Daily Horoscope: ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆಯುವಿರಿ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಅಕ್ಟೋಬರ್​ 27: ಕಲ್ಲೆಸೆಯಬಹುದು ಯಾರಾದರೂ. ಇಂದು ನೀವು ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತವಾಗಿ ಇರಬೇಕು ಎನ್ನುವುದನ್ನು ನಿರ್ಧರಿಸುವಿರಿ. ಹೆಚ್ಚು ಖುಷಿಯಾಗಿ ಇಂದು ಇರಲಿದ್ದೀರಿ.‌ ಹಾಗಾದರೆ ಅಕ್ಟೋಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆಯುವಿರಿ
ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆಯುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 27, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಬ್ರಹ್ಮ​​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:38 ರಿಂದ ಸಂಜೆ 08:05 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:16 ರಿಂದ 03:44ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:11 ರಿಂದ 04:38 ರವರೆಗೆ.

ತುಲಾ ರಾಶಿ; ಸಮಸ್ಯೆಗಳನ್ನು ಹುಡುಕುವ ಪ್ರಯತ್ನವನ್ನು ಮೊದಲು ಮಾಡಿ. ಇಂದು ಕುರುಡ ಕತ್ತವನ್ನು ಹೊಸೆದಂತೆ ಆಗಬಹುದು. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ದಾನವಾಗಿ ಕೊಟ್ಟಿದ್ದನ್ನು ಎಲ್ಲಿಯೂ ಹೇಳಲಾರಿರಿ. ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ಇಂದಿನ ಸುತ್ತಾಟವು ನಿಮಗೆ ಆಯಾಸವನ್ನು ಕೊಡಲಿದೆ.‌ ಔಷಧ ವ್ಯಾಪಾರದಲ್ಲಿ ಹೆಚ್ಚಿನ ಲಾಭವಿದೆ. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಹೆಚ್ಚಿನ ಮೌಲ್ಯವನ್ನು ನಿರೀಕ್ಷಿಸುವಿರಿ. ಸಮೂಹದಲ್ಲಿ ಕೆಲಸವನ್ನು ಮಾಡುವುದು ನಿಮಗೆ ಇಷ್ಟವಾಗುವುದು. ಆರೋಗ್ಯದ ಸುಧಾರಣೆಯಿಂದ ಮನೋಬಲವು ಹೆಚ್ಚಾಗುವುದು. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವಿರಾದರೂ ಕೇಳುವ ಮನಃಸ್ಥಿತಿಯು ಯಾರಲ್ಲಿಯೂ ಇರದು. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆದರೆ ಉತ್ತಮ. ಎನಗಿಂತ ಕಿರಿಯರಿಲ್ಲ ಎನ್ನುವ ಸ್ಥಿತಿ ಇರಲಿ.

ವೃಶ್ಚಿಕ ರಾಶಿ: ಒಂದಲ್ಲ ಒಂದು ರೀತಿಯಲ್ಲಿ ನಿಮ್ಮ‌ ಅನಾವರಣವಾಗಲಿದೆ. ಇಂದು ನೀವು ಮುಂದೆ ಮಾಡಬೇಕಾದ ಕೆಲವು ಕಾರ್ಯಗಳ ನಿರ್ಧಾರವನ್ನು ಮಾಡಿ ಮುಂದುವರಿಯುವಿರಿ. ಅನವರತ ಕಾರ್ಯಗಳಿಂದ ದೇಹವು ಆಯಾಸಗೊಳ್ಳಬಹುದು. ಸುಂದರ ದಿನದ ನಿರೀಕ್ಷೆಯಲ್ಲಿ ಇರುವಿರಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ತೆಗೆದುಕೊಳ್ಳಿ. ಕಾಲಹರಣಕ್ಕೆ ಇನ್ನೊಬ್ಬರ ವಿಚಾರವೇ ಬೇಕಾಗುವುದು. ಭವಿಷ್ಯದ ಬಗ್ಗೆ ನಿಮಗೆ ಸ್ಪಷ್ಟವಾದ ನಿಲುವು ಸಿಗದು. ಯಾರೋ ಮಾಡಿದ ತಪ್ಪು ಕೆಲಸದಿಂದ ನಿಮಗೆ ಪಶ್ಚಾತ್ತಾಪವಾಗಲಿದೆ. ನೀವೇ ಸಂಗಾತಿಯ ಮನಸ್ಸನ್ನು ನೋಯಿಸಿ ಸರಿಪಡಿಸುವಿರಿ.‌ ತಂದೆಯನ್ನು ನೋಡುವ ಬಯಕೆಯಾಗಬಹುದು. ಮರಗೆಲಸದವರಿಗೆ ಲಾಭ ಕಾಣಿಸುವುದು. ಇಂದಿನ ಖರ್ಚಿನ ಲೆಕ್ಕಾಚಾರವು ಬುಡಮೇಲಾಗವುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸೇ ನಿಮಗೆ ತೊಂದರೆ ಕೊಡುವುದು.

