AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 19, 2026 | 12:45 AM

Share

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ ಮಾಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗಲಿದೆ. ಯಾವ ಕೆಲಸವನ್ನು ಮಾಡಬಾರದು, ಯಾವ ವ್ಯಕ್ತಿಯ ಜತೆಗೆ ಮಾತನಾಡಬಾರದು ಎಂದುಕೊಂಡಿರುತ್ತೀರೋ ಅದೇ ಕೆಲಸವನ್ನು ಮಾಡುತ್ತೀರಿ ಹಾಗೂ ನೀವಾಗಿಯೇ ಆ ವ್ಯಕ್ತಿಯ ಜತೆಗೆ ಮಾತನಾಡುತ್ತೀರಿ. ಹಾಗಂತ ನೀವು ಮಾನಸಿಕವಾಗಿ ದುರ್ಬಲರಾದಿರಿ ಅಂತಲ್ಲ. ಯಾವುದೇ ಮನಸ್ಸಿನ ಕಹಿಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನಿಮಗೆ ಇಷ್ಟ ಇರುವುದಿಲ್ಲ ಎಂದರ್ಥ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಮನಸ್ತಾಪಗಳು- ಅಭಿಪ್ರಾಯ ಭೇದಗಳು ನಿವಾರಣೆ ಆಗಲಿವೆ. ತಂದೆ- ತಾಯಿಯ ಆರೋಗ್ಯ ವಿಚಾರ ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಆದರೆ ಅದಕ್ಕೆ ಸೂಕ್ತ ಪರಿಹಾರೋಪಾಯಗಳು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಈ ದಿನ ಮಿಶ್ರ ಫಲಿತಾಂಶ ದೊರೆಯಲಿದೆ. ಕೆಲವು ಬೆಳವಣಿಗೆಗಳು ನಿಮಗೆ ಪೂರಕವಾಗಿಯೂ ಮತ್ತೆ ಕೆಲವು ಬಾಧಕವಾಗಿಯೂ ಪರಿಣಮಿಸಬಹುದು.

ಲೇಖನ- ಸ್ವಾತಿ ಎನ್.ಕೆ.

Follow Us
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