
ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ.
ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ ಮಾಡುವುದು ಒಳ್ಳೆಯದು.
ನಿಮ್ಮ ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗಲಿದೆ. ಯಾವ ಕೆಲಸವನ್ನು ಮಾಡಬಾರದು, ಯಾವ ವ್ಯಕ್ತಿಯ ಜತೆಗೆ ಮಾತನಾಡಬಾರದು ಎಂದುಕೊಂಡಿರುತ್ತೀರೋ ಅದೇ ಕೆಲಸವನ್ನು ಮಾಡುತ್ತೀರಿ ಹಾಗೂ ನೀವಾಗಿಯೇ ಆ ವ್ಯಕ್ತಿಯ ಜತೆಗೆ ಮಾತನಾಡುತ್ತೀರಿ. ಹಾಗಂತ ನೀವು ಮಾನಸಿಕವಾಗಿ ದುರ್ಬಲರಾದಿರಿ ಅಂತಲ್ಲ. ಯಾವುದೇ ಮನಸ್ಸಿನ ಕಹಿಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನಿಮಗೆ ಇಷ್ಟ ಇರುವುದಿಲ್ಲ ಎಂದರ್ಥ.
ಮನಸ್ತಾಪಗಳು- ಅಭಿಪ್ರಾಯ ಭೇದಗಳು ನಿವಾರಣೆ ಆಗಲಿವೆ. ತಂದೆ- ತಾಯಿಯ ಆರೋಗ್ಯ ವಿಚಾರ ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಆದರೆ ಅದಕ್ಕೆ ಸೂಕ್ತ ಪರಿಹಾರೋಪಾಯಗಳು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಈ ದಿನ ಮಿಶ್ರ ಫಲಿತಾಂಶ ದೊರೆಯಲಿದೆ. ಕೆಲವು ಬೆಳವಣಿಗೆಗಳು ನಿಮಗೆ ಪೂರಕವಾಗಿಯೂ ಮತ್ತೆ ಕೆಲವು ಬಾಧಕವಾಗಿಯೂ ಪರಿಣಮಿಸಬಹುದು.
ಲೇಖನ- ಸ್ವಾತಿ ಎನ್.ಕೆ.