AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಕಲಾವಿದರಿಗೆ ಅವಕಾಶದ ಬಾಗಿಲು ತೆರೆದುಕೊಳ್ಳಬಹುದು

3 ಮಾರ್ಚ್​​​ 2025: ಸೋಮವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಹಾಗಾದರೆ ಮಾರ್ಚ್ 3ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಕಲಾವಿದರಿಗೆ ಅವಕಾಶದ ಬಾಗಿಲು ತೆರೆದುಕೊಳ್ಳಬಹುದು
ಕಲಾವಿದರಿಗೆ ಅವಕಾಶದ ಬಾಗಿಲು ತೆರೆದುಕೊಳ್ಳಬಹುದು
TV9 Web
| Edited By: |

Updated on: Mar 03, 2025 | 12:12 AM

Share

ಬೆಂಗಳೂರು, ಮಾರ್ಚ್​ 02: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಶುಕ್ಲ / ಬ್ರಹ್ಮ, ಕರಣ : ವಣಿಜ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:18 – 09:47, ಯಮಘಂಡ ಕಾಲ 11:16 – 12:45, ಗುಳಿಕ ಕಾಲ 14:13 – 15:42.

ತುಲಾ ರಾಶಿ: ನಿಮಗೆ ಹಿಂದೆ‌ ಮಾಡಿದ ಹೂಡಿಕೆಗಳು ಇಂದು ಪ್ರಯೋಜನಕ್ಕೆ ಬರಲಿದ್ದು, ಅದನ್ನು ಮತ್ತೆಲ್ಲಿಯಾದರೂ ಹಾಕುವ ಬಗ್ಗೆ ಯೋಜನೆ ತಯಾರಾಗಲಿದೆ. ಮಕ್ಕಳ‌ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು. ಯಾವುದೇ ಸವಾಲುಗಳನ್ನು ಧೈರ್ಯದಿಂದ ಎದುರಿಸಿ. ನಿಮ್ಮ ಭಯವೇ ಶಕ್ತಿಯನ್ನು ಬೇಕಾದ ಶಕ್ತಿಯನ್ನು ಕೊಡದೆ ಕುಗ್ಗಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಅಧಿಕವಾಗಿ ಕೊಡುವುದು ಒಳ್ಳೆಯದಲ್ಲ. ಕೋಪ ಮೇಲೆ ನಿಯಂತ್ರಣವನ್ನು ಕಾಪಾಡಿಕೊಳ್ಳಿ. ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ನೀವು ಪ್ರೀತಿಪಾತ್ರರಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರದ ಚಿಂತೆ ದೂರವಾಗಲಿದೆ. ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಹಾಸಿಗೆ ಇರುವಷ್ಟು ಕಾಲು ಚಾಚಿದರೆ ಸುಖ. ಆಪತ್ಕಾಲಕ್ಕೆ ಬೇಕಾದ ಹಣವನ್ನು ತೆಗೆದಿರಿಸುವಿರಿ. ಸ್ತ್ರೀಯರು ಆಭರಣಗಳನ್ನು ಜತನದಿಂದ ಇರಿಕೊಳ್ಳಿ. ಚರಾಸ್ತಿಯು ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು.

ವೃಶ್ಚಿಕ ರಾಶಿ: ನೀವು ವಾಸ್ತವಕ್ಕೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಮಾತುಗಳನ್ನು ಆಡುವುದು ಮುಖ್ಯ. ಭಯವನ್ನು ದೂರಮಾಡಿಕೊಳ್ಳಲು ಬೇಕಾದ ಮನೋಭೂಮಿಕೆಯನ್ನು ತಯಾರು ಮಾಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ಅಜಾಗರೂಕತೆ ಇರುವುದು. ನಿರುದ್ಯೋಗ ದೂರವಾಗುತ್ತದೆ. ವ್ಯಾಪಾರ ಪ್ರವಾಸ ಯಶಸ್ವಿಯಾಗಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಯಾರಿಂದ ಬಂದರೂ ಉಡುಗೊರೆಗಳನ್ನು ಸ್ವೀಕರಿಸುವಿರಿ. ಅಪಾಯ ಸೂಚನೆಯನ್ನು ಧಿಕ್ಕರಿಸಲೊಲ್ಲಿರಿ. ಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ನಿಮಗೆ ಸವಾಲಿನ ಸವಾಲಿನ ಸಂಗತಿಯಾಗಿದೆ. ಸಂಗಾತಿಯ ಮಾತಿನ ಬಗ್ಗೆ ನಿಮಗೆ ಪೂರ್ಣ ನಂಬಿಕೆ‌ ಇರದು. ಕೃಷಿಯ ವ್ಯಾಪಾರದಲ್ಲಿ ಹಿನ್ನಡೆಯನ್ನು ಕಾಣಬೇಕಾಗುವುದು. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ನಿರ್ದಿಷ್ಟ ಕ್ರಮವನ್ನು ಅಳವಡಿಸಿಕೊಂಡು ಉದ್ಯಮವನ್ನು ಕ್ರಮಬದ್ಧವಾಗಿಸಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗಲಿದೆ.

