AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಕಛೇರಿಯಲ್ಲಿ ದಿನದಂತೆ ಎಲ್ಲವೂ ಇರದು, ಕುಟುಂಬಸ್ಥರೊಂದಿಗೆ ಅನಗತ್ಯ ವಾದ

7 ಫೆಬ್ರವರಿ​​ 2025: ಶುಕ್ರವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಯಾರನ್ನೂ ಜೊತೆಗೆ ಕರೆದುಕೊಂಡು ಹೋಗುವ ಅಭ್ಯಾಸವಿಲ್ಲ.‌ ಹಾಗಾದರೆ ಫೆಬ್ರವರಿ 7ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಕಛೇರಿಯಲ್ಲಿ ದಿನದಂತೆ ಎಲ್ಲವೂ ಇರದು, ಕುಟುಂಬಸ್ಥರೊಂದಿಗೆ ಅನಗತ್ಯ ವಾದ
ಕಛೇರಿಯಲ್ಲಿ ದಿನದಂತೆ ಎಲ್ಲವೂ ಇರದು, ಕುಟುಂಬಸ್ಥರ ಜೊತೆ ಅನಗತ್ಯ ವಾದ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 07, 2025 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಬ್ರಹ್ಮ, ಕರಣ : ಕೌಲವ, ಸೂರ್ಯೋದಯ – 07 – 00 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:20 – 12:47, ಯಮಘಂಡ ಕಾಲ 15:40 – 17:07, ಗುಳಿಕ ಕಾಲ08:27 – 09:54.

ತುಲಾ ರಾಶಿ: ಮನೆದೇವರ ದರ್ಶನಕ್ಕೆ ಕುಟುಂಬದ ಜೊತೆ ಹೋಗುವ ಯೋಚನೆ ಮಾಡಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಹೊಸ ಕೌಶಲ್ಯಗಳನ್ನು ರೂಢಿಸಿಕೊಳ್ಳಿ. ಉದ್ಯೋಗಕ್ಕೆ ಬಹಳ ಉಪಯೋಗ. ಸಕಾರಾತ್ಮಕ ಮನಸ್ಥಿತಿಯೊಂದಿಗೆ ಯಶಸ್ಸನ್ನು ಸಾಧಿಸಲು ಪ್ರಯತ್ನಿಸುತ್ತಿರಿ. ಆನಾರೋಗ್ಯವನ್ನು ನಿರ್ಲಕ್ಷಿಸುವಿರಿ. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡುವುದಿಲ್ಲ. ಉದ್ಯೋಗವನ್ನು ಬಿಟ್ಟು ಭೂಮಿಯ ವ್ಯವಹಾರದಲ್ಲಿ ತೊಡಗಿಕೊಳ್ಳುವಿರಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ನಿಮ್ಮ ಸುತ್ತ ಅಂತಹ ವಾತಾವರಣವು ಇರುವುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ. ಮಕ್ಕಳಿಗಾಗಿ ಮಾಡಿದ ಖರ್ಚು ನಿಮಗೆ ಸಾರ್ಥಕ ಎನಿಸಬಹುದು.

ವೃಶ್ಚಿಕ ರಾಶಿ: ಯಾರ ಬಗ್ಗೆಯೂ ಗೊತ್ತಿಲ್ಲದೇ ನಿಂದನೆ ಮಾಡುವಿರಿ. ಧನಸಂಪಾದನೆಗೆಂದು ಹೋಗಿ ಧನನಷ್ಟವನ್ನು ಮಾಡಿಕೊಳ್ಳುವಿರಿ. ಗಡುವಿನೊಳಗೆ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು.‌ ಮಹಿಳೆಯರು ಸಮಾರಂಭಗಳಿಗೆ ಮನೆಗೆ ಹೋಗುವ ಸಾಧ್ಯತೆ ಇದೆ. ಇಂದಿನ ಆತಂಕವನ್ನು ನೀವು ಸುಲಭವಾಗಿ ಎದುರಿಸುವಿರಿ. ಅಲ್ಪ ಹಣವನ್ನೂ ಸಾಲವಾಗಿ ಪಡೆಯುವುದನ್ನು ತಪ್ಪಿಸಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಹಲವಾರು ಅನುಭವವನ್ನು ಪಡೆದುಕೊಂಡೂ ಮತ್ತೆ ಅದೇ ತಪ್ಪನ್ನು ಮಾಡುವಿರಿ. ಇಂದು ಬಹು ದಿನಗಳ ಚಿಂತಿತ ಕಾರ್ಯವು ಫಲ ಕೊಡದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ಆಪ್ತರ ಬಗೆಗಿನ ಊಹೆಯು ವ್ಯತ್ಯಾಸವಾದೀತು. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ. ಇಂದು ಸಂಗಾತಿಯ ಪ್ರೀತಿಯನ್ನು ನೀವು ಹೆಚ್ಚು ಅನುಭವಿಸುವಿರಿ.

