
ಬೆಂಗಳೂರು, ಫೆಬ್ರವರಿ 26: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಪರಿಘ, ಕರಣ : ಶಕುನಿ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:14 – 15:42, ಯಮಘಂಡ ಕಾಲ 06:52 – 08:20, ಗುಳಿಕ ಕಾಲ 09:49 – 11:17.
ತುಲಾ ರಾಶಿ: ಕೈಮೀರಿದ ಪರಿಸ್ಥಿಯಲ್ಲಿ ಹತಾಶೆ ಕಾಣಿಸುವುದು. ನೂತನ ಗೃಹದ ಪ್ರವೇಶಕ್ಕೆ ನಿಮ್ಮ ಎಲ್ಲವೂ ಕೇಂದ್ರೀಕೃತವಾಗಿದೆ. ಸದ್ದಿಲ್ಲದೇ ನಿಮಗೆ ಅಗತ್ಯವಿರುವ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ವ್ಯಾವಹಾರಿಕ ಮನಃಸ್ಥಿತಿಯಿಂದ ಎಲ್ಲವನ್ನೂ ಅಳೆಯುವುದು ಬೇಡ. ಆಶಾವಾದಕ್ಕಿಂತ ವಾಸ್ತವವನ್ನು ರೂಢಿಸಿಕೊಳ್ಳಿ. ನಿಮ್ಮ ಅಸಹಜ ನಡೆಯನ್ನು ನಿಮ್ಮವರು ಒಪ್ಪಿಕೊಳ್ಳಲಾರರು. ಯಾರ ಜೊತೆಗೂ ವೈರವನ್ನು ಕಟ್ಟಿಕೊಳ್ಳದೇ ಹೊಂದಾಣಿಕೆಯಿಂದ ವ್ಯವಹರಿಸಿ. ಸುಲಭದ ಕೆಲಸವನ್ನು ಆದಷ್ಟು ಇಂದು ಮಾಡಿಮುಗಿಸಿಕೊಳ್ಳಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಎಲ್ಲ ಬಂಧನದಿಂದ ಬಿಡುಗಡೆ ಸಿಕ್ಕಿದಂತಹ ನೆಮ್ಮದಿ ಇರಲಿದೆ. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು.
ವೃಶ್ಚಿಕ ರಾಶಿ: ನಿಮ್ಮ ವೈಯಕ್ತಿಕ ಕಾರ್ಯಗಳನ್ನು ಮಾಡುವಷ್ಟು ಸಮಯವು ಇಂದು ನಿಮ್ಮ ಬಳಿ ಇಲ್ಲದೇ ಹೋಗಬಹುದು. ಕಾನೂನಾತ್ಮಕ ವಿಚಾರದಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವಿರಿ. ಆತ್ಮೀಯ ಬಂಧಗಳಿಗೆ ಸಮಯ ಕೊಡಲು ಆಗದೇ ವ್ಯಕ್ತಿಗಳನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮವರಿಗೆ ನಿಮ್ಮ ನಡತೆಯಲ್ಲಿ ಬದಲಾವಣೆ ಕಂಡೀತು. ಪಾಲುದಾರಿಕೆಯಲ್ಲಿ ನಿಮ್ಮ ಶ್ರಮವೇ ಹೆಚ್ಚಿರಲಿದೆ. ನಿಮಗೆ ಇಷ್ಟವಾಗದ ಜವಾಬ್ದಾರಿಗಳು ಹೇಗಾದರೂ ಮಾಡಿ ತಪ್ಪಿಸಿಕೊಳ್ಳುವಿರಿ. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಇಂದು ನೀವು ಗಟ್ಟಿ ಮನಸ್ಸಿನಿಂದ ಹೋದರೂ ಕಛೇರಿಯಿಂದ ನಿಮಗೆ ಕೆಲವು ಕಹಿ ಅನುಭವವನ್ನು ಕೊಟ್ಟೀತು.
