Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು ಎಚ್ಚರ

22 ಜನವರಿ​​ 2025: ಬುಧವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನೀವು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮನ್ನು ಕಂಡುಕೊಳ್ಳಬಹುದು. ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ಹಾಗಾದರೆ ಜನವರಿ 22ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನಿಮ್ಮ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು ಎಚ್ಚರ
ನಿಮ್ಮ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು ಎಚ್ಚರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 22, 2025 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12: 44 ರಿಂದ 02:10ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:28 ರಿಂದ 09:54 ರವರೆಗೆ, ಗುಳಿಕ ಬೆಳಿಗ್ಗೆ 11:19 ರಿಂದ ಮಧ್ಯಾಹ್ನ 12:44 ರವರೆಗೆ.

ತುಲಾ ರಾಶಿ: ನಿಮ್ಮ ಮಾತು ಅನೇಕ ಅನುಮಾನಗಳಿಗೆ ಆಸ್ಪದವಾಗಲಿದೆ. ಮಾರುಕಟ್ಟೆಯಿಂದ ಹೆಚ್ಚಿನ ಲಾಭವನ್ನು ಪಡೆಯಲು ಆಗುವುದು. ನಿಮ್ಮ ವ್ಯಾಪಾರದ ವಿಸ್ತರಣೆಯನ್ನು ಮಾಡಲು ನಿರ್ಧಾರ ಮಾಡುವಿರಾದರೂ ಕೆಲವರ ಅಭಿಪ್ರಾಯ ಹಾಗೂ ಸಲಹೆಯನ್ನು ಮುಕ್ತವಾಗಿ ಪಡೆಯಿರಿ. ದ್ವಿಚಕ್ರ ವಾಹನವನ್ನು ಚಲಾಯಿಸುವಾಗ ಎಚ್ಚರಿಕೆ ಇರಲಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು. ಸಂಗಾತಿಯ ಮನವೊಲಿಸುವುದು ನಿಮ್ಮ ಚಾಣಾಕ್ಷತೆಗೆ ಬಿಟ್ಟಿದ್ದು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಸಮಾಜಮುಖೀ ಕಾರ್ಯಗಳನ್ನು ನಿರಪೇಕ್ಷೆಯಿಂದ ಮಾಡುವಿರಿ. ಕಾನೂನು ವ್ಯವಹಾರದಲ್ಲಿ ಗಲಿಬಿಲಿಯಾಗಲಿದೆ. ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಉದಾರಗುಣವು ದುರುಪಯೋಗ ಆಗಬಹುದು.

ವೃಶ್ಚಿಕ ರಾಶಿ: ನಿಮ್ಮ ಭವಿಷ್ಯದ ಬಗ್ಗೆ ನೀವು ಹೆಚ್ಚು ಕುತೂಹಲವಿರಲಿದೆ. ನಿಮ್ಮಿಂದ ನಿಮ್ಮ ಮೇಲಿನವರು ಗೌರವವನ್ನು ನಿರೀಕ್ಷಿಸುವರು. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು, ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಮುಖ್ಯವಾಗಿರಲಿ. ಸ್ನೇಹಿತರ ಮಾತಿನಿಂದ ನಿಮಗೆ ನೋವಾಗಬಹುದು. ಹಣಕಾಸಿನ ವಿಚಾರಕ್ಕೆ ತಂದೆಯ ನಡುವೆ ವಾಗ್ವಾದವು ಆಗಬಹುದು. ಯಾವ ಕ್ಷೇತ್ರದಲ್ಲೇ ಇದ್ದರೂ ಶತ್ರುಗಳ ಪಾತ್ರವನ್ನು ಇಲ್ಲಗಳೆಯುವಂತಿಲ್ಲ. ವಾಹನವನ್ನು ಚಲಿಸುವಾಗ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಹಿರಿಯರು ಬೇಡ ಎಂದು ಹೇಳಿದ ಕೆಲಸವನ್ನು ಹಠದಿಂದ ಅವರ ಮಾತನ್ನು ವಿರೋಧಿಸಿ ಮಾಡುವಿರಿ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ಆರ್ಥಿಕ ಒಪ್ಪಂದಕ್ಕೆ ಒಪ್ಪಿಗೆ ಕೊಡುವಿರಿ. ನಿರ್ಲಕ್ಷ್ಯ ಮಾಡದೇ ಒಂದು ಗಮನ ಬೇಕು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು.

