Horoscope: ಉದ್ಯೋಗಕ್ಕೆ ದೂರ ಪ್ರಯಾಣ, ಸಾಲಗಾರರ ಕಾಟ ಹೆಚ್ಚಾಗಲಿದೆ
ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಡಿಸೆಂಬರ್ 07: ಇಂದು ಸ್ವಂತಿಕೆಯನ್ನು ನೀವು ಯಾವ ಸನ್ನಿವೇಶದಲ್ಲಿಯೂ ಬಿಟ್ಟುಕೊಡಲಾರಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅದೃಷ್ಟದ ಪರೀಕ್ಷೆಯು ಆಗಬಹುದು. ಹಾಗಾದರೆ ಡಿಸೆಂಬರ್ 07ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವ್ಯಾಘಾತ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:35 ರಿಂದ 10:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:49 ರಿಂದ 03:13 ರವರೆಗೆ, ಗುಳಿಕ ಕಾಲ 06:47ರಿಂದ 08:11 ರವರೆಗೆ.
ತುಲಾ ರಾಶಿ: ಯಾರಾದರೂ ಜವಾಬ್ದಾರಿಯನ್ನು ವಹಿಸಬಹುದು. ನೀವು ಯಾವ ಮಾತನ್ನು ಒಮ್ಮೆಲೆ ನಂಬುವುದಿಲ್ಲ. ರಾಜಕೀಯವಾಗಿ ಇರುವವರು ಹಿನ್ನಡೆಯನ್ನು ಅನುಭವಿಸಬೇಕಾದೀತು. ಹಿರಿಯರು ನಿಮ್ಮ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡುವಿರಿ. ಸಾಲ ಕೊಟ್ಟವರ ಎದುರು ತಲೆ ಮೆರೆಸಿಕೊಂಡು ಓಡಾಡುವಿರಿ. ರಾಜಕೀಯವಾಗಿ ಹಿನ್ನಡೆಯನ್ನು ಅನುಭವಿಸುವರು. ಹೊಸ ತಂತ್ರವನ್ನು ನೀವು ರೂಪಿಸಿಕೊಳ್ಳಬೇಕಾದೀತು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡುವುಸು. ಯಾವುದನ್ನೂ ಅತಿರೇಕ ಮಾಡಿಕೊಳ್ಳುವುದು ಬೇಡ. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡುವುದಿಲ್ಲ. ದಾಂಪತ್ಯದಲ್ಲಿ ಸಣ್ಣ ವಿರಸವು ಬರಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ತೀರ್ಮಾನ ಸರಿಯಲ್ಲ. ಅಧಿಕಾರಿಗಳನ್ನು ಮೆಚ್ಚಿಸಲು ನೀವು ಸಮಯವನ್ನು ವ್ಯರ್ಥ ಮಾಡವಿರಿ. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ ರಾಶಿ: ನೀವು ಉದ್ಯೋಗವನ್ನು ಇಂದು ಗಂಭೀರವಾಗಿ ಸ್ವೀಕರಿಸುವಿರಿ. ಇಂದಿನ ವಿವಾದಗಳು ನಿಮ್ಮ ಮನಸ್ಸನ್ನು ಕೆಡಿಸಬಹುದು. ವೃತ್ತಿಯಲ್ಲಿ ನಿಮಗೆ ಆಕಸ್ಮಿಕ ಪ್ರಶಂಸೆಯಿಂದ ಅಚ್ಚರಿಗೊಳ್ಳುವಿರಿ. ನಿಮ್ಮ ಗೌರವಕ್ಕೆ ಧಕ್ಕೆ ಬರುವ ಮಾತನ್ನು ನೀವು ಸಹಿಸಲಾರಿರಿ. ವಾಮಮಾರ್ಗದಿಂದ ಹಣವನ್ನು ಸಂಪಾದಿಸುವ ಮನಸ್ಸು ಇರಲಿದೆ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ಬಾಲ್ಯದ ನೆನಪುಗಳು ನಿಮ್ಮನ್ನು ಕಾಡುವುದು. ಬೇಗ ಸಿಟ್ಟು ಮಾಡಿಕೊಂಡರೂ ಕ್ಷಣ ಕಾಲದಲ್ಲಿ ಸರಿಯಾಗುವುದು. ತಾಯಿಯು ನಿಮಗೆ ಹಿತವಚನವನ್ನು ಹೇಳುವರು. ಆತ್ಮವಿಶ್ವಾಸದ ಕೊರತೆಯನ್ನು ಸ್ನೇಹಿತರು ತುಂಬುವರು. ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವಿರಿ. ಬಾಲ್ಯದ ಸ್ನೇಹಿತರು ನಿಮ್ಮನ್ನು ಕಂಡು ಖುಷಿಪಡುವರು. ನಮ್ಮ ವೃತ್ತಿಜೀವನವು ಹೊಸ ದಿಕ್ಕಿಗೆ ಜಾರಬಹುದು. ಕಳೆದು ಸಂದರ್ಭವನ್ನು ಪುನಃ ಸೃಷ್ಟಿಸಿಕೊಳ್ಳಲು ಪ್ರಯತ್ನಿಸುವಿರಿ.
