AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗುವಾಗ ತಲೆದಿಂಬಿನ ಕೆಳಗೆ ಈ ವಸ್ತು ಇಟ್ಟು ಮಲಗಿ; ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು

ಜ್ಯೋತಿಷ್ಯದಲ್ಲಿ ಹೇಳಲಾದ ಕೆಲವು ಪರಿಹಾರಗಳನ್ನು ಪ್ರಯತ್ನಿಸುವ ಮೂಲಕ, ವ್ಯಕ್ತಿಯು ಆರ್ಥಿಕ ಸಮಸ್ಯೆಗಳಿಂದ ಮತ್ತು ಮನೆಯ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ.

ರಾತ್ರಿ ಮಲಗುವಾಗ ತಲೆದಿಂಬಿನ ಕೆಳಗೆ ಈ ವಸ್ತು ಇಟ್ಟು ಮಲಗಿ; ಅನೇಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು
Sleeping
ಅಕ್ಷತಾ ವರ್ಕಾಡಿ
|

Updated on:Dec 25, 2023 | 6:22 PM

Share

ಜ್ಯೋತಿಷ್ಯಶಾಸ್ತ್ರವು ವಿವಿಧ ಸಮಸ್ಯೆಗಳಿಗೆ ವಿವಿಧ ರೂಪದಲ್ಲಿ ಪರಿಹಾರಗಳನ್ನು ಸೂಚಿಸುತ್ತದೆ. ನೀವು ನಿದ್ರಾಹೀನತೆ, ಆಗಾಗ ಭಯ, ಕೆಟ್ಟ ಕನಸು ಮುಂತಾದ ಸಮಸ್ಯೆಯಿಂದ ಬಳಲುತ್ತಿದ್ದರೆ ಅದಕ್ಕೂ ಕೂಡ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಸಲಹೆ ನೀಡುತ್ತಾರೆ. ತಲೆದಿಂಬಿನ ಕೆಳಗೆ ಕೆಲವೊಂದು ವಸ್ತುವಿಟ್ಟು ಮಲಗುವುದರಿಂದ ಜೀವನದಲ್ಲಿನ ಪ್ರಮುಖ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಪಿದ್ರೌಶ ಅಥವಾ ಗ್ರಹಗಳ ಅಶುಭ ಪ್ರಭಾವದಿಂದ ವ್ಯಕ್ತಿಯು ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾನೆ. ಅಂತಹ ಸಮಯದಲ್ಲಿ, ಜ್ಯೋತಿಷ್ಯದಲ್ಲಿ ಹೇಳಲಾದ ಕೆಲವು ಪರಿಹಾರಗಳನ್ನು ಪ್ರಯತ್ನಿಸುವ ಮೂಲಕ, ವ್ಯಕ್ತಿಯು ಆರ್ಥಿಕ ಸಮಸ್ಯೆಗಳಿಂದ ಮತ್ತು ಮನೆಯ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ.

ರಾತ್ರಿ ಮಲಗುವಾಗ ತಲೆದಿಂಬಿನ ಕೆಳಗೆ ಈ ವಸ್ತುಗಳನ್ನು ಇಟ್ಟುಕೊಳ್ಳಿ:

ನಕಾರಾತ್ಮಕ ಶಕ್ತಿಯಿಂದ ಮುಕ್ತಿ:

ಸ್ವಲ್ಪ ಸೋಂಪು ಕಾಳನ್ನು ಬಟ್ಟೆಯಲ್ಲಿ ಕಟ್ಟಿ ರಾತ್ರಿ ಮಲಗುವ ಮೊದಲು ಅದನ್ನು ನಿಮ್ಮ ದಿಂಬಿನ ಕೆಳಗೆ ಇರಿಸಿ. ಈ ರೀತಿ ಮಾಡುವುದರಿಂದ ಅನೇಕ ರೀತಿಯ ದೋಷಗಳನ್ನು ತೊಡೆದುಹಾಕಬಹುದು. ಇದರೊಂದಿಗೆ ದುಃಸ್ವಪ್ನದ ಸಮಸ್ಯೆಯೂ ದೂರವಾಗುತ್ತದೆ ಮತ್ತು ವ್ಯಕ್ತಿಯು ಉತ್ತಮ ನಿದ್ರೆ ಪಡೆಯುತ್ತಾನೆ.ಇದಲ್ಲದೇ ನಕಾರಾತ್ಮಕ ಶಕ್ತಿಯಿಂದ ಹೊರಬರಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: 2024 ರಲ್ಲಿ, ಈ ನಾಲ್ಕು ರಾಶಿಯವರ ಭವಿಷ್ಯ ಬದಲಾಗಲಿದೆ, ಇದು ಆರ್ಥಿಕ ಲಾಭದ ಸಂಕೇತ

ದುಃಸ್ವಪ್ನಗಳಿಂದ ಮುಕ್ತಿ:

ಅನೇಕ ಜನರು ರಾತ್ರಿಯಲ್ಲಿ ದುಃಸ್ವಪ್ನದಂತಹ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದಾಗಿ ಅವರ ನಿದ್ದೆಗೂ ಅಡ್ಡಿಯುಂಟಾಗುತ್ತದೆ.ಅಂತಹ ಪರಿಸ್ಥಿತಿಯಲ್ಲಿ, ಮಲಗುವಾಗ ಬೆಳ್ಳುಳ್ಳಿಯ 2 ಎಸಳುಗಳನ್ನು ದಿಂಬಿನ ಕೆಳಗೆ ಇಟ್ಟು ಮಲಗಿ. ಈ ರೀತಿ ಮಾಡುವುದರಿಂದ, ಧನಾತ್ಮಕ ಶಕ್ತಿಯ ಹರಿವು ಹೆಚ್ಚಾಗುತ್ತದೆ. ಅಲ್ಲದೆ, ವ್ಯಕ್ತಿಯು ಶಾಂತಿಯುತವಾಗಿ ನಿದ್ರಿಸುತ್ತಾನೆ.

ದುಷ್ಟ ಶಕ್ತಿಯಿಂದ ರಕ್ಷಣೆ:

ಪ್ರತಿದಿನ ತಲೆದಿಂಬಿನ ಕೆಳಗೆ ಕರ್ಪೂರ ಇಟ್ಟು ಮಲಗಿದರೆ ಮನೆಯಲ್ಲಿರುವ ವಾಸ್ತುದೋಷ ದೂರವಾಗುತ್ತದೆ. ಇದಲ್ಲದೆ, ಈ ಪರಿಹಾರದಿಂದ ದುಷ್ಟ ಶಕ್ತಿ ರಕ್ಷಣೆ ಪಡೆಯಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ದಿಂಬಿನ ಕೆಳಗೆ ಕರ್ಪೂರವನ್ನು ಇಟ್ಟುಕೊಳ್ಳುವುದರಿಂದ ವ್ಯಕ್ತಿಯು ನಕಾರಾತ್ಮಕ ಶಕ್ತಿಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Mon, 25 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