ಧನು ರಾಶಿ: ಇಂದು ಯಾವುದೇ ಹಿಂಜರಿಕೆಯಿಲ್ಲದೆ ನಿಮ್ಮ ತೀರ್ಮಾನದಂತೆ ಮುಂದಿನ ಹೆಜ್ಜೆಯನ್ನು ಇಡುವಿರಿ. ಆತ್ಮವಿಶ್ವಾಸದ ಕೊರತೆಯಿಂದ ಕಾರ್ಯಗಳು ಸಂಕೀರ್ಣವಾಗುವುದು. ನಿಮ್ಮ ಪ್ರಗತಿಗೆ ಅಡ್ಡಿಯಾಗಲು ನಿಮ್ಮ ದ್ವಂದ್ವ ಮನಸ್ಸು ಕಾರಣವಾಗಬಹುದು. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸ ಇರುತ್ತದೆ. ಪೂರ್ವ ಕರ್ಮಗಳು ಫಲ ನೀಡುವುದು ನಿಮ್ಮ ಅನುಭವಕ್ಕೆ ಬಂದರೂ ಒಪ್ಪಿಕೊಳ್ಳಲಾರಿರಿ. ಕುಟುಂಬದಲ್ಲಿ ಆಹ್ಲಾದಕರ ವಾತಾವರಣ ಇರುತ್ತದೆ. ವ್ಯಾಪಾರದಲ್ಲಿ ಅಪೇಕ್ಷಿತ ಲಾಭ ದೊರೆಯಲಿದೆ. ಇಂದು ನಿಮ್ಮ ಕೆಲಸಕ್ಕೆ ಇತರರ ಹಸ್ತಕ್ಷೇಪವು ಇರಲಿದ್ದು ಅದನ್ನು ಸಹಿಸುವುದು ಆಗದು. ನಿಮ್ಮ ಸ್ವಾಭಿಮಾನವನ್ನು ಎಲ್ಲ ಕಡೆಗಳಲ್ಲಿ ಪ್ರದರ್ಶಿಸಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಣಕಾಸಿನ ವ್ಯವಹಾರದ ಪ್ರತಿನಿಧಿಗಳು ಅಂದುಕೊಂಡ ಕೆಲಸವನ್ನು ಸಾಧಿಸಿಕೊಳ್ಳುವರು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ.

ಮಕರ ರಾಶಿ: ಇಂದು‌ ನಿಮ್ಮ ಅನುಮಾನದ ಮನಸ್ಸನ್ನು ಕಡಿಮೆ‌ಮಾಡಿಕೊಳ್ಳುವುದು ಉತ್ತಮ. ಇಲ್ಲವಾದರೆ ನಿಮ್ಮ ಮನಸ್ಸು ಅತಿಯಾದ ಚಾಂಚಲ್ಯವನ್ನು ಇಟ್ಟುಕೊಳ್ಳುವುರು. ಉದ್ಯಮಿಗಳು ಇಂದು ಆಪ್ತ ಸ್ನೇಹಿತರ ಸಹಾಯದಿಂದ ಆರ್ಥಿಕ ಲಾಭವನ್ನು ಪಡೆಯಬಹುದು. ಬಹಳ ದಿನಗಳ ಅನಂತರ ಅತಿಥಿಗಳ ಆಗಮನ ಇರುತ್ತದೆ. ನೀವು ಯಾರಿಂದಲಾದರೂ ಉತ್ಸಾಹ ಬರುವ ಮಾಹಿತಿಯನ್ನು ಪಡೆಯುವಿರಿ. ಸ್ವಾಭಿಮಾನ ಹಾಗೇ ಉಳಿಯುತ್ತದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುವುದು. ಮಕ್ಕಳ ಪ್ರಗತಿಯಲ್ಲಿ ಸಂತೋಷಪಡಲು ಸಾಧ್ಯ. ನಿಮ್ಮ ತೊಂದರೆಗಳಿಗೆ ಬೇರೆ ರೀತಿಯ ಪರಿಹಾರಕ್ಕೆ ಕಂಡುಕೊಳ್ಳುವಿರಿ. ನಿಮ್ಮ ದ್ವಂದ್ವ ಯೋಚನೆಯಿಂದ ಇಂದು ನಿಮ್ಮ ಕೆಲಸಗಳು ಹಾದಿ ತಪ್ಪಬಹುದು. ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಇಂದು ನಿಮ್ಮ ನೇತೃತ್ವದಲ್ಲಿ ಕೆಲವು ಕಾರ್ಯಗಳು ನಡೆಯುವುದು.