ಧನು ರಾಶಿ: ದೊಡ್ಡ ಕಾರ್ಯದಲ್ಲಿ ಸಣ್ಣ ತಪ್ಪುಗಳು ಆಗಬಹುದು. ಅದನ್ನು ಸರಿಮಾಡಿಕೊಳ್ಳಬೇಕು. ಚಾಣಾಕ್ಷತನದಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣಮಾಡುವಿರಿ. ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವುದು. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ನಿಮ್ಮ ಮಾತಿಗೆ ಇಂದು ವಿರೋಧವು ಉಂಟಾಗುವುದು. ಅಪರಿಚರ ಜೊತೆ ವ್ಯವಹಾರವು ಸರಿಯಾಗಿ ಇರಲಿ. ತಂದೆಯ ಮೇಲೆ ನಿಮಗೆ ಬೇಸರ ಬರಬಹುದು. ನಿಮ್ಮ ಎಚ್ಚರಿಸುತ್ತ ಇರಬೇಕು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ತರಬಹುದು. ಆಸ್ತಿಯ ವಿಚಾರದಲ್ಲಿ ನಿಮ್ಮರಿಗೆ ಸುಳ್ಳು ಹೇಳಿದ್ದು ಗೊತ್ತಾಗುವುದು. ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ಬೇರೆ ದಾರಿಯನ್ನು ಹುಡುಕಿಕೊಳ್ಳುವಿರಿ. ಮನೆಯ ವಾತಾವರಣವು ನಿಮಗೆ ಹಿತಕರ ಎನಿಸದು. ವಿಶೇಷವಾದ ವಸ್ತುವನ್ನು ಕೊಳ್ಳುವಿರಿ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು. ಉದ್ಯೋಗಕ್ಕೆ ಸೇರಲು ಪ್ರಶ್ನೆಗಳ ಸುರಿಮಳೆ ಕಾಣಿಸಿಕೊಳ್ಳುವುದು.
ಮಕರ ರಾಶಿ: ಇಂದು ಸ್ವಂತಿಕೆಯನ್ನು ನೀವು ಯಾವ ಸನ್ನಿವೇಶದಲ್ಲಿಯೂ ಬಿಟ್ಟುಕೊಡಲಾರಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅದೃಷ್ಟದ ಪರೀಕ್ಷೆಯು ಆಗಬಹುದು. ಪ್ರತಿಭೆಯ ಪ್ರದರ್ಶನಕ್ಕೆ ಉತ್ತಮ ಅವಕಾಶವು ಸಿಗುವುದು. ಅದೃಷ್ಟದ ಕಾರಣ ವಂಚನೆಯಿಂದ ಜಾರಿಕೊಳ್ಳುವಿರಿ. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ. ಅಧಿಕ ಆಲೋಚನೆಯಿಂದ ಮನಸ್ಸು ದುರ್ಬಲವಾಗುವುದು. ಕಾಲು ನೋವಿಗೆ ವೈದ್ಯರ ಸಲಹೆಯನ್ನು ಭೇಟಿ ಮಾಡಿ. ನಿಮ್ಮ ದಿನಚರ್ಯೆಯನ್ನು ಬದಲಿಸಿಕೊಳ್ಳಲು ಇಷ್ಟಪಡುವಿರಿ. ಸ್ವಂತ ಉದ್ಯೋಗದಲ್ಲಿ ನಿಮಗೆ ಕೆಲವು ಕಹಿ ವಿಚಾರವು ಗೊತ್ತಾಗುವುದು. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಆಗದು. ಉದ್ಯೋಗಕ್ಕೆ ಸಂಬಂಧಿಸಿದಂತೆ ಮನೆಯಿಂದ ದೂರ ಹೋಗುವಿರಿ. ಸಮಾಜವು ನಿಮ್ಮ ಸಾಧನೆಗೆ ಮೆಚ್ಚಿಕೊಳ್ಳುವುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು.
