AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ

Daily Numerology March 12: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 12ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 12, 2026 | 12:50 AM

Share

ಈ ದಿನ ಸಂಜೆಯ ಹೊತ್ತಿಗೆ ಅಶ್ವತ್ಥ ಮರದ ಕೆಳಗೆ ಕಡಲೆ ಹಿಟ್ಟಿನಿಂದ ಮಾಡಿದ ದೀಪ ಹಚ್ಚುವುದು ವಿಶೇಷ ಫಲ ನೀಡುತ್ತದೆ. ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ಹಾಗೂ ಅಡೆತಡೆಗಳು ನಿವಾರಣೆ ಆಗಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹಣಕಾಸು ವಿಚಾರದಲ್ಲಿ ಕಾಡುತ್ತಿರುವ ಗೊಂದಲಗಳು ಬಗೆಹರಿಯುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ನಿಮ್ಮೊಬ್ಬರಿಂದ ಏನಾದೀತು ಎಂಬಂತೆ ಇತರರು ಆಡಿದ ಮಾತುಗಳಿಗೆ ಉತ್ತರ ಎಂಬಂತೆ ಕೆಲವು ಅಸಾಧ್ಯವಾದ ಕೆಲಸ- ಕಾರ್ಯಗಳನ್ನು ಮಾಡಿ, ಮುಗಿಸುವುದಕ್ಕೆ ಸಫಲರಾಗುತ್ತೀರಿ. ವಿದೇಶಗಳಿಗೆ ಉದ್ಯೋಗ ನಿಮಿತ್ತವಾಗಿ ತೆರಳಬೇಕು ಎಂದಿರುವವರಿಗೆ ಈ ತನಕ ಏನಾದರೂ ಅಡೆತಡೆಗಳು ಕಾಡುತ್ತಿದ್ದಲ್ಲಿ ಅವುಗಳನ್ನು ನಿವಾರಿಸಿಕೊಳ್ಳುವುದಕ್ಕೆ ಅವಕಾಶಗಳಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂದು ಹುಡುಕಾಟ ನಡೆಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಅವಕಾಶಗಳು ಹೆಚ್ಚಿವೆ. ತರಕಾರಿ, ಹೂವು- ಹಣ್ಣಿನ ವ್ಯವಹಾರ, ಬ್ಯಾಂಗಲ್ ಸ್ಟೋರ್ಸ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬರಬಹುದು. ಇನ್ನು ದೀರ್ಘಾವಧಿಯ ಆರ್ಡರ್ ಗಳು ಸಹ ದೊರೆಯುವ ಅವಕಾಶಗಳು ಹೆಚ್ಚಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕುಟುಂಬದ ವ್ಯವಹಾರದಲ್ಲಿ ಪಾಲ್ಗೊಂಡಿರುವವರಿಗೆ ಸ್ವತಂತ್ರವಾಗಿ ವ್ಯಾಪಾರ- ವ್ಯವಹಾರ ಆರಂಭಿಸುವ ಬಗ್ಗೆ ಆಲೋಚನೆ ಮೂಡಬಹುದು. ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ನಿಮಗೆ ಇಷ್ಟ ಇಲ್ಲದ ವಿಭಾಗಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ. ಅಥವಾ ನಿಮಗೆ ಯಾರ ಜತೆಗೆ ಈಗಾಗಲೇ ವೈಮನಸ್ಯ ಇರುತ್ತದೋ ಅಂಥ ವ್ಯಕ್ತಿಗಳ ಕೈಕೆಳಗೆ ಅಥವಾ ಜತೆಯಲ್ಲಿ ಕೆಲಸ ಮಾಡಲೇಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