
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವ್ಯತಿಪಾತ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:14 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:37 ರಿಂದ 11:01 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:26 ರಿಂದ 01:50 ರವರೆಗೆ.
ತುಲಾ ರಾಶಿ: ಮನೆಯವರ ಬಗ್ಗೆ ಕಾಳಜಿ ಅಧಿಕವಾಗುವುದು. ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು. ಏನಾದರೂ ಮಾಡಬೇಕು ಎಂಬ ಇಚ್ಛೆಯು ಅಧಿಕವಾಗುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಎಲ್ಲ ಕಾರ್ಯಗಳಿಗೂ ಉತ್ಸಾಹ ಭಂಗವಾಗುವುದು. ಚೆನ್ನಾಗಿ ಯೋಚಿಸಿದ ಮಾಡಿದ ಕಾರ್ಯವು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುವುದು. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಅಸಾಧ್ಯ ಎಂದು ಅನ್ನಿಸಬಹುದು. ಆಸ್ತಿ ವ್ಯವಹಾರಗಳಿಂದ ನಿಮಗೆ ಲಾಭವು ಇರುವುದು. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವರು. ಆರ್ಥಿಕ ವಿಚಾರದಲ್ಲಿ ಸಖ್ಯವು ಏರ್ಪಡುವುದು. ಕಛೇರಿಯ ಕೆಲಸಗಳು ಸಾಕೆನಿಸಬಹುದು. ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಸಹಕಾರವನ್ನು ಕೊಡುವಿರಿ. ನೀವು ಹಣ ಸಂಪಾದನೆಗೆ ಆರಿಸಿಕೊಂಡ ಮಾರ್ಗವು ಸರಿಯೆನಿಸದೇ ಇರಬಹುದು. ನಿಮ್ಮ ಅಮೂಲ್ಯ ವಸ್ತುಗಳು ನಷ್ಟವಾಗಬಹುದು.
ವೃಶ್ಚಿಕ ರಾಶಿ: ಮಾತು ಪರಿಣಾಮಕಾರಿಯಾಗಲು ಸುಮ್ಮನಿರುವುದೂ ಮುಖ್ಯ. ಇನ್ನೊಬ್ಬರ ತಪ್ಪನ್ನು ಕ್ಷಮಿಸಿ ಮುನ್ನಡೆಯುವುದೂ ನಾಕತ್ವದ ಗುಣವಾಗಲಿದೆ. ಇಂದು ಹಿತಶತ್ರುಗಳಿಂದ ಧನವು ನಷ್ಟವಾಗಲಿದೆ. ನೇರ ಮಾತಿನಿಂದ ನಿಮ್ಮವರು ದೂರಾಗಬಹುದು. ನಂಬಿಕೆಗಳು ಅನ್ಯರಿಂದ ಹಾಳಾಗುವುದು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪ್ರೇಮಿಗಳಿಗೆ ಇಂದು ಶುಭವಾಗಿಲ್ಲ. ನಿಮ್ಮನ್ನು ಹುದ್ದೆಯಿಂದ ಕೆಳಗೆ ಹಾಕಲು ನೋಡಬಹದು. ಎಲ್ಲರ ಜೊತೆ ವಿನಾಕಾರಣ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳು ಕಿರಿಕಿರಿ ಮಾಡುವರು. ನಿಮಗೆ ನಾನಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳುವಿರಿ. ಜಲಭೀತಿಯು ಕಾಡಬಹುದು. ಉದ್ಯೋಗದ ವಿಚಾರದಲ್ಲಿ ನಿಮಗೆ ನೆಮ್ಮದಿ ಇರದು.
ಧನು ರಾಶಿ: ಪರಾವಲಂಬನೆಯಿಂದ ನಿಮಗೆ ಮುಜುಗರದ ಸನ್ನಿವೇಶ ಕಾಣಿಸುವುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ಸಾಮಾಜಿಕ ಕಾರ್ಯಗಳಿಂದ ಅಭಿಮಾನ ಹೆಚ್ಚಾಗುವುದು. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಪರಿಚಿತರ ಸಖ್ಯವು ಬೇಡ. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಕಛೇರಿಯಲ್ಲಿ ಕೆಲಸವು ಮಂದಗತಿಯಲ್ಲಿ ಇರುವುದು. ಆಪ್ತ ಬಂಧುಗಳನ್ನು ನೀವು ಕಳೆದುಕೊಳ್ಳುವಿರಿ. ಯಾವುದೇ ಕಾರಣಕ್ಕೂ ಅಹಂಕಾರಕ್ಕೆ ಆಸ್ಪದ ಕೊಡುವುದು ಬೇಡ. ಅನಿರೀಕ್ಷಿತವಾಗಿ ಅತಿಥಿಗಳ ಭೇಟಿಯಿಂದ ಗಲಿಬಿಲಿಗೊಳ್ಳುವ ಸಂದರ್ಭವು ಬರಲಿದೆ.
