AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ನಿಮ್ಮ ರಾಶಿಗನುಗುಣವಾಗಿ ಮಾರ್ಚ್ ಎರಡನೇ ವಾರದ ಭವಿಷ್ಯ ತಿಳಿಯಿರಿ

2026ರ ಮಾರ್ಚ್ ಎರಡನೇ ವಾರದಲ್ಲಿ ಗ್ರಹಗಳ ಸ್ಥಾನ ಬದಲಾವಣೆ ಹಾಗೂ ಶುಕ್ರನ ರಾಶಿ ಪರಿವರ್ತನೆಯಿಂದ ಅನೇಕ ಶುಭ ಫಲಗಳು ನಿಮ್ಮದಾಗಲಿವೆ. ಪ್ರತಿಯೊಂದು ರಾಶಿಯವರಿಗೂ ಈ ವಾರ ಮಿಶ್ರಫಲಗಳಿದ್ದು, ಉದ್ಯೋಗ, ಆರ್ಥಿಕ, ಕೌಟುಂಬಿಕ ಹಾಗೂ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿ ಇಲ್ಲಿದೆ. ಒತ್ತಡವಿಲ್ಲದೆ ಸಕಾರಾತ್ಮಕವಾಗಿ ಮುನ್ನಡೆಯಲು ಸಲಹೆಗಳನ್ನು ನೀಡಲಾಗಿದೆ.

Weekly Horoscope: ನಿಮ್ಮ ರಾಶಿಗನುಗುಣವಾಗಿ  ಮಾರ್ಚ್ ಎರಡನೇ ವಾರದ ಭವಿಷ್ಯ ತಿಳಿಯಿರಿ
Weekly Horoscope
ಅಕ್ಷತಾ ವರ್ಕಾಡಿ
|

Updated on: Mar 08, 2026 | 10:09 AM

Share

ಇದು 2026ರ ಮಾರ್ಚ್ ನ ಎರಡನೇ ವಾರ. ಕೆಲವು ಗ್ರಹಗಳ ಸಣ್ಣ ಸ್ಥಾನ ಬದಲಾವಣೆಯಿಂದ ಹಾಗೂ ಶುಕ್ರನ ರಾಶಿ ಪರಿವರ್ತನೆಯಿಂದ ಅನೇಕ ಶುಭಗಳು ನಮ್ಮದಾಗಲಿದೆ. ಒತ್ತಡದ ಸ್ಥಿತಿಗಳನ್ನು ನಿರ್ಮಾಣ ಮಾಡಿಕೊಳ್ಳದೇ ಇರುವವಂತೆ ನೋಡಿಕೊಳ್ಳಿ.

​ಮೇಷ:

ಈ ವಾರ ನಿಮಗೆ ಮಿಶ್ರಫಲ. ವೃತ್ತಿಯಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು, ಆದರೆ ಧೈರ್ಯಗೆಡಬೇಡಿ. ಆರ್ಥಿಕವಾಗಿ ಸಾಧಾರಣ ಸುಧಾರಣೆ ಕಂಡುಬರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಸ್ನೇಹಿತರ ಬೆಂಬಲ ಸಿಗಲಿದೆ. ಕೋಪ ನಿಯಂತ್ರಿಸುವುದು ಉತ್ತಮ.

​ವೃಷಭ:

ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಭೂಮಿ ಅಥವಾ ವಾಹನ ಖರೀದಿಯ ಚಿಂತನೆ ನಡೆಸುವಿರಿ. ಆರೋಗ್ಯ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಸಮಯ ಕಳೆಯಲು ಇದು ಸಕಾಲ.

​ಮಿಥುನ:

ಕೆಲಸದ ಒತ್ತಡ ಹೆಚ್ಚಾಗಬಹುದು, ಸಂಘಟಿತರಾಗಿರುವುದು ಮುಖ್ಯ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಶತ್ರುಗಳ ಬಗ್ಗೆ ಜಾಗರೂಕರಾಗಿರಿ. ವಿದೇಶ ಪ್ರಯಾಣದ ಯೋಗವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವ ನಿರೀಕ್ಷೆಯಿದೆ.

ಕರ್ಕಾಟಕ:

ಹೊಸ ಕಾರ್ಯಗಳನ್ನು ಪ್ರಾರಂಭಿಸಲು ಇದು ಶುಭ ಸಮಯ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕ ಲಾಭದ ಸಾಧ್ಯತೆ ಇದೆ. ಪ್ರೇಮ ಜೀವನದಲ್ಲಿ ಮಧುರತೆ ಇರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಸಾಮಾಜಿಕ ಗೌರವ ಹೆಚ್ಚಾಗುತ್ತದೆ. ನಿಮ್ಮ ಮಾತಿನ ಮೇಲೆ ಹತೋಟಿ ಇರಲಿ.

​ಸಿಂಹ:

ವ್ಯವಹಾರದಲ್ಲಿ ಸ್ವಲ್ಪ ಏರಿಳಿತಗಳಿರಬಹುದು, ಎಚ್ಚರಿಕೆ ಅಗತ್ಯ. ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಮಕ್ಕಳ ಪ್ರಗತಿಯಿಂದ ನೆಮ್ಮದಿ ಸಿಗಲಿದೆ. ದೂರದ ಪ್ರಯಾಣವನ್ನು ಸದ್ಯಕ್ಕೆ ಮುಂದೂಡುವುದು ಉತ್ತಮ. ಹೂಡಿಕೆಯ ವಿಷಯದಲ್ಲಿ ತಜ್ಞರ ಸಲಹೆ ಪಡೆಯಿರಿ.

