AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 21ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 21ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 21ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 21, 2026 | 12:40 AM

Share

ಜೇಬಿನಲ್ಲಿ ಯಾವಾಗಲೂ ಒಂದು ಬೆಳ್ಳಿಯ ನಾಣ್ಯ ಅಥವಾ ಹಸಿರು ಬಣ್ಣದ ಕರವಸ್ತ್ರ ಇಟ್ಟುಕೊಳ್ಳಿ. ಇದು ಆರ್ಥಿಕ ಸ್ಥಿರತೆಗೆ ಸಹಕಾರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮಲ್ಲಿ ಯಾರು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನವನ್ನು ಮಾಡುತ್ತಿದ್ದೀರಿ ಅಂಥವರಿಗೆ ಇತರರ ಸಹಾಯದ ಅಥವಾ ಶಿಫಾರಸಿನ ಮೂಲಕ ಸುಲಭವಾಗಿ ಕೆಲಸಗಳು ಆಗಬಹುದು. ಇನ್ನು ಯಾರು ಮನೆಯಲ್ಲಿ ಕೆಲವು ಸಿವಿಲ್ ಕೆಲಸಗಳನ್ನು ಮಾಡಿಸಬೇಕು ಅಂದುಕೊಳ್ಳುತ್ತೀರೋ ಅಂಥವರಿಗೆ ಉತ್ತಮ ಕೆಲಸಗಾರರ ಪರಿಚಯವಾಗಿ, ನೀವು ಅಂದುಕೊಂಡಿದ್ದಕ್ಕಿಂತ ಕಡಿಮೆ ಮೊತ್ತದಲ್ಲಿ ಕೆಲಸ ಮುಗಿಯಲಿಕ್ಕೆ ಮಾರ್ಗ ಗೋಚರ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಈ ಹಿಂದಿನ ಕೆಲವು ಅನುಭವಗಳಿಂದಾಗಿ ಹಲ್ಲು ಕಚ್ಚಿಕೊಂಡು ಇರಬೇಕಾಗುತ್ತದೆ. ನಿಮಗೆ ಕುತ್ತಿಗೆ ತನಕ ಬಂದ ಕೋಪವನ್ನು ತಡೆದುಕೊಂಡು, ಕೆಲವು ಕೆಲಸಗಳನ್ನು ಮಾಡಲೇಬೇಕಾಗುತ್ತದೆ. ಒಂದೋ ವಿಷಯವನ್ನು ಅರ್ಥ ಮಾಡಿಕೊಳ್ಳದ ಅಥವಾ ಸನ್ನಿವೇಶಕ್ಕೆ ಸರಿಯಾಗಿ ಸ್ಪಂದಿಸದ ಕೆಲವರ ಜತೆಗೆ ವ್ಯವಹರಿಸಲೇ ಬೇಕಾದ ಒತ್ತಡಕ್ಕೆ ನೀವು ಸಿಲುಕಿಕೊಳ್ಳಲಿದ್ದೀರಿ. ನಿಮ್ಮ ಮೇಲೆ ವಿಪರೀತ ಅವಲಂಬಿತರಾದ ಕೆಲವು ಸ್ನೇಹಿತರ ನಿರೀಕ್ಷೆಗಳಿಗೆ ತಕ್ಕಂತೆ ನಡೆದುಕೊಳ್ಳುವುದು ಶ್ರಮವಾಗಿ ಪರಿಣಮಿಸಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಯಾರು ಸ್ವಂತ ವೃತ್ತಿ, ವ್ಯವಹಾರ ಅಥವಾ ವ್ಯಾಪಾರವನ್ನು ಮಾಡುತ್ತಿರುವಿರೋ ಅಂಥವರಿಗೆ ದೊಡ್ಡ ದೊಡ್ಡ ಅವಕಾಶಗಳು ಕಾಣಿಸುವಂತಾಗುತ್ತದೆ. ಅದೇ ವೇಳೆ ಆ ಕಡೆಗೆ ಗಮನವಿಟ್ಟು ಕಾರ್ಯ ನಿರ್ವಹಿಸುವುದು ಸವಾಲಾಗಿ ಪರಿಣಮಿಸುತ್ತದೆ. ಈ ದಿನ ನೀವು ನೋ ಪಾರ್ಕಿಂಗ್, ಒನ್ ವೇ ಅಥವಾ ಸಿಗ್ನಲ್ ಜಂಪ್ ಇಂಥ ಕಾರಣಗಳಿಗಾಗಿ ದಂಡ ಕಟ್ಟಬೇಕಾಗುತ್ತದೆ, ಎಚ್ಚರಿಕೆಯಿಂದ ಇರಿ.

ಲೇಖನ- ಸ್ವಾತಿ ಎನ್.ಕೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್