ಧನು ರಾಶಿ: ವೃತ್ತಿಗಾಗಿ ನಿಮ್ಮ ಓಡಾಡ ಅತಿಯಾಗಲಿದೆ. ಕೇವಲ ಪುರುಷಪ್ರಯತ್ನದಿಂದ ಸಾಧಿಸುವ ಹುಂಬುತನ ಬೇಡ. ದೈವವೇ ನಿಮಗೆ ಸಹಾಯ ಮಾಡುವುದಾಗಿದೆ‌. ನೀವು ಅಹಂಕಾರ ತೋರಿದರೆ ದೇವರು ಮಮಕಾರ ತೋರಲಾರ. ಹಣಕಾಸಿನ ಭವು ನಿರೀಕ್ಷೆಗಿಂತ ಕಡಿಮೆಯಾಗಬಹುದು. ಇಂದು ಕೆಲವು ಪರಿಸ್ಥಿತಿಯನ್ನು ಎದುರಿಸಲು ಸಂಕೋಚವಾಗಬಹುದು. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡುವುದು ಸೂಕ್ತ. ಪೂರ್ವಿಕರ ಆಸ್ತಿಗೆ ಸಂಬಂಧಿಸಿದಂತೆ ಮನಸ್ತಾಪವು ಬರಬಹುದು. ಸಂಗಾತಿಯ ಜೊತೆ ಅನುನಯದಿಂದ ವರ್ತಿಸಿ, ಬೇಕಾದುದನ್ನು ಪಡೆದುಕೊಳ್ಳುವಿರಿ. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ದಿನವನ್ನು ದುಃಖಾಂತ್ಯ ಮಾಡಿಕೊಳ್ಳುವುದು ಬೇಡ. ಸ್ವತಂತ್ರ ಆಲೋಚನೆಯಿಂದ ಹೊಸ ದೃಷ್ಟಿ ಸಿಗಲಿದೆ.

ಮಕರ ರಾಶಿ: ನೀವು ಯಾರಿಗೆ ಎಷ್ಟು ಸಮಯವನ್ನು ಕೊಡುತ್ತೀರಿ ಎನ್ನುವುದರ ಮೇಲೆ ಸಂಬಂಧಗಳ ಅಸ್ವಿತ್ವ ನಿರ್ಧಾರವಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯವೂ ವ್ಯತ್ಯಾಸವಾಗಿ ಉದ್ವೇಗಕ್ಕೆ ಒಳಗಾಗುವರು. ವಾಹನ ಚಾಲನೆ ಮಾಡುವಾಗ ಜಾಗರೂಕತೆ ಅವಶ್ಯವಾಗಿದೆ. ಶುಭಕರ್ಮವನ್ನು ಮಾಡುವ ಉತ್ಸಾಹವಗಬಹುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ನಿಮ್ಮ ಯೋಜನೆಗಳು ಕ್ರಮಶುದ್ಧವೂ ತರ್ಕಸಿದ್ಧವೂ ನಿಯಮಬದ್ಧವೂ ಆಗಿರಲಿದೆ. ಆ ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಪಂಡಿತರ ಸಹವಾಸ ತೊರೆಯುವುದು. ಆರ್ಥಿಕತೆಯು ದುರ್ಬಲವಾದ ಕಾರಣ ಆತಂಕವು ಉಂಟಾಗಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಎಲ್ಲವೂ ಹೇಳದೆಯೂ ಅರ್ಥ ಮಾಡಕೊಂಡು ಕಾರ್ಯವನ್ನು ಮಾಡುವಿರಿ. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು.