​ಕನ್ಯಾ:

ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಂಭವವಿದೆ. ಆಹಾರದ ವಿಚಾರದಲ್ಲಿ ಜಾಗ್ರತೆ ಇರಲಿ. ಆರ್ಥಿಕ ಪರಿಸ್ಥಿತಿ ಸದೃಢವಾಗಿರುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಿರಿಯರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ.

​ತುಲಾ:

ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ಸಂಗಾತಿಯ ಬೆಂಬಲದಿಂದ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹೂಡಿಕೆಯಿಂದ ಲಾಭವಾಗಲಿದೆ. ಹೊಸ ವ್ಯಕ್ತಿಗಳ ಪರಿಚಯ ವೃತ್ತಿಜೀವನಕ್ಕೆ ಸಹಕಾರಿ. ಕಣ್ಣಿನ ಸಮಸ್ಯೆ ಕಾಡಬಹುದು, ನಿರ್ಲಕ್ಷಿಸಬೇಡಿ. ಸಾಲ ನೀಡುವ ಮುನ್ನ ಆಲೋಚಿಸಿ. ಮನಸ್ಸಿಗೆ ಶಾಂತಿ ದೊರೆಯುವ ವಾರವಿದು.

​ವೃಶ್ಚಿಕ:

ಈ ವಾರ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿವೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಸಾಲಬಾಧೆಯಿಂದ ಮುಕ್ತಿ ಪಡೆಯಲು ಹಾದಿ ಸುಗಮವಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ದೈವಿಕ ಚಿಂತನೆಯಿಂದ ಮಾನಸಿಕ ಧೈರ್ಯ ಹೆಚ್ಚಲಿದೆ.

​ಧನು:

ಅದೃಷ್ಟ ನಿಮ್ಮ ಪರವಾಗಿದ್ದು, ಸ್ಥಗಿತಗೊಂಡ ಕೆಲಸಗಳು ಪುನರಾರಂಭಗೊಳ್ಳಲಿವೆ. ಆದಾಯದ ಹೊಸ ಮೂಲಗಳು ಗೋಚರಿಸುತ್ತವೆ. ಉನ್ನತ ವ್ಯಾಸಂಗ ಮಾಡುವವರಿಗೆ ಶುಭ ಕಾಲ. ಕುಟುಂಬದಲ್ಲಿ ಸಂತಸದ ವಾತಾವರಣವಿರುತ್ತದೆ. ನಿಮ್ಮ ಯೋಜನೆಗಳನ್ನು ಗೌಪ್ಯವಾಗಿಡಿ. ಪ್ರಯಾಣದಿಂದ ಲಾಭ ಉಂಟಾಗಲಿದೆ. ದಾನಧರ್ಮಗಳಲ್ಲಿ ಆಸಕ್ತಿ ತೋರುವಿರಿ.

​ಮಕರ:

ಕಠಿಣ ಪರಿಶ್ರಮದಿಂದ ಲಾಭ ಗಳಿಸುವಿರಿ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಆತುರದ ನಿರ್ಧಾರಗಳು ನಷ್ಟಕ್ಕೆ ಕಾರಣವಾಗಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮೋಜು-ಮಸ್ತಿಗಾಗಿ ಹಣ ವ್ಯಯ ಮಾಡುವಿರಿ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಯೋಗ ಮತ್ತು ಧ್ಯಾನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

​ಕುಂಭ:

ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರುತ್ತದೆ. ಹೊಸ ಉದ್ಯಮ ಆರಂಭಿಸಲು ತಜ್ಞರ ಮಾರ್ಗದರ್ಶನ ಪಡೆಯಿರಿ. ಹಳೆ ಬಾಕಿ ವಸೂಲಿಯಾಗಲಿದೆ. ಸ್ತ್ರೀಯರಿಗೆ ಹೆಚ್ಚಿನ ಗೌರವ ಸಿಗಲಿದೆ. ಸಂವಹನದಲ್ಲಿ ಸ್ಪಷ್ಟತೆ ಇರಲಿ. ಬೆನ್ನು ನೋವು ಅಥವಾ ಕೀಲು ನೋವು ಕಾಣಿಸಿಕೊಳ್ಳಬಹುದು. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ.

​ಮೀನ:

ಮಾನಸಿಕವಾಗಿ ಸ್ವಲ್ಪ ಗೊಂದಲವಿರಬಹುದು, ನಿರ್ಧಾರ ತೆಗೆದುಕೊಳ್ಳುವಾಗ ಎಚ್ಚರಿಕೆ ಇರಲಿ. ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುತ್ತದೆ. ನೆರೆಹೊರೆಯವರೊಂದಿಗೆ ಸೌಹಾರ್ದತೆಯಿಂದಿರಿ. ದೈಹಿಕ ವ್ಯಾಯಾಮಕ್ಕೆ ಆದ್ಯತೆ ನೀಡಿ. ಶುಭ ವಾರ್ತೆ ಕೇಳುವ ಸಾಧ್ಯತೆ ಇದೆ. ದೇವತಾ ದರ್ಶನ ಭಾಗ್ಯ ಕೂಡಿಬರಲಿದೆ. ತಾಳ್ಮೆಯಿಂದ ಕೆಲಸ ನಿರ್ವಹಿಸಿ.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ಸಚಿವೆ
ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ಕ್ಷಮೆಯಾಚಿಸಿದ ಜಪಾನ್ ಸಚಿವೆ
ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಬಲಿ
ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಬಲಿ
ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ
ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ
ನಮ್ಮ ನೆರಳನ್ನ ನಾವೇ ತುಳಿದರೆ ತಪ್ಪಿದ್ದಲ್ಲ ಕಂಟಕ!
ನಮ್ಮ ನೆರಳನ್ನ ನಾವೇ ತುಳಿದರೆ ತಪ್ಪಿದ್ದಲ್ಲ ಕಂಟಕ!
ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು!
ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು!
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