
ಮನೆಯ ಬಾಲ್ಕನಿ ಅಥವಾ ಟೆರೇಸ್ ಮೇಲೆ ಪಕ್ಷಿಗಳಿಗೆ ನೀರು ಮತ್ತು ಧಾನ್ಯವನ್ನು ಇಡಿ. ಇದು ವೃತ್ತಿಜೀವನದ ಅಡೆತಡೆಗಳನ್ನು ದೂರ ಮಾಡುತ್ತದೆ.
ಏನು ಅಂದುಕೊಂಡಿದ್ದರೂ ಚರ್ಚಿಸಿದ್ದರೂ ಅದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ನಿಮಗೆ ಸಮಸ್ಯೆ ಮಾಡುತ್ತಿರುವವರು ಯಾರು, ವ್ಯವಹಾರಗಳಲ್ಲಿ ಅಡೆತಡೆಗಳನ್ನು ಒಡ್ಡುತ್ತಿರುವವರು ಯಾರು ಎಂಬುದನ್ನು ಪತ್ತೆ ಹಚ್ಚುವುದು ಹೇಗೆ ಎಂದು ಆಲೋಚಿಸುವುದಕ್ಕೇ ಅಂತ ಬಹಳ ಸಮಯ ಹೋಗಿಬಿಡುತ್ತದೆ. ನಿಮ್ಮ ಜತೆಗಿರುವವರು ಹಾಗೂ ಆಪ್ತರಾಗಿರುವವರು, ಕಡೆಗೆ ಕುಟುಂಬ ಸದಸ್ಯರ ಬಗ್ಗೆಯೇ ನಾನಾ ರೀತಿಯಲ್ಲಿ ಆಲೋಚನೆಗಳು ಮೂಡಲಿವೆ.
ನಿಮಗೆ ಬರುವಂಥ ಕೆಲಸಗಳು, ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಮುನ್ನ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡುವುದು ಉತ್ತಮ. ಒಮ್ಮೆ ಹೂಂ ಎಂದು ಒಪ್ಪಿಕೊಂಡ ಮೇಲೆ ಹಲವು ಬದಲಾವಣೆಗಳನ್ನು ಹೇಳುವ ಮೂಲಕ ಒತ್ತಡವನ್ನು ಹೇರಬಹುದು. ದಿನಂಪ್ರತಿ ನೋಡುವಂಥ ಹಾಗೂ ವ್ಯವಹರಿಸುವಂಥ ವ್ಯಕ್ತಿಗಳಲ್ಲೇ ದೊಡ್ಡ ಬದಲಾವಣೆಗಳನ್ನು ನೋಡುವಂತಾಗುತ್ತದೆ. ಹಣಕಾಸಿನ ವ್ಯವಹಾರ ಎಂದಾದರೆ ಮೈ ತುಂಬ ಎಚ್ಚರಿಕೆ ಇರಲಿ.
ಯಾವುದನ್ನು ಹೊಂದಾಣಿಕೆ ಮಾಡಬೇಕಿರುತ್ತದೆ ಅದು ಸಾಧ್ಯವಾಗಲಿದೆ ಎಂಬುದು ನಿಮಗೆ ಈ ದಿನ ಬಹಳ ಸಮಾಧಾನ ದೊರೆಯುವಂಥ ದಿನವಾಗಿರುತ್ತದೆ. ಒಂದು ವೇಳೆ ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ನಿಮಗೆ ತೃಪ್ತಿ ದೊರೆಯುವಂಥ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅವಕಾಶಗಳು ಹುಡುಕಿಕೊಂಡು ಬರಬಹುದು. ಇತರರು ಬಹಳ ಕಷ್ಟಪಟ್ಟು ಮಾಡುತ್ತಿರುವ ಅಥವಾ ಮಾಡುವಂಥ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲಿದ್ದೀರಿ.
ಲೇಖನ- ಸ್ವಾತಿ ಎನ್.ಕೆ.