ಕುಂಭ ರಾಶಿ: ನೀವು ಕೊಡುವ ಭಾವನಾತ್ಮಕ ಬಂಧಗಳು ನಿಮ್ಮನ್ನು ಸ್ತಬ್ಧಗೊಳಿಸಬಹುದು. ನಿಮ್ಮ ಕೌಶಲ್ಯವು ಸಾರ್ವಜನಿಕವಾಗಿ ಮೆಚ್ಚುಗೆಯಾಗಲಿದೆ. ಹೊಸ ಉದ್ಯಮಕ್ಕೆ ಇಂದು ಉತ್ತಮವಿರುವುದು. ನೀವು ಉದ್ಯೋಗವನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ನಿಮ್ಮ ಜೀವನಶೈಲಿಯನ್ನು ಸುಧಾರಿಸಿಕೊಳ್ಳಿ. ಸ್ವಂತ ನೆಲೆಯ ಸ್ಥಾಪನೆಯ ಬಗ್ಗೆ ಹೆಚ್ಚು ಯೋಚನೆ ಯೋಜನೆ ಅಗತ್ಯ. ಶತ್ರುಬಾಧೆಯಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗುಬುದು. ನಿಮ್ಮ ಏಳ್ಗೆಯನ್ನು ಇತರರು ಸಹಿಸಿಕೊಳ್ಳುವುದು ಕಷ್ಟವಾಗುವುದು. ಯಾರ ಬಗ್ಗೆಯೂ ಸಲ್ಲದ ಮಾತನಾಡಿ ಸಿಕ್ಕಿಕೊಳ್ಳುವಿರಿ. ಸ್ವಯಂ ಕೃತ ಅಪರಾಧದಿಂದ ಪಶ್ಚಾತ್ತಾಪವಾಗುವುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ಪರರ ಸಂತೋಷದಲ್ಲಿ ನೀವು ಭಾಗಿಯಾಗುವಿರಿ. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ.

ಮೀನ ರಾಶಿ; ಇಂದು ಸಿಗಬೇಕಾದ ವೇತನ ಸಿಗದೇ ಆರ್ಥಿಕತೆಯೇ ಮೂಲವಾದ ಕಾರ್ಯಗಳಿಗೆ ಹಿನ್ನಡೆ. ಸಿಗುತ್ತದೋ ಇಲ್ಲವೋ ಎನ್ನುವ ಆತಂಕ ಮತ್ತೊಂದು ಕಡೆ. ಕಾನೂನಾತ್ಮಕ ವಿಚಾರದಲ್ಲಿ ತಿಳಿವಳಿಕೆಯನ್ನು ಇಟ್ಟುಕೊಂಡು ವ್ಯವಹರಿಸಿ. ನೀವು ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮನ್ನು ಕಂಡುಕೊಳ್ಳಬಹುದು. ಭೂಮಿಯ ವ್ಯವಹಾರವು ನಿಮಗೆ ಲಾಭದಾಯಕವೆಂದು ಸಾಬೀತುಪಡಿಸಬಹುದು. ವ್ಯಾಪಾರ ವಹಿವಾಟುಗಳಿಗೆ ಆಪ್ತರನ್ನೇ ಯೋಜಿಸಿಕೊಳ್ಳುವುದು ಉತ್ತಮ. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯು ನಿಮಗೆ ಅಚ್ಚರಿಯಾಗಬಹುದು. ನೌಕರರಿಗೆ ಇಂದು ಸಂತೋಷವನ್ನು ಕೊಡುವಿರಿ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಮದುವೆಗೆ ಟೆಂಪಲ್-ಗೋಲ್ಡ್​ ಥೀಮ್; ಹೀಗಿರುತ್ತೆ ಡಾಲಿ ಧನಂಜಯ್ ವಿವಾಹ
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!
ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿದ ಡೀಸೆಲ್ ಟ್ಯಾಂಕರ್!