AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಅನಗತ್ಯ ಖರ್ಚು ತಡೆಯಲು ಒಂದು ಹಳದಿ ಬಟ್ಟೆಯಲ್ಲಿ ಸ್ವಲ್ಪ ಅರಿಶಿನ ಕೊಂಬನ್ನು ಕಟ್ಟಿ ನಿಮ್ಮ ಹಣ ಇಡುವ ಜಾಗದಲ್ಲಿಡಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ
Numerology Image Credit source: google
TV9 Web
| Edited By: |

Updated on: Mar 10, 2026 | 3:29 AM

Share

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ ಬರಲಾರದು ಎಂದೆನಿಸಿದ್ದನ್ನು ನಿಲ್ಲಿಸಿಬಿಡುವುದು ಒಳ್ಳೆಯದು. ಆಯುರ್ವೇದ ಔಷಧಗಳ ವಿತರಣೆ ಮಾಡುವಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ. ನೀವು ಸಹ ಇಂಥ ಮಾತುಗಳಿಗೆ ಅಲ್ಲಿಂದ ಅಲ್ಲಿಗೆ ಎಂಬಂತೆ ಉತ್ತರವನ್ನು ಸಹ ನೀಡುತ್ತೀರಿ. ದೊಡ್ಡ ಅಳತೆಯ ಸೈಟು ಇರುವವರು ಅದನ್ನು ಮಾರಾಟ ಮಾಡಿ, ಕಟ್ಟಿರುವ ಮನೆ ಖರೀದಿ ಮಾಡುವ ಬಗ್ಗೆ ಆಲೋಚಿಸುತ್ತೀರಿ. ಅದರಲ್ಲೂ ತಿಂಗಳಾ ತಿಂಗಳು ಬಾಡಿಗೆ ರೂಪದಲ್ಲಿ ನಿಗದಿತ ಆದಾಯ ಮಾಡಿಕೊಳ್ಳುವ ಕಡೆಗೆ ಗಮನ ಇರಲಿದೆ.

ಸ್ವಾತಿ ಎನ್​​ಕೆ 

Follow Us
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