AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

Daily Numerology March 14: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 14, 2026 | 12:35 AM

Share
ಈ ದಿನ ಶಮಿ ವೃಕ್ಷದ ಆರಾಧನೆಯನ್ನು ಮಾಡಿ. ಸಂಜೆ ಸಮಯದಲ್ಲಿ ಶಮಿ (ಬನ್ನಿ) ಮರದ ಬುಡದಲ್ಲಿ ದೀಪ ಹಚ್ಚುವುದು ವೃತ್ತಿಜೀವನದ ಅಡೆತಡೆಗಳನ್ನು ನಿವಾರಿಸುತ್ತದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಭೂಮಿ ಅಥವಾ ಮನೆಗೆ ಸಂಬಂಧಿಸಿದ ದಾಖಲೆ- ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುತ್ತಾ ಇರುವವರಿಗೆ ಇಷ್ಟು ಸಮಯ ಕಾಡುತ್ತಿದ್ದ ಹಿನ್ನಡೆ ಅಥವಾ ವಿಳಂಬ ಗತಿ ಇದ್ದಲ್ಲಿ ಅದು ನಿವಾರಣೆ ಆಗುವಂಥ ಯೋಗ ಇದೆ. ಅಯ್ಯೋ, ಬೇರೆಯವರಿಂದ ಸಹಾಯ ಕೇಳಬೇಕಾದ ಸನ್ನಿವೇಶ ಬರುತ್ತದೆಯೇ ಎಂದು ಆತಂಕಗೊಂಡಿದ್ದಲ್ಲಿ ಇತರರ ಸಹಾಯ ಇಲ್ಲದೆ ಕೆಲಸ- ಕಾರ್ಯಗಳು ಆಗುವುದಕ್ಕೆ ಬೇಕಾದದ್ದು ದೊರೆಯುವ ಅವಕಾಶ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ದೇವತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಒಂದು ಬಗೆಯ ಸಮಾಧಾನ, ನೆಮ್ಮದಿ ದೊರೆಯಲಿದೆ. ಮನೆಯಿಂದ ದೂರದಲ್ಲಿ ನಿಮ್ಮ ಹಿರಿಯರು ಇದ್ದಲ್ಲಿ ಅಥವಾ ವೃದ್ಧಾಶ್ರಮ ಅಥವಾ ಇನ್ಯಾವುದಾದರೂ ಕಡೆ ಮನೆಯ ಹಿರಿಯರನ್ನು ಬಿಟ್ಟಿದ್ದಲ್ಲಿ ಅವರ ಆರೋಗ್ಯ ಸಮಸ್ಯೆಗಳು ಆತಂಕಕ್ಕೆ ಕಾರಣ ಆಗಲಿದೆ. ಇದೇ ಕಾರಣಕ್ಕೆ ತುರ್ತಾಗಿ ಹಣದ ಅಗತ್ಯ ಕಂಡುಬರಲಿದೆ. ನಿಮ್ಮದು ಬೇಜವಾಬ್ದಾರಿ ಎಂಬ ಆಕ್ಷೇಪಗಳನ್ನು ಕೇಳಿಸಿಕೊಳ್ಳುವಂತಾಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಇತರರ ಹಣದ ನಿಗಾ ಮಾಡುವ ಅಥವಾ ಆ ಹಣದ ಲೆಕ್ಕಾಚಾರದ ವ್ಯವಹಾರವನ್ನು ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ ಅಂತಾದಲ್ಲಿ ಇತರ ದಿನಗಳಿಗಿಂತ ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಮದುವೆ ನಿಶ್ಚಯ ಆಗಿರುವಂಥವರಿಗೆ ಅಂದುಕೊಂಡಿದ್ದಕ್ಕಿಂತ ಖರ್ಚು ಹೆಚ್ಚಾಗುವ ಸುಳಿವು ದೊರೆಯಲಿದೆ. ಈಗಾಗಲೇ ಇದಕ್ಕಾಗಿ ಹಣ ಹೊಂದಿಸಿಕೊಂಡಿದ್ದವರಿದ್ದರೆ ಇದೀಗ ಮತ್ತೆ ಸಾಲ ಮಾಡಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು