AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ

Daily Numerology March 04: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 4ರ ಬುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 4ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 04, 2026 | 12:40 AM

Share

ಸಂಜೆ ಸೂರ್ಯಾಸ್ತದ ನಂತರ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ಎಳ್ಳೆಣ್ಣೆಯ ದೀಪ ಹಚ್ಚಿ. ಎಳ್ಳೆಣ್ಣೆಯ ದೀಪವು ಶನಿ ಮತ್ತು ಕುಜ ದೋಷಗಳನ್ನು ಕಡಿಮೆ ಮಾಡಿ, ಮೈಗ್ರೇನ್‌ನಂತಹ ನೋವುಗಳಿಂದ ಮುಕ್ತಿ ನೀಡಲು ಸಹಕಾರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕೆ ಖರೀದಿ ಮಾಡಿಟ್ಟಿದ್ದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಚಿಂತನೆ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ. ತಾಯಿ ಜೊತೆಗೆ ಅಭಿಪ್ರಾಯ ಭೇದ- ಮನಸ್ತಪ ಇದ್ದಲ್ಲಿ ಅದನ್ನು ನಿವಾರಿಸಿಕೊಳ್ಳಲು ಅವಕಾಶ ದೊರೆಯಲಿದೆ. ನೀರಿನ ಮಾರಾಟ ವ್ಯವಹಾರದಲ್ಲಿ ತೊಡಗಿರುವವರು ವಿಸ್ತರಣೆಗೆ ಆಲೋಚಿಸಿ, ಅಗತ್ಯ ಸಿದ್ಧತೆಯಲ್ಲಿ ಬಿಡುವಿಲ್ಲದಷ್ಟು ತನ್ಮಯರಾಗುತ್ತೀರಿ. ಹಲ್ಲು ನೋವಿನ ಸಮಸ್ಯೆ ತೀವ್ರವಾಗಿದ್ದಲ್ಲಿ ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಿನಿಮಾ ರಂಗದಲ್ಲಿ ಅವಕಾಶಕ್ಕಾಗಿ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ದಿನ ಇದಾಗಿರಲಿದೆ. ನಿಮ್ಮ ಸ್ನೇಹಿತರು ಬಹಳ ದೊಡ್ಡ ಸಹಾಯವನ್ನು ಮಾಡಲಿದ್ದಾರೆ. ಈ ದಿನ ಯಾವುದೇ ಕೆಲಸದಲ್ಲಿ ಮನಸಾರೆ ತೊಡಗಿಕೊಳ್ಳಿ; ನಿಮಗೆ ಎದುರಾಗುವ ಸ್ಪರ್ಧೆ ಬಗ್ಗೆ ಆಲೋಚನೆಯನ್ನೇ ಮಾಡುವುದಕ್ಕೆ ಹೋಗಬೇಡಿ. ಮೈಗ್ರೇನ್ ಸಮಸ್ಯೆ ಇರುವಂಥವರು ಸರಿಯಾದ ಔಷಧೋಪಚಾರದ ಬಗ್ಗೆ ಲಕ್ಷ್ಯವನ್ನು ನೀಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು