
ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ.
ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ ಅದರಿಂದ ಹೊರಬರುವಂತಹ ಮಾರ್ಗ, ಉಪಾಯಗಳು ಗೋಚರ ಆಗಲಿವೆ. ಸ್ವಂತ ವ್ಯಾಪಾರ, ಉದ್ಯಮ ಮಾಡಿಕೊಂಡು ಇರುವವರಿಗೆ ವಿಸ್ತರಣೆಯ ಅವಕಾಶಗಳು ದೊರೆಯಲಿವೆ.
ನಿಮ್ಮಲ್ಲಿ ಕೆಲವರು ಬ್ಯಾಂಕ್ ಗಳಲ್ಲಿ ಸಾಲಕ್ಕೆ ಪ್ರಯತ್ನ ಪಡಲಿದ್ದೀರಿ. ಇನ್ನು ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರು ಹಣಕಾಸಿನ ನೆರವನ್ನು ತಾತ್ಕಾಲಿಕವಾಗಿ ನೀಡಬಹುದು. ನೀವು ಮರೆತೇ ಹೋದಂತಹ ಅವಕಾಶವೊಂದು ಹುಡುಕಿಕೊಂಡು ಬರುವ ಸಾಧ್ಯತೆಗಳಿವೆ. ಅದನ್ನು ಒಪ್ಪಿಕೊಳ್ಳಬೇಕೋ ಅಥವಾ ಬೇಡವೋ ಎಂಬ ಗೊಂದಲಗಳು ಏನಾದರೂ ಇದ್ದಲ್ಲಿ ಹಿರಿಯರು ಅಥವಾ ಅನುಭವಗಳ ಸಲಹೆಯನ್ನು ಪಡೆದುಕೊಳ್ಳಿ.
ಈ ದಿನ ಒಂದು ಬಗೆಯ ಸಂತೋಷ- ಸಮಾಧಾನದ ಜತೆಗೆ, ಈ ನಿರ್ಧಾರ ಹೇಗೆ ಮಾಡಬೇಕು ಎಂಬ ಗೊಂದಲ ಇರುವಂಥ ಸವಾಲು ನಿಮ್ಮ ಎದುರು ನಿಲ್ಲಲಿದೆ. ಈ ಸಮಯದಲ್ಲಿ ನಿಮಗೆ ದೊರೆಯುವಂತಹ ಅವಕಾಶವೋ ಜವಾಬ್ದಾರಿಯೋ ಒಳ್ಳೆಯದಕ್ಕೋ ಅಥವಾ ಕೆಟ್ಟದ್ದಕ್ಕೋ ಎಂಬುದನ್ನು ನಿರ್ಧರಿಸುವುದಕ್ಕೆ ಬಹಳ ಸಮಯ ಬೇಕಾಗುತ್ತದೆ.
ಲೇಖನ- ಸ್ವಾತಿ ಎನ್.ಕೆ.