Horoscope: ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿ, ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ
1 ಫೆಬ್ರವರಿ 2025: ಶನಿವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ಹಾಗಾದರೆ ಫೆಬ್ರವರಿ 1ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಚತುರ್ಥೀ ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಪರಿಘ, ಕರಣ : ಗರಜ, ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:20 – 12:46, ಮಘಂಡ ಕಾಲ 15:38 – 17:04, ಗುಳಿಕ ಕಾಲ08:28 – 09:54.
ತುಲಾ ರಾಶಿ: ನಿಮ್ಮ ಮಾತು ಆಹ್ಲಾದತೆಯನ್ನು ಉಂಟುಮಾಡಲಿ. ಪ್ರಾಮಾಣಿಕತೆಯನ್ನು ನೀವು ಬಿಡದೇ ಮುಂದುವರಿಸಿ. ಭೂಮಿಯ ವ್ಯವಹಾರಕ್ಕೆ ಯಾರನ್ನಾದರೂ ಸಹಾಯಕರನ್ನು ಪಡೆಯುವಿರಿ. ಸ್ವಂತಿಕೆಯನ್ನು ಬೆಳೆಸಿಕೊಳ್ಳುವ ಕಡೆ ನಿಮ್ಮ ಪ್ರಯತ್ನವಿರಲಿ. ದುಃಖವನ್ನು ಕಳೆಯಲು ದುರಭ್ಯಾಸಕ್ಕೆ ಹೋಗಬಹುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಸಹೋದ್ಯೋಗಿ ಮಿತ್ರರ ಜೊತೆ ಮಸ್ತಿಯಲ್ಲಿ ಕಾಲ ಕಳೆಯುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಕಾರ್ಯದ ಒತ್ತಡದಿಂದ ಪ್ರೀತಿಯು ಸಡಿಲಾಗುವುದು. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು. ಮಕ್ಕಳ ಭವಿಷ್ಯಕ್ಕೆ ಹಣವನ್ನು ಇಡುವಿರಿ.
ವೃಶ್ಚಿಕ ರಾಶಿ: ವಿವಾಹಕ್ಕೆ ಎಲ್ಲರಿಂದ ಮಾರ್ಗದರ್ಶನ ಪಡೆದು ಅಂತಿಮವಾಗಿ ಒಪ್ಪುವಿರಿ. ಆತುರದ ತೀರ್ಮಾನದಿಂದ ಹಣವನ್ನು ನಷ್ಟ ಮಾಡಿಕೊಳ್ಳುವಿರಿ. ಎಲ್ಲಿಗಾದರೂ ಮಕ್ಕಳನ್ನು ಕರೆದುಕೊಂಡು ಹೋಗಲಿದ್ದೀರಿ. ಅವರ ಬಗ್ಗೆ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಪಾಲುದಾರರ ಜೊತೆ ದೂರಪ್ರಯಾಣ ಹಾಗೂ ಮುಂದಿನ ಯೋಜನೆಯ ಬಗ್ಗೆ ಚರ್ಚೆ. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಸತ್ಯವನ್ನು ಮುಚ್ಚಿಟ್ಟರೂ ಯಾವುದೋ ಸಂದರ್ಭದಲ್ಲಿ ಸ್ಫೋಡವೇ ಆಗುವುದು. ಸಂಗಾತಿಯ ಮಾತುಗಳು ನಿಮ್ಮ ಅಭಿಮಾನಕ್ಕೆ ತೊಂದರೆ ಕೊಡಬಹುದು. ನೀವು ಅಪಮಾನವನ್ನೂ ನುಂಗಿಕೊಂಡು ಕಾರ್ಯದಲ್ಲಿ ಮಗ್ನರಾಗಬೇಕಾಗುವುದು. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ನಿರುದ್ಯೋಗದ ಭೀತಿ ಕಾಣಿಸುವುದು.
ಧನು ರಾಶಿ: ನಿಮಗೆ ಇಂದು ಬಂಧನದಿಂದ ಮುಕ್ತರಾದಂತಹ ಅನುಭವ ಸಿಗುವುದು. ವಿರೋಧಿಗಳು ನಿಮ್ಮನ್ನು ಯಾವುದಾದರೂ ಕೆಲಸದಲ್ಲಿ ಸಿಕ್ಕಿಸಬಹುದು. ನಂಬಿಕೆ ಬರುವಂತಹ ಮಾತುಗಳನ್ನಾಡಿ ಕೆಲಸವನ್ನು ಸಿದ್ಧಿಸಿಕೊಳ್ಳುವಿರಿ. ಕಾನೂನಿನ ಬಗ್ಗೆ ನಿಮಗೆ ಸರಿಯಾದ ಜ್ಞಾನವಿರಲಿ. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ನಿಮ್ಮ ವಿರೋಧಿಗಳ ಬಗ್ಗೆ ನೀವು ಯೋಚಿಸುವ ಅಗತ್ಯವಿಲ್ಲ. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಬಂಧುಗಳಿಂದ ಆದ ಮನಸ್ತಾಪವನ್ನು ಮರೆಯಲಾರಿರಿ. ನಿಮ್ಮ ಮಾತಿಗೆ ಸಂಗಾತಿ ಸಿಟ್ಟಾಗುವರು. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು. ನಿಮ್ಮ ಮುಂದಿರುವ ಆಯ್ಕೆಯನ್ನು ನಿರ್ಧಿರಿಸಲಾಗದು. ಸಂತಾನದ ಖುಷಿಯು ಇರಲಿದೆ. ಸಹೋದರರ ಬಗ್ಗೆ ನಿಮ್ಮಲ್ಲಿ ನಕಾರಾತ್ಮಕ ಗುಣಗಳು ಕಾಣಿಸಿಕೊಳ್ಳಬಹುದು.