ಧನು ರಾಶಿ: ಹಲವರು ಮಾಡಬೇಕಾದ ಕಾರ್ಯವನ್ನು ನಿಮಗೊಬ್ಬರಿಗೇ ವಹಿಸುವರು. ಧನದ ಸಂಪಾದನೆಯು ಅನಿವಾರ್ಯವಾದ ಕಾರಣ ಬರುವ ಎಲ್ಲ ಕಾರ್ಯವನ್ನೂ ಬಿಡದೇ ಮಾಡುವಿರಿ. ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳಿ. ಸಾಲವು ನಿಮ್ಮನ್ನು ಹಿಂದೇಟು ಹಾಕುವಂತೆ ಮಾಡುತ್ತದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ನಿರೀಕ್ಷಿತ ಆದಾಯವನ್ನು ಪಡೆಯಲು ವಂಚಿತರಾಗುವಿರಿ. ಶುಭ ಸಮಾಚಾರದಿಂದ ಮನಸ್ಸು ಅರಳುವುದು. ಅಶಿಸ್ತಿನಿಂದ ವರ್ತಿನೆಯ ಕಾರಣ ನಿಮಗೆ ಎಲ್ಲರಿಂದ ಅಪಮಾನವಾಗಬಹುದು. ಕೆಲವು ಕೆಲಸಗಳನ್ನು ಕೈಬಿಡುವಿರಿ. ಪ್ರೀತಿಯನ್ನು ಹೇಳಿಕೊಳ್ಳಲು ನಿಮಗೆ ಮುಜುಗರವಾಗಬಹುದು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯು ಬಂದರೂ ಸಮಯೋಚಿತವಾಗಿರಲಿ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಸಕಾರಾತ್ಮಕ ಬದಲಾವಣೆಗಳನ್ನು ಬಯಸಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.
ಮಕರ ರಾಶಿ: ನಿಮ್ಮ ನಡೆತಯು ಪ್ರಶ್ನಾತೀತ ಏನಿಸಬಹುದು. ನಿಮ್ಮ ದುರಭ್ಯಾಸವು ನಿಮಗೆ ಅಸಮಾಧಾನವಾಗಬಹುದು. ಸಂಬಂಧಿಕರಿಂದ ಅನಿರೀಕ್ಷಿತ ಆನಂದವು ಸಿಗುವುದು. ಸರ್ಕಾರದ ಕೆಲಸದಲ್ಲಿ ಪೂರ್ಣವಾದ ಸಹಕಾರ ಸಿಗದು. ಕಛೇರಿಯಲ್ಲಿ ನಿಮಗೆ ವಹಿಸಿದ ಕೆಲಸವನ್ನು ಮಾಡದೇ ಮೇಲಧಿಕಾರಿಗಳು ಸಿಟ್ಟುಗೊಂಡಾರು. ಹಂಚಿಕೊಳ್ಳುವಿಕೆಯನ್ನು ರೂಢಿಸಿಕೊಳ್ಳಬೇಕಾಗುವುದು. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ. ಸಂಗಾತಿಯ ಮಾತುಗಳು ನಿಮಗೆ ಖುಷಿ ಕೊಟ್ಟೀತು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ. ಉತ್ತಮ ಭೂಮಿಯನ್ನು ಖರೀದಿಸಲು ನಿಮಗೆ ಅವಕಾಶಗಳು ಸಿಗಬಹುದು. ನಿಮ್ಮ ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಕೌಟುಂಬಿಕ ಮನಸ್ತಾಪದಿಂದ ಲಾಭದಾಯಕ ಯೋಜನೆ ಕೈತಪ್ಪಬಹುದು. ನಿಮ್ಮವರ ಅನಾರೋಗ್ಯದ ಕಾರಣ ಓಡಾಟ ಮಾಡಬೇಕಾದೀತು. ಒಂಟಿಯಾಗಿ ಎಲ್ಲಿಗಾದರೂ ದೂರ ಹೋಗುವಿರಿ.
