
ಈ ದಿನ ನೀವು ಹನುಮಾನ್ ಚಾಲೀಸಾ ಪಠಿಸುವುದರಿಂದ ಮಾತು ಮತ್ತು ಆರೋಗ್ಯದ ಏರುಪೇರು ನಿಯಂತ್ರಣಕ್ಕೆ ಬರುತ್ತದೆ.
ಆಯಾ ಋತುಮಾನಕ್ಕೆ ತಕ್ಕಂತೆ ಆರೋಗ್ಯದ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ನಿಮ್ಮಲ್ಲಿ ಯಾರಿಗೆ ಆಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುತ್ತದೋ ಅಂಥವರಿಗೆ ಅದು ಉಲ್ಬಣಿಸುವ ಸಾಧ್ಯತೆ ಸಿಕ್ಕಾಪಟ್ಟೆ ಇದೆ. ಮುಖ್ಯವಾಗಿ ನಿಮಗೆ ಯಾವ ಆಹಾರ ಪದಾರ್ಥವು ಅಲರ್ಜಿಯೋ ಅಂಥ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು.
ಈ ದಿನ ನಿಮ್ಮ ಬಾಯಿಯ ಕಾರಣಕ್ಕೆ ಸಮಸ್ಯೆಯನ್ನು ಮಾಡಿಕೊಳ್ಳಲಿದ್ದೀರಿ. ಅದು ಬಾಯಿ ಚಪಲಕ್ಕೆ ಬಿದ್ದು, ವಿಪರೀತ ರುಚಿರುಚಿಯಾದದ್ದನ್ನು ಸೇವಿಸಿ ಸಮಸ್ಯೆ ಮಾಡಿಕೊಳ್ಳುತ್ತೀರೋ ಅಥವಾ ಆಡಬಾರದ ಮಾತು ಹಾಗೂ ಆಡಬಾರದ ಸ್ಥಳದಲ್ಲಿ ಆಡಿ, ತೊಂದರೆ ಮೈ ಮೇಲೆ ಎಳೆದುಕೊಳ್ಳುತ್ತೀರೋ ಒಟ್ಟಿನಲ್ಲಿ ನೆಮ್ಮದಿಯಂತೂ ಇಲ್ಲದಂತಾಗುತ್ತದೆ. ಇನ್ನು ಕೆಲವರಿಗೆ ಕೂದಲು ಹಾಗೂ ಚರ್ಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಕಾಡಬಹುದು. ಅಥವಾ ನೀವು ಈಗಾಗಲೇ ತೆಗೆದುಕೊಂಡ ಔಷಧಿಯಿಂದ ಸಮಸ್ಯೆ ಇನ್ನೂ ವಿಪರೀತಕ್ಕೆ ಹೋಗಬಹುದು.
ನಿಮ್ಮ ಆಲೋಚನೆಗೆ ಮನ್ನಣೆ ದೊರೆಯಲಿದೆ. ನನ್ನ ಮಾತಿಗೆ ಯಾವ ಮಹತ್ವ ಇದೆ ಎಂದುಕೊಂಡು ಇಷ್ಟು ಸಮಯ ನೀವೇನಾದರೂ ಇದ್ದಲ್ಲಿ ಈ ದಿನ ಅಭಿಪ್ರಾಯವನ್ನೇ ಬದಲಿಕೊಳ್ಳುವಂಥ ಬೆಳವಣಿಗೆಗಳು ಆಗಲಿವೆ. ಯಾರು ನಿಮ್ಮ ಬಗ್ಗೆ ಲಘುವಾಗಿ ಪರಿಗಣಿಸಿರುತ್ತಾರೋ ಅಂಥವರಿಗಂತೂ ಭಾರೀ ಅಚ್ಚರಿ ಮೂಡುವಂತೆ ಆಗುತ್ತದೆ. ಒಂದು ವೇಳೆ ನೀವೇನಾದರೂ ಆಸ್ತಿ ಮಾರಾಟಕ್ಕೆ ಇಟ್ಟಿದ್ದಲ್ಲಿ ನೀವು ನಿರೀಕ್ಷೆ ಮಾಡಿದಂಥ ಅಥವಾ ನಿಮ್ಮಲ್ಲಿ ಕೆಲವರಿಗೆ ನಿರೀಕ್ಷೆಯನ್ನು ಮೀರಿ ಬೆಲೆಯು ದೊರೆಯಬಹುದು.
ಲೇಖನ- ಸ್ವಾತಿ ಎನ್.ಕೆ.