ಮಕರ ರಾಶಿ: ದೂರ ಪ್ರಯಾಣದಲ್ಲಿ ಭೀತಿ ಎದುರಾಗಬಹುದು. ಕೆಲವು ಅನುಭವಿಗಳ ತಜ್ಞತೆಯನ್ನು ಬಳಿಸಿಕೊಳ್ಳಿ. ಕಾರ್ಯಕ್ರಮದಲ್ಲಿ ದುಂದುವೆಚ್ಚದಂತೆ ಕೆಲವು ತೋರೀತು. ವಿವಾದಗಳನ್ನು ಮಾಡುವ ಸಂದರ್ಭವು ಬಂದರೂ ಅದರಿಂದ ದೂರವಿರಿ. ಭೂಮಿಯ ಮೇಲೆ ಹೂಡಿಕೆ ಮಾಡುವಿರಿ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದು. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ಮಹಾತ್ಮರ ದರ್ಶನದಿಂದ ಮನಸ್ಸಿಗೆ ನೆಮ್ಮದಿ. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ವ್ಯಾವಹಾರಿಕ ವಿಭಾಗದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿಗೆ ಚಟುವಟಿಕೆಗಳಲ್ಲಿ ಸಂತೋಷ ಕಾಣುವಿರಿ. ನಿಮಗೆ ಸಂಬಂಧಿಸಿದ ಕಾರ್ಯವನ್ನು ಮಾತ್ರ ಮಾಡಿ.
ಕುಂಭ ರಾಶಿ: ಸದ್ಯೋ ಭವಿಷ್ಯತ್ತು ನಿಮ್ಮ ಕಣ್ಣಿಗೆ ಕಟ್ಟಿದಂತೆ ಇರಬಹುದು. ಹಲವು ದಿನಗಳ ಯೋಜನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿ ಮುನ್ನಡೆಸುವಿರಿ. ವೇತನದ ವಿಚಾರದಲ್ಲಿ ಘರ್ಷಣೆಯಾದೀತು. ಪ್ರಯಾಣದಿಂದ ಆಯಾಸಗೊಂಡು ವಿಶ್ರಾಂತಿ ಪಡೆಯುವಿರಿ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಕುಟುಂಬವನ್ನು ಸಮಾಧಾನವಾಗಿ ಇಟ್ಟುಕೊಂಡು ಮುನ್ನಡೆಸುವಿರಿ. ನೌಕರರನ್ನು ಉದ್ಯಮದಲ್ಲಿ ಕಡಿಮೆ ಮಾಡಿಕೊಳ್ಳಬೇಕಾಗುವುದು. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಉತ್ಸಾಹದ ಭರದಲ್ಲಿ ಏನ್ನಾದರೂ ಮಾಡಿಕೊಂಡೀರ. ಇಂದು ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ಹೆಚ್ಚು ಮಾಡುವಿರಿ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು. ಪರರಕಾರ್ಯಕ್ಕೆ ಸಹಾಯ ಮಾಡಲಿದ್ದೀರಿ.
ಮೀನ ರಾಶಿ: ನಿಮ್ಮ ಕಾರ್ಯವು ಫಲ ಕೊಡದೇ ಇರಬಹುದು. ಆದರೆ ಪ್ರಯತ್ನವನ್ನು ನಿಲ್ಲಿಸುವುದು ಬೇಡ. ನಿಮ್ಮ ಸಾಮಾಜಿಕ ವಲಯವು ವಿಸ್ತಾರವಾಗಿ ಉದ್ಯಮಕ್ಕೆ ಪೂರ್ಕವಾಗಲಿದೆ, ಸಾಹಿತಿಗಳಿಗೆ ಅವಕಾಶಗಳು ಸಿಕ್ಕಿದ್ದು ಅದನ್ನು ಉಪಯೋಗಿಸಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ತಾಯಿಯ ಜೊತೆ ವಾಗ್ವಾದ ನಡೆಸುವಿರಿ. ಅನಂತರ ಅದಕ್ಕೆ ಬೇಸರಗೊಳ್ಳುವಿರಿ. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ನಂಬಿಕೆಯು ಹುಸಿಯಾದ ಕಾರಣ ಪಶ್ಚಾತ್ತಾಪಪಡುವಿರಿ. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು.