AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

Daily Numerology March 13: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 13, 2026 | 12:25 AM

Share

ಕೃಷಿ ಅಥವಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಣಕಾಸಿನ ಹೊಂದಾಣಿಕೆ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಲ್ಲಿ ಮುಖ್ಯವಾದ ಮಾತುಕತೆ ನಡೆಸುವುದಕ್ಕೆ ತೆರಳುವಾಗ ಹಸಿರು ಬಣ್ಣದ ಕರ್ಚೀಫ್ ಅಥವಾ ವಸ್ತ್ರವನ್ನು ಬಳಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ತಂದೆ ಅಥವಾ ತಂದೆ ಸಮಾನರಾದವರ ಜತೆಗೆ ವಿವಿಧ ವಿಚಾರಗಳಿಗೆ ಅಭಿಪ್ರಾಯ ಭೇದಗಳು ಉದ್ಭವ ಆಗಲಿದೆ. ಒಂದು ವೇಳೆ ನೀವು ಇದನ್ನು ಕೂತು, ಮಾತನಾಡಿ ಬಗೆಹರಿಸಿಕೊಳ್ಳದೇ ಹೋದಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟು ಹೋಗಬಹುದು. ನಿಮ್ಮ ಸಾಮರ್ಥ್ಯಕ್ಕೆ ಮೀರಿದ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ಬೇರೆಯವರಿಗೆ ಒಪ್ಪಿಸಿ, ಮುಗಿಸಬೇಕು ಎಂದು ಪ್ರಯತ್ನ ಪಟ್ಟರೂ ಸಾಧ್ಯವಾಗದೇ ಹೋದೀತು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕೃಷಿಕರಿದ್ದಲ್ಲಿ ಬೆಳೆ ನಷ್ಟ ಅಥವಾ ಬೇರೆ ಯಾವುದಾದರೂ ರೀತಿಯಿಂದ ಹಣಕಾಸಿನ ವಿಚಾರದಲ್ಲಿ ನಿಮಗೆ ನಷ್ಟ ಆಗುವಂಥ ಯೋಗ ಇದೆ. ಯಾರಿಗಾದರೂ ವಸ್ತುವನ್ನು ಕೊಡುವುದಾಗಿಯೋ ಅಥವಾ ಇಂಥ ಕೆಲಸವನ್ನು ಇಷ್ಟೇ ಸಮಯದಲ್ಲಿ ಮಾಡಿಕೊಡುತ್ತೇನೆ ಎಂದು ಮಾತು ನೀಡುವ ಮುನ್ನ ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಸಾಧ್ಯಾಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದು ಮುಖ್ಯ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಡೆಯುವಷ್ಟು ದಿನ ನಾಣ್ಯ ಎಂಬಂತೆ ಕೆಲವು ಕೆಲಸಗಳನ್ನು ಡೆಡ್ ಲೈನ್ ಇಟ್ಟುಕೊಂಡು ಮಾಡುವುದಕ್ಕೆ ತೀರ್ಮಾನ ಮಾಡಲಿದ್ದೀರಿ. ಒಂದು ಹಂತದ ನಂತರ ಆ ಕೆಲಸವನ್ನು ಮಾಡಬಾರದು ಎಂಬ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಿದ್ದೀರಿ. ನಿಮ್ಮ ಈ ದಿನದ ನಡವಳಿಕೆ ಹಾಗೂ ಮಾತುಕತೆ ಆಪ್ತರಾದವರಿಗೆ ಆಶ್ಚರ್ಯ ಹಾಗೂ ಗಾಬರಿ ಉಂಟುಮಾಡುತ್ತದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