
ಪಾರಿಜಾತ ಅಥವಾ ಮಲ್ಲಿಗೆ ಹೂವುಗಳನ್ನು ಬಳಸಿ ದೇವರ ಪೂಜೆಯನ್ನು ಮಾಡುವುದರಿಂದ ನಿಮ್ಮ ಮಾನಸಿಕ ಒತ್ತಡಗಳಿಂದ ಹೊರಬಂದು ಉತ್ಸಾಹದಿಂದ ಕೆಲಸ- ಕಾರ್ಯಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲಿದೆ.
ಸಣ್ಣ ತಪ್ಪು ಮಾತು ಕೂಡ ದೊಡ್ಡ ಅವಮಾನಕ್ಕೆ ಕಾರಣ ಆಗುವಂಥ ಕಡೆಗೆ ಸುಮ್ಮನೆ ಇದ್ದರೆ ಒಳಿತು. ಪ್ರೀತಿ- ಪ್ರೇಮ ವಿಚಾರಗಳು ಪ್ರಾಮುಖ್ಯ ಪಡೆದುಕೊಳ್ಳಲಿದ್ದು, ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಲಿವೆ. ನೀವಾಗಿಯೇ ಕರೆ ಮಾಡುವುದರ ಮೂಲಕ ಸಮಸ್ಯೆಯೊಂದನ್ನು ಮೈ ಮೇಲೆ ಎಳೆದುಕೊಳ್ಳಲಿದ್ದೀರಿ.
ಗ್ಯಾಜೆಟ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಮೊದಲಾದವುಗಳನ್ನು ಖರೀದಿ ಮಾಡುವುದಕ್ಕೆ ಹಣ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗಿದೆ. ಇದಕ್ಕಾಗಿ ಹಣಕಾಸಿನ ಕೊರತೆ ಕಂಡುಬಂದಲ್ಲಿ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳು ನೆರವಿಗೆ ನಿಲ್ಲಲಿದ್ದಾರೆ. ನೀವೇನಾದರೂ ಈಗ ಇರುವಂಥ ಮನೆಯನ್ನು ಖಾಲಿ ಮಾಡಿ, ಹೊಸ ಮನೆಗೆ ಹೋಗಬೇಕು ಎಂದುಕೊಳ್ಳುತ್ತಿದ್ದಲ್ಲಿ ಅಂದುಕೊಂಡಂಥ ಮನೆ ದೊರೆಯುವ ಅವಕಾಶ ಹೆಚ್ಚಿಗೆ ಇದೆ.
ನೀವು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ತಡ ಮಾಡಿದ್ದರಿಂದಾಗಿ ಕೆಲವು ಉದ್ಯೋಗಾವಕಾಶಗಳು ಕೈ ತಪ್ಪಿ ಹೋಗುವಂಥ ಸಾಧ್ಯತೆಗಳಿದ್ದು, ಅತಿ ಮುಖ್ಯವಾದ ವಿಚಾರಗಳು ಇದ್ದಲ್ಲಿ ತಡ ಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಿ. ಇನ್ನು ಮದುವೆ ನಿಶ್ಚಯ ಆಗಿರುವಂಥವರು ಸಣ್ಣ- ಪುಟ್ಟ ವಿಚಾರಗಳಿಗೂ ಸಿಟ್ಟು ಮಾಡುವುದು, ಮಾತು ಬಿಡುವುದು ಇಂಥದ್ದನ್ನು ಮಾಡಬೇಡಿ.
ಲೇಖನ- ಸ್ವಾತಿ ಎನ್.ಕೆ.