ಕುಂಭ ರಾಶಿ: ಖಾಸಗಿ ಸಂಸ್ಥೆಗಳು ನಿಮ್ಮನ್ನು ಆಹ್ವಾನಿಸಬಹುದು. ಬಹಳ ಚಂಚಲದಿಂದ ಇರುವ ಮನಸ್ಸಿಗೆ ಯಾವುದಾದರೂ ಇಷ್ಟವಾದ ವಿಷಯವನ್ನು ಕೊಟ್ಟು ಚಾಂಚಲ್ಯವನ್ನು ಕಡಿಮೆ ಮಾಡಿಕೊಳ್ಳಿ. ದೂರದ ಊರಿಗೆ ಪ್ರಯಾಣ ಮಾಡುವ ಸಂದರ್ಭವು ಬರಲಿದ್ದು, ಅಲ್ಲಿ ಇಷ್ಟಮಿತ್ರರ ಸಹವಾಸವು ದೊರೆಯುವುದು. ತಪ್ಪಾದರೂ ಕೆಲಸವನ್ನು ಮಾಡುವುದು ಅನಿವಾರ್ಯ. ಜೀವನ ನಿರ್ವಹಣೆಗೆ ಎಲ್ಲದರಿಂದ ದೂರವಿರಬೇಕಾಗುವುದು. ನಿಮ್ಮವರನ್ನು ಕಳೆದುಕೊಳ್ಳುವ ಭೀತಿಯು ಬರಬಹುದು. ರಾಜಕೀಯದ ಒತ್ತಡವು ಅಧಿಕಾರದಲ್ಲಿ ಇದ್ದವರಿಗೆ ಬರಲಿದೆ. ನಿಮ್ಮನ್ನು ಎಲ್ಲ ರೀತಿಯಿಂದ ಅಣಕಿಸಿಯಾರು. ಕಾರ್ಯದಲ್ಲಿ ಆಗುವ ತೊಂದರೆಗಳಿಗೆ ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ. ಹೂಡಿಕೆಯನ್ನು ಒತ್ತಾಯದ ಕಾರಣಕ್ಕೆ ಮಾಡುವಿರಿ. ಎಲ್ಲದರಲ್ಲಿಯೂ ತಪ್ಪನ್ನು ಹುಡುಕುತ್ತ ಕಾಲಹರಣ ಮಾಡುವುದು ಬೇಡ. ಮನೆ ಹುಡುಕಾಟಕ್ಕೆ ತಿರುಗಾಟ ಮಾಡಲಿದ್ದೀರಿ. ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನದ ಕಡೆ ಗಮನಕೊಡಬೇಕಸದೀತು.
ಮೀನ ರಾಶಿ: ಸ್ಥಾನಮಾನಕ್ಕಾಗಿ ಸಮಯವನ್ನು ಮೀರಿ ಕಾರ್ಯ ಮಾಡುವಿರಿ. ಇಂದು ನೀವು ಸಂತೋಷವಾಗಿ ಇರಲು ಹಠದ ಸ್ವಭಾವವನ್ನು ಬಿಡುವುದು ಒಳ್ಳೆಯದು. ಆರ್ಥಿಕ ವಿಷಯದಲ್ಲಿ ಸಂಗಾತಿಯ ಜೊತೆ ವಾಗ್ವಾದವು ಹೊಸ ರೂಪವನ್ನು ಪಡೆಯಬಹುದು. ದುಡಿಕಿದಷ್ಟೂ ನಿಮ್ಮ ತಂತ್ರ ವಿಫಲವಾಗುವುದು. ನಿಮ್ಮ ಬಳಿ ಸಂಘರ್ಷದ ಪರಿಹಾರಕ್ಕೆ ಬರಬಹುದು. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಭೂಮಿಯ ಮಾರಾಟದಿಂದ ಕಲಹವಾಗುವುದು. ಸಂಸಾರದ ಕಲಹಕ್ಕೆ ಮನಸ್ಸು ಕೊಡದೇ ಪ್ರಸನ್ನ ಮನಸ್ಸಿನಿಂದ ಇರುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಆರೋಗ್ಯದ ರಹಸ್ಯವನ್ನು ಇತರರಿಗೂ ತಿಳಿಸುವಿರಿ. ಪಡೆದ ಹಣಕ್ಕೆ ಅವಧಿ ಮುಕ್ತಾಯವಾಗಿದೆ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿಸಿಕೊಳ್ಳಿ. ಆಪ್ತರ ಜೊತೆ ಮಾತನಾಡಿ ನಿಮ್ಮ ಮನಸ್ಸಿನ ಭಾರವನ್ನೆಲ್ಲ ದೂರ ಮಾಡಿಕೊಳ್ಳುವಿರಿ. ನಿಮ್ಮ ನಿಯಮಗಳು ನಿಮಗೆ ತೊಂದರೆಯಾಗಬಹುದು.