
ಈ ದಿನ ಸಂಜೆಯ ಹೊತ್ತಿಗೆ ಅಶ್ವತ್ಥ ಮರದ ಕೆಳಗೆ ಕಡಲೆ ಹಿಟ್ಟಿನಿಂದ ಮಾಡಿದ ದೀಪ ಹಚ್ಚುವುದು ವಿಶೇಷ ಫಲ ನೀಡುತ್ತದೆ. ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ಹಾಗೂ ಅಡೆತಡೆಗಳು ನಿವಾರಣೆ ಆಗಲಿವೆ.
ಹಣಕಾಸು ವಿಚಾರದಲ್ಲಿ ಕಾಡುತ್ತಿರುವ ಗೊಂದಲಗಳು ಬಗೆಹರಿಯುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿವೆ. ನಿಮ್ಮೊಬ್ಬರಿಂದ ಏನಾದೀತು ಎಂಬಂತೆ ಇತರರು ಆಡಿದ ಮಾತುಗಳಿಗೆ ಉತ್ತರ ಎಂಬಂತೆ ಕೆಲವು ಅಸಾಧ್ಯವಾದ ಕೆಲಸ- ಕಾರ್ಯಗಳನ್ನು ಮಾಡಿ, ಮುಗಿಸುವುದಕ್ಕೆ ಸಫಲರಾಗುತ್ತೀರಿ. ವಿದೇಶಗಳಿಗೆ ಉದ್ಯೋಗ ನಿಮಿತ್ತವಾಗಿ ತೆರಳಬೇಕು ಎಂದಿರುವವರಿಗೆ ಈ ತನಕ ಏನಾದರೂ ಅಡೆತಡೆಗಳು ಕಾಡುತ್ತಿದ್ದಲ್ಲಿ ಅವುಗಳನ್ನು ನಿವಾರಿಸಿಕೊಳ್ಳುವುದಕ್ಕೆ ಅವಕಾಶಗಳಿವೆ.
ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂದು ಹುಡುಕಾಟ ನಡೆಸುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಅವಕಾಶಗಳು ಹೆಚ್ಚಿವೆ. ತರಕಾರಿ, ಹೂವು- ಹಣ್ಣಿನ ವ್ಯವಹಾರ, ಬ್ಯಾಂಗಲ್ ಸ್ಟೋರ್ಸ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬರಬಹುದು. ಇನ್ನು ದೀರ್ಘಾವಧಿಯ ಆರ್ಡರ್ ಗಳು ಸಹ ದೊರೆಯುವ ಅವಕಾಶಗಳು ಹೆಚ್ಚಿವೆ.
ಕುಟುಂಬದ ವ್ಯವಹಾರದಲ್ಲಿ ಪಾಲ್ಗೊಂಡಿರುವವರಿಗೆ ಸ್ವತಂತ್ರವಾಗಿ ವ್ಯಾಪಾರ- ವ್ಯವಹಾರ ಆರಂಭಿಸುವ ಬಗ್ಗೆ ಆಲೋಚನೆ ಮೂಡಬಹುದು. ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ನಿಮಗೆ ಇಷ್ಟ ಇಲ್ಲದ ವಿಭಾಗಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ. ಅಥವಾ ನಿಮಗೆ ಯಾರ ಜತೆಗೆ ಈಗಾಗಲೇ ವೈಮನಸ್ಯ ಇರುತ್ತದೋ ಅಂಥ ವ್ಯಕ್ತಿಗಳ ಕೈಕೆಳಗೆ ಅಥವಾ ಜತೆಯಲ್ಲಿ ಕೆಲಸ ಮಾಡಲೇಬೇಕಾದ ಅನಿವಾರ್ಯ ಸೃಷ್ಟಿ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.