AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

Daily Numerology March 07: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ
Numerology Image Credit source: google
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 07, 2026 | 12:30 AM

Share

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗೀ ಆಗುವುದರಿಂದ ನಿಮ್ಮ ಮನಸ್ಸಿಗೆ ತೃಪ್ತಿ- ಸಮಾಧಾನ ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪರಿಚಿತರು ದಿಢೀರನೇ ನಿಮಗೆ ಕೆಲವು ವಸ್ತುಗಳನ್ನು ಉಚಿತವಾಗಿ ನೀಡಬಹುದು ಅಥವಾ ತಾವು ಕೆಲವು ಕಾಲ ದೂರದ ಊರಿಗೆ ಹೋಗುತ್ತಿದ್ದೇವೆ, ನಮ್ಮ ಕಾರು ಅಥವಾ ಬೈಕ್/ ಸ್ಕೂಟರ್ ಅನ್ನು ನೀವು ಬಳಸಿಕೊಳ್ಳಿ ಅಂತ ಹೇಳಬಹುದು. ಸಂಗಾತಿಯು ನಿಮ್ಮ ಬಳಿ ಕೆಲವು ಬೇಡಿಕೆಗಳನ್ನು ಇಡುವ ಸಾಧ್ಯತೆಗಳಿವೆ. ತವರು ಮನೆಯಿಂದ ಹೆಣ್ಣುಮಕ್ಕಳಿಗೆ ಬರಬೇಕಾದ ಆಸ್ತಿಯ ಪಾಲು ಏನಾದರೂ ಇದ್ದಲ್ಲಿ ಅದರ ಬಗ್ಗೆ ಒಂದು ತೀರ್ಮಾನ ಆಗುವಂಥ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮೂವತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸು ಮಕ್ಕಳು ಯಾರಿಗೆ ಇದ್ದಾರೋ ಅಂಥವರು ಮಕ್ಕಳ ಜತೆಗೆ ಮಾತನಾಡುವಾಗ ಕೋಪ ಮಾಡಿಕೊಳ್ಳದೇ ಇರುವುದು ತುಂಬ ಮುಖ್ಯ. ಮನೆ- ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವೇ ಇರಬಹುದು ಅಥವಾ ಮದುವೆ ಮತ್ಯಾವುದೇ ವಿಷಯ ಇರಬಹುದು, ಅದರ ಬಗ್ಗೆ ನಿಮಗೆ ಸಮ್ಮತಿ ಇಲ್ಲದಿದ್ದರೆ ಸುಮ್ಮನಿದ್ದು ಬಿಡಿ, ಬದಲಿಗೆ ವಾದ- ವಾಗ್ವಾದಗಳನ್ನು ಮಾಡಿಕೊಳ್ಳಬೇಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!