AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ

Daily Numerology March 12: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 12ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 12, 2026 | 12:30 AM

Share

ಪಾರಿಜಾತ ಅಥವಾ ಮಲ್ಲಿಗೆ ಹೂವುಗಳನ್ನು ಬಳಸಿ ದೇವರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮಾನಸಿಕ ಒತ್ತಡಗಳಿಂದ ಹೊರಬಂದು ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಸಣ್ಣ ತಪ್ಪು ಮಾತು ಕೂಡ ದೊಡ್ಡ ಅವಮಾನಕ್ಕೆ ಕಾರಣ ಆಗುವಂಥ ಕಡೆಗೆ ಸುಮ್ಮನೆ ಇದ್ದರೆ ಒಳಿತು. ಪ್ರೀತಿ- ಪ್ರೇಮ ವಿಚಾರಗಳು ಪ್ರಾಮುಖ್ಯ ಪಡೆದುಕೊಳ್ಳಲಿದ್ದು, ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಲಿವೆ. ನೀವಾಗಿಯೇ ಕರೆ ಮಾಡುವುದರ ಮೂಲಕ ಸಮಸ್ಯೆಯೊಂದನ್ನು ಮೈ ಮೇಲೆ ಎಳೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಗ್ಯಾಜೆಟ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಮೊದಲಾದವುಗಳನ್ನು ಖರೀದಿ ಮಾಡುವುದಕ್ಕೆ ಹಣ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗಿದೆ. ಇದಕ್ಕಾಗಿ ಹಣಕಾಸಿನ ಕೊರತೆ ಕಂಡುಬಂದಲ್ಲಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳು ನೆರವಿಗೆ ನಿಲ್ಲಲಿದ್ದಾರೆ. ನೀವೇನಾದರೂ ಈಗ ಇರುವಂಥ ಮನೆಯನ್ನು ಖಾಲಿ ಮಾಡಿ, ಹೊಸ ಮನೆಗೆ ಹೋಗಬೇಕು ಎಂದುಕೊಳ್ಳುತ್ತಿದ್ದಲ್ಲಿ ಅಂದುಕೊಂಡಂಥ ಮನೆ ದೊರೆಯುವ ಅವಕಾಶ ಹೆಚ್ಚಿಗೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನೀವು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ತಡ ಮಾಡಿದ್ದರಿಂದಾಗಿ ಕೆಲವು ಉದ್ಯೋಗಾವಕಾಶಗಳು ಕೈ ತಪ್ಪಿ ಹೋಗುವಂಥ ಸಾಧ್ಯತೆಗಳಿದ್ದು, ಅತಿ ಮುಖ್ಯವಾದ ವಿಚಾರಗಳು ಇದ್ದಲ್ಲಿ ತಡ ಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಿ. ಇನ್ನು ಮದುವೆ ನಿಶ್ಚಯ ಆಗಿರುವಂಥವರು ಸಣ್ಣ- ಪುಟ್ಟ ವಿಚಾರಗಳಿಗೂ ಸಿಟ್ಟು ಮಾಡುವುದು, ಮಾತು ಬಿಡುವುದು ಇಂಥದ್ದನ್ನು ಮಾಡಬೇಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