AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mercury Transit: ಬುಧ ಕರ್ಕಾಟಕ ರಾಶಿ ಪ್ರವೇಶ; ಈ 4 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ

ಜ್ಯೋತಿಷ್ಯದ ಪ್ರಕಾರ, ಶೀಘ್ರದಲ್ಲೇ ಬುಧ ಗ್ರಹ ಕರ್ಕಾಟಕ ರಾಶಿಗೆ ಸಂಚಾರ ಮಾಡಲಿದ್ದು, ಮಿಥುನ, ಕನ್ಯಾ, ಕರ್ಕಾಟಕ, ತುಲಾ ರಾಶಿಗಳಿಗೆ ವಿಶೇಷ ಅದೃಷ್ಟ ತರಲಿದೆ. ವೃತ್ತಿ, ಹಣಕಾಸು ಹಾಗೂ ಕುಟುಂಬ ಜೀವನದಲ್ಲಿ ಶುಭ ಫಲಗಳನ್ನು ನೀಡಲಿದೆ. ಆದಾಯ ಹೆಚ್ಚಳ, ಹೊಸ ಅವಕಾಶಗಳು ಮತ್ತು ವೈವಾಹಿಕ ಜೀವನದಲ್ಲಿ ಸಂತೋಷದಂತಹ ಸಕಾರಾತ್ಮಕ ಬದಲಾವಣೆಗಳು ಈ ರಾಶಿಗಳಿಗಾಗಿ ಕಾದಿವೆ.

Mercury Transit: ಬುಧ ಕರ್ಕಾಟಕ ರಾಶಿ ಪ್ರವೇಶ; ಈ 4 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ
ಬುಧ ಕರ್ಕಾಟಕ ರಾಶಿ ಪ್ರವೇಶ
ಅಕ್ಷತಾ ವರ್ಕಾಡಿ
|

Updated on: Jul 29, 2026 | 3:57 PM

Share

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಶಿ ಸಂಚಾರವು 12 ರಾಶಿಗಳ ಮೇಲೂ ವಿಭಿನ್ನ ಪರಿಣಾಮ ಬೀರುತ್ತದೆ. ಶೀಘ್ರದಲ್ಲೇ ಬುಧ ಗ್ರಹವು ಕರ್ಕಾಟಕ ರಾಶಿಗೆ ಪ್ರವೇಶಿಸಲಿದ್ದು, ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಅದೃಷ್ಟದ ಯೋಗಗಳು ಸೃಷ್ಟಿಯಾಗಲಿವೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಾರೆ. ವಿಶೇಷವಾಗಿ ಮಿಥುನ, ಕನ್ಯಾ, ಕರ್ಕಾಟಕ ಮತ್ತು ತುಲಾ ರಾಶಿಯವರಿಗೆ ಈ ಸಂಚಾರವು ವೃತ್ತಿ, ಹಣಕಾಸು ಹಾಗೂ ಕುಟುಂಬ ಜೀವನದಲ್ಲಿ ಶುಭ ಫಲಗಳನ್ನು ನೀಡುವ ಸಾಧ್ಯತೆ ಇದೆ.

ಮಿಥುನ ರಾಶಿ:

ಮಿಥುನ ರಾಶಿಯ ಅಧಿಪತಿ ಬುಧನಾಗಿರುವುದರಿಂದ ಈ ಸಂಚಾರವು ವಿಶೇಷ ಶುಭಫಲ ನೀಡಲಿದೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುವ ಸಾಧ್ಯತೆ ಇದೆ. ಆದಾಯ ಹೆಚ್ಚಾಗಬಹುದು ಮತ್ತು ಹೂಡಿಕೆಗಳಿಂದ ಉತ್ತಮ ಲಾಭ ದೊರೆಯಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.

ಕನ್ಯಾ ರಾಶಿ:

ಕನ್ಯಾ ರಾಶಿಯವರಿಗೂ ಬುಧನ ಸಂಚಾರ ಅನುಕೂಲಕರವಾಗಲಿದೆ. ಹೊಸ ಯೋಜನೆಗಳು ಯಶಸ್ವಿಯಾಗಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣಬಹುದು. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಆಗಸ್ಟ್‌ನಲ್ಲಿ ಈ 4 ರಾಶಿಗೆ ಸ್ವಂತ ಮನೆ ಯೋಗ ಮತ್ತು ಅನಿರೀಕ್ಷಿತ ಧನಲಾಭ!

ಕರ್ಕಾಟಕ ರಾಶಿ:

ಬುಧನ ಪ್ರವೇಶದಿಂದ ಕರ್ಕಾಟಕ ರಾಶಿಯವರಿಗೆ ಉದ್ಯೋಗ ಹಾಗೂ ವ್ಯವಹಾರದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಇದು ಅನುಕೂಲಕರ ಸಮಯ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಲಾಭದ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷ ಮತ್ತು ಆರ್ಥಿಕ ಸ್ಥಿರತೆ ಹೆಚ್ಚಾಗಬಹುದು.

ತುಲಾ ರಾಶಿ:

ತುಲಾ ರಾಶಿಯವರಿಗೆ ಹೊಸ ಜವಾಬ್ದಾರಿಗಳು ಮತ್ತು ವೃತ್ತಿಯಲ್ಲಿ ಪ್ರಗತಿಯ ಅವಕಾಶಗಳು ಸಿಗಬಹುದು. ಆದಾಯದಲ್ಲಿ ಹೆಚ್ಚಳ, ಹೂಡಿಕೆಗೆ ಅನುಕೂಲಕರ  ಸಮಯ ಮತ್ತು ಆರೋಗ್ಯದಲ್ಲಿ ಸುಧಾರಣೆ ಕಾಣುವ ಸಾಧ್ಯತೆ ಇದೆ. ಕುಟುಂಬ ಜೀವನವೂ ಸಂತೋಷಕರವಾಗಿರಲಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!