ಧನು ರಾಶಿ: ಇಂದು ಬೇರೆಯವರು ಮಾಡುತ್ತಾರೆ ಎಂದು ನೀವೂ ಮಾಡುವುದು ಬೇಡ. ಯಾವುದಾದರೂ ಹಣಕಾಸಿನ ಒಪ್ಪಂದವನ್ನು ಮಾಡುವಾಗ ಎಚ್ಚರಿಕೆ ಇರಲಿ. ಹಣಕಾಸಿನ ವಿಚಾರದಲ್ಲಿ ನೀವು ಹತಾಶಭಾವದಿಂದ ಇರುವಿರಿ. ಭೂಮಿಯ ಖರೀದಿಗೆ ಹುಡುಕಾಟ ಮಾಡುವಿರಿ. ನಿಮಗೆ ಸ್ಥಿರ ಬುದ್ಧಿಯನ್ನು ತಂದುಕೊಳ್ಳಲು ಆಗದು.‌ ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬರುವುದು. ನೀವು ಮಾಡಿದ ಕೆಲಸವು ನಿಮಗೇ ಇಷ್ಟವಾಗದು. ತಾಯಿಯ ಮಾತನ್ನು ನೀವು ಅಸಡ್ಡೆಯಿಂದ ಕೇಳುವಿರಿ. ಸುಂದರ ಸ್ಥಳಗಳು ನಿಮ್ಮ ಗಮನವನ್ನು ಸೆಳೆಯಬಹುದು. ಸಾಹಸಮಯವಾದ ಕೆಲಸಕ್ಕೆ ಹೋಗುವುದು ಬೇಡ.‌ ನಿಮಗೆ ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳುವಿರಿ. ನಿಮ್ಮ‌ ಕೌಶಲವನ್ನು ಕೆಲಸದಲ್ಲಿ ತೋರಿಸಿ. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ನೀವೇ ಸಿಕ್ಕಿಕೊಳ್ಳುವಿರಿ. ಉತ್ತಮ ಕಾರ್ಯಕ್ಕೆ ಶ್ಲಾಘನೆ ಸಿಗಲಿದೆ. ಹಿರಿಯರ ಜೊತೆ ವಾಗ್ವಾದಕ್ಕೆ ಹೋಗಿ‌ ಮನಸ್ಸನ್ನು ಹಾಳಾಗುವುದು.

ಮಕರ ರಾಶಿ: ಇಂದು ಮಾಡಬೇಕಾದ ಕಾರ್ಯವನ್ನು ಕಾರಣಾಂತರಗಳಿಂದ ಮುಂದೂಡುವಿರಿ. ನಿಮ್ಮ ಹಠದ ಸ್ವಭಾವಕ್ಕೆ ಎಲ್ಲರೂ ಒಗ್ಗುತ್ತಾರೆ ಎನ್ನಲಾಗದು. ಉದ್ಯೋಗವನ್ನು ಪ್ರಾಮಾಣಿಕತೆಯಿಂದ ಮಾಡುವಿರಿ. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ಆಸ್ತಿಯ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯ ಕೊರತೆ ಇರಲಿದೆ.‌ ಮನಸ್ಸಿನಲ್ಲಿ ಇರುವು ವಿಚಾರವನ್ನು ಯಾರ ಜೊತೆಗಾದರೂ ಹೇಳಿಕೊಳ್ಳಿ. ನಿಮ್ಮ‌ ನೋವಿಗೆ‌ ಸ್ಪಂದಿಸಲು ಸಿಗುವರು. ನಿಮ್ಮ‌ ಕ್ರಿಯಾಶೀಲತೆಗೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನೀವು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚಿನ‌ ಸಮಯ ಕಳೆಯುವಿರಿ. ಅನ್ನಿಸಿದ್ದನ್ನು ಹೇಳಿ ಕೆಲವರಿಂದ ದೂರವಾಗುವಿರಿ. ಉಂಟಾದ ಪ್ರೀತಿಯನ್ನು ಹಾಗೆಯೇ ಇರಿಸಿಕೊಂಡು ನೋಡಿ, ಸತ್ಯವೇ ಸುಳ್ಳೆ ಎಂದು. ನಿಮಗೆ ಅರ್ಥವಾಗದ ವಿಚಾರವನ್ನು ಬೇರೆಯವರ ಕಡೆಯಿಂದ ಪಡೆಕೊಳ್ಳುವಿರಿ.

