AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 21, 2026 | 12:05 AM

Share

ಮನೆಯಲ್ಲಿರುವ ತುಳಸಿ ಅಥವಾ ಇತರ ಹಸಿರು ಗಿಡಗಳಿಗೆ ನೀರು ಹಾಕುವುದರಿಂದ ನಿಮ್ಮ ಮಾತಿನ ಬಲ ಹೆಚ್ಚಿ ಸಂವಹನ ಉತ್ತಮವಾಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಸೋಷಿಯಲ್ ಕಾಂಟ್ಯಾಕ್ಟ್ ಬಹಳ ಮುಖ್ಯ ಎಂದು ಬಲವಾಗಿ ಅನಿಸಲಿದೆ. ನಿಮಗೆ ಬಹಳ ಇಷ್ಟವಾಗುವಂಥ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಿರು ಪ್ರವಾಸಕ್ಕಾದರೂ ತೆರಳುವಂಥ ಯೋಗ ಇದೆ. ಇಲ್ಲದಿದ್ದಲ್ಲಿ ಹೋಟೆಲ್, ರೆಸ್ಟೋರೆಂಟ್ ಇಂಥ ಕಡೆಗಳಲ್ಲಿಯಾದರೂ ಒಟ್ಟಿಗೆ ಸಮಯ ಕಳೆಯುವ ಯೋಗ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈಗಾಗಲೇ ಪ್ರೀತಿ- ಪ್ರೇಮದಲ್ಲಿ ಒಡುಕು ಮೂಡಿ, ಸಣ್ಣ- ಪುಟ್ಟ ಮನಸ್ತಾಪ- ಅಭಿಪ್ರಾಯ ಭೇದಗಳು ಏನಾದರೂ ಕಾಣಿಸಿಕೊಂಡಿದ್ದಲ್ಲಿ ಅದನ್ನು ನಿವಾರಿಸಿಕೊಳ್ಳುವುದಕ್ಕೆ ವೇದಿಕೆ ದೊರೆಯಲಿದೆ. ನೀವಾಗಿಯೇ ತೆಗೆದುಕೊಂಡಂಥ ಜವಾಬ್ದಾರಿಗಳನ್ನು ತುಂಬ ಚೆನ್ನಾಗಿ ನಿರ್ವಹಣೆ ಮಾಡಲಿದ್ದೀರಿ. ನಿಮ್ಮೆದುರಿಗೆ ನಿಂತು ವ್ಯವಹಾರದ ವಿಚಾರಕ್ಕೆ ದಾರಿ ತಪ್ಪಿಸುವುದಕ್ಕೆ ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬಷ್ಟು ಕಟ್ಟುನಿಟ್ಟಾಗಿ ನೀವು ನಡೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸಂಕೋಚ ಪಟ್ಟು ಸುಮ್ಮನಿರುವುದರಲ್ಲಿ ಅರ್ಥವಿಲ್ಲ ಎಂದೆನಿಸಲಿದೆ. ನಿಮ್ಮ ಎಲ್ಲ ವಿಚಾರಗಳಿಗೆ, ಸಂಗತಿಗಳಿಗೆ ಮೂಗು ತೂರಿಸಿಕೊಂಡು ಬರುತ್ತಿದ್ದ ಅಥವಾ ಬರುತ್ತಿರುವ ವ್ಯಕ್ತಿಯೊಬ್ಬರಿಗೆ ಮುಲಾಜಿಲ್ಲದೆ ಎಚ್ಚರಿಕೆಯನ್ನು ನೀಡುವ ಸಾಧ್ಯತೆಗಳಿವೆ. ಇಷ್ಟು ಸಮಯ ಯಾವುದೋ ಸಂಕೋಚದಿಂದ ಹೇಳದೇ ಉಳಿದ ಸಂಗತಿಗಳನ್ನು ಏಕಾಏಕಿ ಹೇಳಿ ಮುಗಿಸಲಿದ್ದೀರಿ. ಕಫ- ಶೀತ ಮೊದಲಾದ ಸಮಸ್ಯೆಗಳು ಕಾಡಬಹುದು, ಜಾಗ್ರತೆ.

ಲೇಖನ- ಸ್ವಾತಿ ಎನ್.ಕೆ.

Follow Us
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