವು ಇಂದು ಸಂಗಾತಿಯ ಜೊತೆ ವಾಸ್ತವ ಬದುಕಿನ ಬಗ್ಗೆ ಚಿಂತನೆಯನ್ನು ನಡೆಸುವಿರಿ. ವೃತ್ತಿ ಜೀವನದಲ್ಲಿ ಗೌರವವನ್ನು ಮತ್ತು ಇರುವುದಕ್ಕಿಂತ ಹೆಚ್ಚಿನ ಸ್ಥಾನವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು. ಉದ್ಯೋಗದಿಂದಾಗಿ ಇಂದಿನ ಉತ್ತಮ ಲಾಭದಾಯಕ ವ್ಯಾಪಾರವನ್ನು ಕಳೆದುಕೊಳ್ಳುವಿರಿ. ಗೃಹನಿರ್ಮಾಣವು ನಿಮಗೆ ಅನಿವಾರ್ಯವಾದೀತು. ಬಾಡಿಗೆ ಮನೆಯ ಕಿರಿಕಿರಿಯು ನಿಮಗೆ ಸಾಕಾಗಿ ಹೋಗುವುದು. ಮುನ್ನೋಟ ಸರಿಯಾಗಿದ್ದರೆ ಎಲ್ಲವೂ ನಿಮಗೆ ಜೊತೆಗಾವುದು. ಅಧಿಕಾರಿಗಳಿಂದ ನಿಮ್ಮ ಆರ್ಥಿಕತೆಯು ಪರಿಶೀಲನೆಗೊಳ್ಳುವುದು. ದುಡಿಮೆಯ ಸ್ವಲ್ಪ ಭಾಗವನ್ನಾದರೂ ಇತರಿಗೆ ಕೊಡಬೇಕು ಎಂದು ಅನ್ನಿಸಬಹುದು.

ಕುಂಭ ರಾಶಿ: ಅಧಿಕಾರ ನೀಡುವ ನಂಬಿಕೆ ಹುಟ್ಟಿಸಿ ಕಾರ್ಯವನ್ನು ಮಾಡಿಸಿಕೊಳ್ಳುವರು. ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ಅಪರಿಚಿತರ ನಡುವೆ ಆದ ಕಲಹವು ವಿಪರೀತಕ್ಕೆ ಹೋಗುವುದು. ನಿಮ್ಮ ಸುತ್ತಲಿನ ಜನರು ತಮ್ಮದೇ ಮಿತಿಯಲ್ಲಿ ಇರುವರು. ಅದಕ್ಕಾಗಿ ಅವರ ಜೊತೆ ಮನಸೋ ಇಚ್ಛೆ ವರ್ತಿಸುವುದು ಬೇಡ. ಅವರಿಗೆ ತಮ್ಮಷ್ಟಕ್ಕೆ ನಿರ್ಧಾರ ಕೈಗೊಳ್ಳುವ ಅವಕಾಶ ನೀಡಿ. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು ಯೋರಿಸುತ್ತದೆ. ಆಹಾರವನ್ನು ಒಳ್ಳೆಯ ಮನಸ್ಸಿನಿಂದ ತ್ಯಾಗ ಮಾಡಿ. ಸ್ವಂತ ಕಾರ್ಯದ ಕಾರಣ ಕಛೇರಿಗೆ ವಿರಾಮ ಹೇಳುವಿರಿ. ಆಕಸ್ಮಿಕವಾಗಿ ನೀವು ಅಶುಭ ಸಮಾಚಾರವನ್ನು ಕೇಳಬೇಕಾಗುವುದು. ನಿಮ್ಮ ಸುತ್ತಲೂ ನಡೆಯುವುದನ್ನು ಹತ್ತಿರದಿಂದ ಗಮನಿಸಿ, ನೀವು ನಿಮ್ಮನ್ನು ಸರಿಯಾಗಿ ಕಂಡುಕೊಳ್ಳಿ.

ಮೀನ ರಾಶಿ: ಅಮೂಲ್ಯ ವಸ್ತುಗಳ ವಿಕ್ರಯದಲ್ಲಿ ಅಧಿಕ‌ ಲಾಭ. ಹೂಡಿಕೆಯನ್ನು ಅದರ ಮೆಲೇಯೇ ಮಾಡಬಹುದು. ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ಧಾರ್ಮಿಕ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಯೋಜನೆಯನ್ನು ಅನೇಕರ ಜೊತೆಗೂಡಿ ಚರ್ಚಿಸುವಿರಿ. ನೀವು ಇನ್ನೊಬ್ಬರ ಅಹಂಕಾರವನ್ನು ಹೆಚ್ಚಿಸಲು ಹೋಗುವುದು ಬೇಡ. ಅತ್ಯಂತ ಮುಖ್ಯವೆಂದು ಪರಿಗಣಿಸುವ ವಿಷಯಗಳಲ್ಲಿ ನಿಮ್ಮ ಪ್ರಯತ್ನಗಳನ್ನು ಮುಂದುವರೆಸಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಅಪರಿಚಿತ ಸ್ತ್ರೀಯನ್ನು ಕಂಡು ಮೋಹಗೊಳ್ಳುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ಸಂಗಾತಿಗೆ ಬೇಕಾದ ಸಹಕಾರವನ್ನು ಖುಷಿಯಿಂದ ಮಾಡುವಿರಿ.