ಕುಂಭ ರಾಶಿ: ಹಳೆಯ ಕಾರ್ಯಕ್ಕೆ ಹೊಸ ತಂತ್ರವನ್ನು ಬಳಸಿ ಕಾರ್ಯವನ್ನು ಸಾಧಿಸುವಿರಿ. ಇಂದು ನೀವು ಪ್ರಾಮಾಣಿಕ ಎಂದು ತೋರಿಸಲು ಹೋಗಿ ಉದ್ಯೋಗದಲ್ಲಿ ತೊಂದರೆ ಮಾಡಿಕೊಳ್ಳುವಿರಿ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಹೋಗುವಿರಿ. ವಿದ್ಯಾರ್ಥಿಗಳು ಕೌಶಲವನ್ನು ಪ್ರದರ್ಶಿಸುವರು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ. ವೈವಾಹಿಕ ಮಾತುಕತೆಗೆ ನಿಮ್ಮನ್ನು ಯಾರಾದರೂ ಕೇಳಿಕೊಂಡುಬರಬಹುದು. ಕೋಪವನ್ನು ಸ್ವಲ್ಪ ಕಡಿಮೆ‌ ಮಾಡಿಕೊಳ್ಳುವುದು ಉತ್ತಮ. ಸಂಗಾತಿಯನ್ನು ನೀವು ಕೆಲವು ವಿಚಾರಗಳಿಗೆ ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗುವುದು. ನೀವು ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು. ನಿಮ್ಮ ತಪ್ಪನ್ನೂ ನೀವೇ ಸಮರ್ಥಿಸಿಕೊಳ್ಳುವಿರಿ. ತಾಯಿಯ ಮೇಲೆ ಇಂದು ನೀವು ಸಿಟ್ಟಾಗಬಹುದು. ಖುಷಿಯನ್ನು ನೀವು ಹಂಚಿಕೊಳ್ಳುವ ಮನಸ್ಸು ಮಾಡುವಿರಿ.

ಮೀನ ರಾಶಿ: ಅಲೆಗಳು ಶಾಂತವಾಗುತ್ತವೆ. ಆದರೆ ಅಲ್ಲಿಯವರೆಗೆ ಕಾಯುವಿಕೆ‌ ಬೇಕು. ಕಲ್ಲೆಸೆಯಬಹುದು ಯಾರಾದರೂ. ಇಂದು ನೀವು ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತವಾಗಿ ಇರಬೇಕು ಎನ್ನುವುದನ್ನು ನಿರ್ಧರಿಸುವಿರಿ. ಹೆಚ್ಚು ಖುಷಿಯಾಗಿ ಇಂದು ಇರಲಿದ್ದೀರಿ.‌ ಒಬ್ಬರೇ ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಜಾಗರೂಕತೆ ಇರಲಿ. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಆರ್ಥಿಕ ಮೌಲ್ಯವನ್ನು ನೀವು ತಿಳಿದುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೆ ಬೇಸರಿಸುವಿರಿ. ಬೇರೆಯಾದ ಮನಸ್ಸನ್ನು ಒಟ್ಟು ಸೇರಿಸಲಿದ್ದೀರಿ. ಎಲ್ಲ ಗೊತ್ತಿದೆ ಎಂದು ಹುಂಬುತನವನ್ನು ಮಾಡುವುದು ಬೇಡ. ಸಹೋದರರ ಜೊತೆ ಮನೆಯ ಆಸ್ತಿಯ ಬಗ್ಗೆ ಮಾತನಾಡುವಿರಿ.

ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್