ಕುಂಭ ರಾಶಿ: ನಿಮ್ಮ ಸ್ವಾಸ್ಥ್ಯ, ಶುಚಿತ್ವದ ಬಗ್ಗೆ ಹೆಚ್ಚು ಆದ್ಯತೆ ಇರಲಿ. ನಿಮ್ಮ ಆದಾಯದ ನಿಜವಾದ ಸತ್ಯವು ಇಂದು ಗೊತ್ತಾಗುವುದು. ನಿಮ್ಮ ಪ್ರೀತಿಪಾತ್ರರ ಜೊತೆ ಮಧುರವಾದ ಕ್ಷಣಗಳನ್ನು ಹಂಚಿಕೊಳ್ಳುವಿರಿ. ಶತ್ರುಗಳು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸುವರು. ಕಳೆದುಕೊಂಡ ವಸ್ತುವಿನ ಚಿಂತೆಯನ್ನು ನೀವು ಬಿಡುವುದು ಕಷ್ಟವಾದೀತು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ವ್ಯಾಪಾರದ ನಿಮಿತ್ತ ಹೊರಗೆ ಹೋಗಬೇಕಾಗಬಹುದು. ಮಾತಿನಲ್ಲಿ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಿ. ಆರಾಮಾಗಿ ಹಣ ಗಳಿಸಲಾಗುವುದು. ಅನಗತ್ಯ ಖರ್ಚುಗಳು ಒಂದಾದಮೇಲೆ ಒಂದು ಬರಲಿದ್ದು ಕಷ್ಟವಾದೀತು. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಔಷಧಗಳ ವ್ಯತ್ಯಾಸದಿಂದ ಮತ್ತೇನಾದರೂ ಆದೀತು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸಮಯವು ಎಷ್ಟೇ ಇದ್ದರೂ ಕೆಲಸವನ್ನು ಮಾಡಿಕೊಳ್ಳಲಾಗದು.

ಮೀನ ರಾಶಿ: ನಿಮಗೆ ಸಂತರಿಗೆ ಸಮನಾದ ವ್ಯಕ್ತಿಗಳ ಸಹವಾಸ ಸಿಗಲಿದೆ. ಇದರಿಂದ ನಿಮ್ಮ ಮನಸ್ಸು ಸಕಾರಾತ್ಮಕವಾಗಿ ಬದಲಾವಣೆಯನ್ನು ಪಡೆಯುವುದು. ದಿನದಲ್ಲಿ ಬರುವ ಹಣಕಾಸಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ಅನಾವಶ್ಯಕ ಮಾತುಗಳಿಂದ ಮೌನವಾಗಿರುವುದು ತೊಂದರೆಗಳಿಂದ ದೂರ ಉಳಿಯಬಹುದು. ಪ್ರಣಯದಲ್ಲಿ ಇಂದು ಸಮಯ ಕಳೆಯಲಾಗುವುದು. ನಿಮ್ಮ ಶ್ರಮಕ್ಕೆ ಫಲವನ್ನು ಇಂದೇ ನಿರೀಕ್ಷಿಸಬೇಡಿ. ಕಾರ್ಯಯಿಂದ ಸಂತಸವಿರುತ್ತದೆ. ವ್ಯಾಪಾರದಲ್ಲಿ ಯಾವುದೇ ಉದ್ವೇಗವಿಲ್ಲದೇ ಚೆನ್ನಾಗಿ ನಡೆಯುತ್ತದೆ. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಇಂದಿನ ಬಹುಪಾಲು ಸಮಯವನ್ನು ಅನ್ಯ ಚಿಂತನೆಯಲ್ಲಿ ಕಳೆಯುವಿರಿ. ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು.