AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ

Daily Numerology March 01: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on:Mar 01, 2026 | 12:20 AM

Share

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು ಮುಖ್ಯ ಆಗುತ್ತದೆ. ಕ್ರೆಡಿಟ್ ಕಾರ್ಡ್ ಗಾಗಿ ಅಪ್ಲೈ ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನೀವು ನಿರೀಕ್ಷೆ ಕೂಡ ಮಾಡಿರದಂಥ ಹಣ ಕೈ ಸೇರಲಿದೆ. ಪ್ರತಿ ತಿಂಗಳು ಇಂತಿಷ್ಟು ಆದಾಯ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಲೋಚಿಸುತ್ತಾ ಇರುವವರು ಅದಕ್ಕೆ ಬೇಕಾದ ಪ್ರಯತ್ನ ಆರಂಭ ಮಾಡುತ್ತೀರಿ. ಸಂಗಾತಿ ಜೊತೆಗೆ ಸಂಬಂಧಿಕರ ಕಾರಣದಿಂದ ಸಣ್ಣ ಪುಟ್ಟ ಮನಸ್ತಾಪ ಆಗಬಹುದು. ಆದರೆ ಇದನ್ನು ಕೂತು ಮಾತನಾಡುವ ಮೂಲಕ ಬಗೆಹರಿಸಿಕೊಳ್ಳುತ್ತೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮಷ್ಟಕ್ಕೆ ನೀವು ಅಂತ ಇದ್ದರೂ ಕೆಲವು ವಾದ- ವಿವಾದಗಳಿಗೆ ಕೆಲವರು ಎಳೆಯುತ್ತಾರೆ. ದೊಡ್ಡ ಗುಂಪಿನಲ್ಲಿ ಜನರು ಇರುವ ಕಡೆಗೆ ನೀವು ಹೋಗದಿರುವುದು ಉತ್ತಮ. ಇದನ್ನು ಮೀರಿಯೂ ಅಂಥ ಸ್ಥಳದಲ್ಲಿ ನೀವು ಇದ್ದೀರಿ ಅಂತಾದಲ್ಲಿ ಮೌನವಾಗಿ ಇರುವುದು ಕ್ಷೇಮ. ಸಹನೆ ಇಟ್ಟುಕೊಂಡು ಬಹಳ ಸಮಯದಿಂದ ಕಾಯುತ್ತಾ ಬಂದಿದ್ದಕ್ಕೂ ಸಾರ್ಥಕ ಎಂಬಂತೆ ಕೆಲವು ಕಾರ್ಯಗಳು ನಿಮ್ಮಂತೆಯೇ- ನಿಮಗೆ ಬೇಕಾದಂತೆಯೇ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Published On - 12:20 am, Sun, 1 March 26

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!