
ಇಂದು ಲಕ್ಷ್ಮಿ ನಾರಾಯಣ ಪೂಜೆ ಮಾಡಿ. ಹಳದಿ ಬಣ್ಣದ ಹೂವುಗಳನ್ನು ವಿಷ್ಣುವಿಗೆ ಅರ್ಪಿಸಿ. ಬಾಕಿ ಹಣ ವಾಪಸ್ ಬರಲು ಇದು ಸಹಕಾರಿ ಆಗುತ್ತದೆ.
ಇನ್ನು ಸಾಕು ಎಂದು ನಿರ್ಧಾರ ಮಾಡಿ ನೀವಾಗಿಯೇ ಕೆಲವು ಸಂಬಂಧ, ಸ್ನೇಹದಿಂದ ದೂರವಾಗುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಅದರಲ್ಲೂ ನಿಮ್ಮಲ್ಲಿ ಕೆಲವರು ಸಂಬಂಧಪಟ್ಟವರಿಗೆ ನೇರವಾಗಿ ಈ ಬಗ್ಗೆ ಹೇಳಿಯೇ ದೂರವಾಗಲಿದ್ದೀರಿ. ಮುಖ್ಯವಾಗಿ ನಿಮಗೆ ಹಳೇ ಸಂಗತಿಗಳು ವಿಪರೀತ ಕಾಡಲಿವೆ. ಎಷ್ಟೇ ಪ್ರೀತಿ- ವಿಶ್ವಾಸ ತೋರಿದರೂ ಯಾಕೆ ಕೆಲವರಲ್ಲಿ ನಂಬಿಕೆ ಮೂಡಿಸುವುದಕ್ಕೆ ಸಾಧ್ಯವೇ ಆಗುವುದಿಲ್ಲ.
ಹೊಸದಾಗಿ ಹಣ ಹೂಡಿಕೆ ಮಾಡಿ, ಷೇರು- ಮ್ಯೂಚುವಲ್ ಫಂಡ್ ಗಳ ಮೂಲಕವಾಗಿ ಅಥವಾ ಕಮಾಡಿಟಿ ಮಾರ್ಕೆಟ್ ನಲ್ಲಿ ಟ್ರೇಡಿಂಗ್ ಮಾಡಬೇಕು ಎಂದುಕೊಂಡಿರುವವರಿಗೆ ತುಂಬ ಸಹಾಯ ಆಗುವಂಥ ವ್ಯಕ್ತಿಯೊಬ್ಬರ ಪರಿಚಯ ಆಗಲಿದೆ. ಅವರ ಸಲಹೆ- ಸೂಚನೆಗಳಿಂದ ನಿಮಗೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗಲಿದೆ. ಖಾಸಗಿ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ನಿಮಗೆ ಇಷ್ಟದ ಡಿಪಾರ್ಟ್ ಮೆಂಟ್ ಗೆ ವರ್ಗಾವಣೆ ಆಗಬಹುದು.
ಸಂಗಾತಿ ಜತೆಗಿನ ಬಾಂಧವ್ಯ ಗಟ್ಟಿಯಾಗಲಿದೆ. ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ತುಂಬ ಸಂತೋಷವಾಗಿ ದಿನ ಕಳೆಯುವಂಥ ಯೋಗ ಇದೆ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ದೊಡ್ಡ ಮಟ್ಟದ ಅವಕಾಶಗಳು ಹುಡುಕಿಕೊಂಡು ಬರಲಿವೆ. ಈ ತನಕ ಗಂಭೀರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯೋಪಚಾರ ದೊರೆಯಲಿದ್ದು, ಮನಸ್ಸಿಗೆ ಸಮಾಧಾನ ದೊರೆಯಲಿದೆ.
ಲೇಖನ- ಸ್ವಾತಿ ಎನ್.ಕೆ.