ಮಕರ ರಾಶಿ: ನಮ್ಮ ಮೇಲಿನ ಹೊರೆಗಳು ಬೇರೆ ಕಾರ್ಯಕ್ಕೆ ಅಡ್ಡಿ ಮಾಡುವುವು. ಇಂದು ಕಡಿಮೆ ಖರ್ಚಿನಲ್ಲಿ ಉತ್ತಮ ವಸ್ತುವನ್ನು ಪಡೆಯುವಿರಿ. ಇಂದಿನ ವಿಫಲತೆಯು ನಿಮಗೆ ಛಲವನ್ನು ತರಬಹುದು. ನಿಮ್ಮಿಂದ ಧನಸಹಾಯವನ್ನು ನಿರೀಕ್ಷಿಸುವರು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನೀವು ಪ್ರಭಾವೀ ವ್ಯಕ್ತಿಗಳಂತೆ ತೋರುವಿರಿ. ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ನಿಮ್ಮ ಲಾಭವನ್ನು ಹೆಚ್ಚಿಸುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದ್ದರೆ, ಪ್ರಯತ್ನ ಮುಂದುವರಿಯಲಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಆಪ್ತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದದ ರೂಪವು ಬದಲಾಗುವುದು. ಪ್ರೀತಿಯ ಸ್ಥಳದಲ್ಲಿ ನಿಮಗೆ ಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ವೈವಾಹಿಕ ಸಂಬಂಧಗಳನ್ನು ಬಂಧುಗಳಲ್ಲಿ ಬೆಳೆಸುವಿರಿ. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ.
ಕುಂಭ ರಾಶಿ: ವಿದೇಶದ ಕಡೆಗೆ ಮನಸ್ಸು ಜಾರುವುದು. ಇಂದು ನೀವು ಯಾವುದನ್ನು ಉಳಿಸಿಕೊಳ್ಳಬೇಕು ಮತ್ತು ಬೇಡ ಎನ್ನುವುದನ್ನು ಸ್ಪಷ್ಟವಾಗಿ ನಿರ್ಧರಿಸಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ನಿಮ್ಮ ಗುರಿಗೆ ಹಾದಿಯು ಸ್ಪಷ್ಟವಾಗಿ ಇರದೇ ಹೋಗಬಹುದು. ಎಲ್ಲ ಕಾರ್ಯಗಳಿಗೆ ಸಂಬಂಧಿಸಿದ ಒಟ್ಟು ಫಲಿತಾಂಶ ಸಾಧಾರಣವಾಗಿರುವುದು. ನಿಮ್ಮ ಜಾಣ್ಮೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಕೆಲವು ಸಲಹೆಯನ್ನು ಪಡೆಯುವಿರಿ. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದೇ ಹೋದೀತು. ಸಹೋದರರು ನಿಮಗೆ ಸಹಕಾರವನ್ನು ಕೊಡುವರು. ಹಳೆಯ ರೋಗವು ಮತ್ತೆ ಕಾಣಿಸಿಕೊಂಡರೆ ಕಷ್ಟವಾಗುವುದು. ಅನಿರೀಕ್ಷಿತ ಸುದ್ದಿಯು ನಿಮ್ಮ ಮನಸ್ಸಿಗೆ ನೋವನ್ನು ಉಂಟುಮಾಡಬಹುದು. ನೇರ ಮಾತಿನಿಂದ ವ್ಯಾಪರಕ್ಕೆ ತೊಂದರೆ ಉಂಟಾಗಬಹುದು.
ಮೀನ ರಾಶಿ: ಇನ್ನೊಬ್ಬರ ದಯೆಯಿಂದ ಜೀವಿಸುವುದು ಇಷ್ಡವಾಗದು. ಇಂದು ನಿಮಗೆ ಲಾಭ ನಷ್ಟಗಳ ವಿವೇಚನೆ ಅಧಿಕವಾಗಿರುವುದು. ಪ್ರಾಪಂಚಿಕ ಸುಖದ ಮೇಲೆ ಆಸಕ್ತಿಯು ಕಡಿಮೆ ಆದೀತು. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದೆ. ದ್ವೇಷಿಸುವವರನ್ನು ಇಷ್ಟಪಡುವಿರಿ. ಶತ್ರುಗಳ ಉಪಟಳವು ನಿಮ್ಮನ್ನು ಕುಂಠಿತಗೊಳಿಸೀತು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ವೇತನದಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಸೂಕ್ಷ್ಮವಾಗಿ ನಡೆಸಬೇಕಾದೀತು. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಿಯುಂಟುಮಾಡುವುದು. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳಬೇಕಾಗುವುದು. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ಮನಸ್ಸಿಗೆ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿಕೊಂಡು ಮುಂದುವರಿಯುವುದು ಉತ್ತಮ. ಅನಗತ್ಯ ಹಸ್ತಕ್ಷೇಪದಿಂದ ನಿಮ್ಮ ಗೌರವಕ್ಕೇ ತೊಂದರೆ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.