
ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ.
ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ ಇರುವ ಪುಸ್ತಕಗಳು, ಲ್ಯಾಪ್ ಟಾಪ್ ಅಥವಾ ಟ್ಯಾಬ್ಲೆಟ್ ಇಂಥವುಗಳ ಖರೀದಿಗಾಗಿ ಖರ್ಚು ಮಾಡುವ ಯೋಗ ಇದೆ.
ಸರ್ಕಾರದಿಂದ ಬರಬೇಕಾದ ಟ್ಯಾಕ್ಸ್ ರೀಫಂಡ್ ಸೇರಿದಂತೆ ಇತರ ಯಾವುದೇ ಬಾಕಿ ಇದ್ದರೂ ಅದು ಯಾವಾಗ ಬರಬಹುದು ಎಂಬ ಸುಳಿವು ದೊರೆಯಲಿದೆ. ಗಾಜಿನ ವಸ್ತುಗಳು ಅಥವಾ ಚೂಪಾದ ವಸ್ತುಗಳನ್ನು ಬಳಕೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು. ಹೋಟೆಲ್ ವ್ಯವಹಾರ ನಡೆಸುತ್ತಿರುವವರಿಗೆ ಹಣಕಾಸಿನ ಒತ್ತಡ ಕಾಣಿಸಿಕೊಳ್ಳಬಹುದು.
ಸ್ವಂತ ವ್ಯವಹಾರ- ವ್ಯಾಪಾರ ಆರಂಭ ಮಾಡಬೇಕು ಎಂದು ಹಣಕಾಸು ವ್ಯವಸ್ಥೆ ಮಾಡುತ್ತಿದ್ದೀರಿ ಎಂದಲ್ಲಿ ಅದು ಸಾಧ್ಯವಾಗಲಿದೆ. ವಾಹನ ಖರೀದಿ ಮಾಡುವುದಕ್ಕಾಗಿ ಬ್ಯಾಂಕ್- ಬ್ಯಾಂಕೇತರ ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡಿದ್ದಲ್ಲಿ ಅದು ಸಿಗುವ ಬಗ್ಗೆ ಖಾತ್ರಿ ದೊರೆಯಲಿದೆ. ಈ ಬಗ್ಗೆ ನಿಮಗೆ ಕಾಡುತ್ತಿರುವ ಆತಂಕ ದೂರವಾಗಲಿದೆ.
ಲೇಖನ- ಸ್ವಾತಿ ಎನ್.ಕೆ.