ಧನು ರಾಶಿ: ನಿಮಗೆ ವಿಶ್ವಾಸದ ಕೊರತೆ ಕಾಣಿಸಿಕೊಳ್ಳುವುದು. ಆಪ್ತರು ಅದನ್ನು ಪೂರ್ಣ ಮಾಡುವರು. ಕಚೇರಿಯಲ್ಲಿ ಸವಾಲಿನ ಕೆಲಸಗಳನ್ನು ಪೂರ್ಣಗೊಳಿಸಲು ಹೊಸ ತಂತ್ರವನ್ನು ಮಾಡಿ. ಕುಟುಂಬ ಸದಸ್ಯರ ಜೊತೆ ಅನಗತ್ಯ ವಾದಗಳನ್ನು ತಪ್ಪಿಸಿ. ನಿಮ್ಮ ಕಂಡು ಅಸೂಯೆ ಪಡುವವರಿಗೆ ಇನ್ನಷ್ಟು ತುಪ್ಪ ಸುರಿಯುವಿರಿ. ಕಛೇರಿಯಲ್ಲಿ ದಿನದಂತೆ ಎಲ್ಲವೂ ಇರದು. ಸಂದರ್ಭಗಳು ಪ್ರತಿಕೂಲವಾಗಿರಲಿವೆ. ಸಮಯವನ್ನು ನೋಡಿ ಕಾರ್ಯವನ್ನು ಮಾಡಿಸಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ಬೀಳಿಸಿಕೊಳ್ಳುವ ಕಲೆ ನಿಮಗೆ ತಿಳಿದುಬರುವುದು. ವ್ಯರ್ಥ ಓಡಾಟದಿಂದ ಬೇಸರವಾಗುವುದು. ನಿಮ್ಮ ಇಂದಿನ ತುರ್ತು ಕಾರ್ಯಗಳನ್ನು ಮುಂದೂಡುವಿರಿ. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಇಂದು ಯಾರ ಮಾತನ್ನೂ ಪೂರ್ಣವಾಗಿ ನಂಬಲು ಆಗದು. ಲಾಭ ಬರುವ ಕಾರ್ಯದಲ್ಲಿ ಮಾತ್ರ ಇಚ್ಛೆಯು ಇರುವುದು.

ಮಕರ ರಾಶಿ: ಇಂದು ಗೊಂದಲದಿಂದ ನಿಮಗೆ ಯಾವುದನ್ನೂ ಪೂರ್ಣವಾಗಿ ಸ್ವೀಕರಿಸಲಾಗದು. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಹಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದ ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಮನಸ್ಸಿನ ಚಾಂಚಲ್ಯವನ್ನು ಧ್ಯಾನದಿಂದ ಸರಿ ಮಾಡಿಕೊಳ್ಳಿ. ತಪ್ಪನ್ನು ಮರೆಮಾಚುವಿರಿ. ಆದರೂ ಗೊತ್ತಾಗುವುದು. ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಬಹುದು. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಇಂದು ಸ್ತ್ರೀಯರಿಗೆ ಅನಿರೀಕ್ಷಿತ ತೊಂದರೆಗಳು ಇರಲಿದೆ. ಪಾಲಿಗೆ ಬಂದಿದ್ದು ಪಂಚಾಮೃತವಾಗಲಿದೆ. ನೆರೆಹೊರೆಯರ ಜೊತೆ ವಾಗ್ವಾದ‌ ಮಾಡುವಿರಿ. ಬಾಡಿಗೆ ಮನೆಯ ಮಾಲಿಕರಿಂದ ನಿಮಗೆ ಏನಾದರೂ ಆಗಬಹುದು. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇದೆ.‌ ಉದ್ಯೋಗದ ಮಿತ್ರರು ಇಂದು ಸಿಗವರು. ಅಂಗಳವನ್ನೇ ಹಾರಲು ಬಾರದವ ಆಕಾಶವನ್ನು ಹಾರಿದಂತೆ ಆಗುವುದು.