ಕುಂಭ ರಾಶಿ: ಇಂದು ನಿಮ್ಮ ಸಂಘಡನೆ ಚೆನ್ನಾಗಿದ್ದು ಯಾರೂ ಏನೂ ಮಾಡಲಾರರು. ಇಂದು ನಿಮಗೆ ಆತ್ಮೀಯರ ಒಡನಾಡ ಅಧಿಕವಾಗಲಿದೆ. ಸಾಹಿತ್ಯಾಸಕ್ತರಿಗೆ ಹೆಚ್ಚು ಅನುಕೂಲಕರ ವಾತಾವರಣವು ಇರುವುದು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಪರರ ದುಃಖಕ್ಕೆ ಆಸರೆಯಾಗುವಿರಿ. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ ಪಡೆಯುವಿರಿ. ಆನಂದದಿಂದ ಈ ದಿನವನ್ನು ಕಳೆಯಬೇಕು ಎನಿಸುವುದು. ಅನಿರೀಕ್ಷಿತ ಪ್ರಯಾಣದಿಂದ ಸುಖವಿರಲಿದೆ. ನಿಮ್ಮ ವಿವಾಹದ ಮಾತುಕತೆ ವಿಳಂಬವಾಗಿದೆ ಎಂದು ಬೇಸರ ಆಗಬಹುದು. ಮುಖ್ಯ ದಾಖಲೆಗಳನ್ನು ಸರಿಯಾದ ಕಡೆಗಳಲ್ಲಿ ಇಟ್ಟುಕೊಳ್ಳಿ. ನಿಮಗೆ ಸರಿಯಾದ ಸಮಯದಲ್ಲಿ ಹಣವು ಸಿಕ್ಕಿರುವುದು ಖುಷಿ ಕೊಡುವುದು. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ವೃದ್ಧಿಸಲು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.
ಮೀನ ರಾಶಿ; ಇಂದು ವ್ಯವಹಾರದಲ್ಲಿನ ಸೂಕ್ಷ್ಮ ವಿಚಾರಗಳನ್ನು ವೇಗವಾಗಿ ಅರಿತುಕೊಳ್ಳಬೇಕು. ಮನೆಯಲ್ಲಿ ನಿಮಗೆ ನಿರಾಶೆಯ ಅನುಭವ ಆಗಬಹುದು. ಇಂದು ನಿಮ್ಮ ಸ್ವಭಾವವು ಕಾರಣಾಂತರದಿಂದ ಉಗ್ರವಾಗಿರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು. ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ನೀವು ಇಂದು ಅತಿಥಿಯಾಗಿ ಭಾಗವಹಿಸುವಿರಿ. ನಿಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮ್ಮಿಂದಾಗಿ ಮನೆಯಲ್ಲಿ ಇಂದು ಸಂತೋಷವು ಇರಲಿದೆ. ಕಳೆದ ದಿನಗಳನ್ನು ಒಂದೊಂದಾಗಿಯೇ ಮೆಲುಕು ಹಾಕಿಕೊಂಡು ಹಂಚಿಕೊಳ್ಳುವಿರಿ. ಬರಬೇಕಾದ ಹಣವು ವಿಳಂಬವಾಗುವುದು. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಮನೆಯ ಸಂಭ್ರಮದಲ್ಲಿ ನೀವೂ ಒಂದಾಗಿ.