ಕುಂಭ ರಾಶಿ: ಇಂದು ಮಾತನಾಡುವ ಇಚ್ಛಾಶಕ್ತಿಯನ್ನು ಕಳೆದುಕೊಳ್ಳುವಿರಿ. ಪರಸ್ಥಳದ ನೋವನ್ನು ನೀವು ನಿಮ್ಮವರ ಜೊತೆ ಹಂಚಿಕೊಳ್ಳುವಿರಿ. ಅಧಿಕಾರಿಗಳ ಜೊತೆ ಸಭ್ಯ ವರ್ತನೆ ಇರಲಿ. ಕೆಲಸದ ಸ್ಥಳದಲ್ಲಿ ಅನಗತ್ಯ ವಾದಗಳನ್ನು ಸೃಷ್ಟಿಯಾಗುವುದು. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅತಿಯಾದ ಕೋಪ ಬೇಡ, ಶಾಂತ ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಿದೇಶೀ ವ್ಯವಹಾರದಿಂದ ನಿಮಗೆ ಲಾಭವಿದೆ. ಕುಟುಂಬದಲ್ಲಿ ನೆಮ್ಮದಿಯ ತಂದುಕೊಳ್ಳುವಿರಿ. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಅತಿಯಾದ ತಮಾಷೆಯು ಗಂಭೀರರೂಪವನ್ನು ಪಡೆಯಬಹುದು. ಹಣದ ಮೂಲವನ್ನು ಹುಡುಕುವ ಪ್ರಯತ್ನವು ಪೂರ್ಣ ಫಲಿಸದು. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ ಮುಗಸಿಕೊಳ್ಳುವಿರಿ. ಬಹಳ ದಿನಗಳ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವುದು.‌ ಸಾಹಸದ‌ ಕಾರ್ಯಗಳಲ್ಲಿ ಜಾಗರೂಕತೆ ಅವಶ್ಯಕ.

ಮೀನ ರಾಶಿ: ಇಂದು ನಿಮಗಾಗುವ ಅಲ್ಪ‌ಲಾಭವೂ ನೆಮ್ಮದಿಯ ಫಲವನ್ನು ಕೊಡವುದು. ನೀವು ಕೆಲಸದಲ್ಲಿ ತೊಂದರೆ ಬಂದು, ಇದು ನಿಮ್ಮ ಕಾರ್ಯಕ್ಷಮತೆಯ ಮೇಲೆ ವಿಪರೀತ ಪರಿಣಾಮವನ್ನು ಬೀರುತ್ತದೆ. ಅಜಾಗರೂಕತೆಯಿಂದ ವ್ಯವಹರಿಸಿ ಹಣ ನಷ್ಟವಾಗುವುದು. ಸಹೋದರ ನಡುವೆ ನಡೆಯುತ್ತಿರುವ ಹಣಕಾಸಿನ ವಿವಾದಗಳನ್ನು ಪರಿಹರಿಸಲು ಸಾಧ್ಯ. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಟದಿಂದ ನೀವು ಸಿಟ್ಟಾಗುವಿರಿ. ನಿಮ್ಮ ನಿರೀಕ್ಷೆಯ ಗುರಿಯನ್ನು ತಲುಪುವುದು ಕಷ್ಟವಾಗಬಹುದು. ನಿಮ್ಮ ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಅಧಿಕವಾಗಿರುವುದು.‌ ಯಾರನ್ನೂ ಜೊತೆಗೆ ಕರೆದುಕೊಂಡು ಹೋಗುವ ಅಭ್ಯಾಸವಿಲ್ಲ.‌ ಒಂಟಿಯಾಗಿ ಏನನ್ನೂ ಮಾಡಬಲ್ಲಿರಿ. ಬಂಧುಗಳ ಸಲಹೆಯು ನಿಮ್ಮನ್ನು ದಾರಿ ತಪ್ಪಿಸಬಹುದು. ಆರ್ಥಿಕ ವ್ಯವಹಾರವನ್ನು ಮೊದಲೇ ಸರಿಮಾಡಿಕೊಳ್ಳುವುದು ಉತ್ತಮ. ಪ್ರೇಮದಲ್ಲಿ ದುಡುಕಿ, ಒಂಟಿಯಾಗುವಿರಿ.

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್