AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: istock
Rakesh Nayak Manchi
|

Updated on: Mar 18, 2023 | 6:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 18 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:40 ರಿಂದ 11:11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:40 ರಿಂದ 08:10ರ ವರೆಗೆ.

ಧನು: ಇಂದು ನಿಮಗೆ ಬಹಳ ಚೈತನ್ಯವಿರಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಂಡು ನಿರಾಳವಾಗುವಿರಿ. ಮಕ್ಕಳ ಹಣಕಾಸಿನ ಸಮಸ್ಯೆಯಿಂದ ನಿಮ್ಮ ಸಮಸ್ಯೆಗಳನ್ನು ದೊಡ್ಡ ಮಾಡಿಕೊಳ್ಳುವಿರಿ. ಸ್ವ ಉದ್ಯೋಗವನ್ನು ಮಾಡುತ್ತಿದ್ದರೆ ನಿರ್ಲಕ್ಷ್ಯ ಬೇಡ. ಸಂಗಾತಿಯ ಬೆಂಬಲವು ನಿಮಗೆ ಬಲವನ್ನು ಕೊಡುವುದು. ದಿನದ ಕೊನೆಯಲ್ಲಿ ಆಯಾಸದಿಂದ ಕೋಪ ಉಂಟಾಗುತ್ತದೆ. ಸ್ವಲ್ಪ ಹೊತ್ತು ವಿಶ್ರಾಂತಿ‌ಮಾಡಿ.

ಮಕರ: ಆಪ್ತಸ್ನೇಹಿತರ ಜೊತೆ ಉತ್ತಮ ಸಮಯವನ್ನು ಕಳೆಯಿರಿ. ನಿಮ್ಮ ಅರ್ಹತೆಯ ಯೋಗ್ಯವಾದ ಕೆಲವು ಪ್ರಮುಖ ನಿರ್ಧಾರಗಳನ್ನು ಮಾಡುತ್ತೀರಿ. ಮಕ್ಕಳ ಯಶಸ್ಸಿನಿಂದಾಗಿ ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಅಕ್ರಮ ಕೆಲಸಗಳು ಮಾಡುವಂತಹ ಸಂದರ್ಭ ಬಂದಲ್ಲಿ ಅದರಿಂದ ದೂರವಿರಿ. ಇಲ್ಲದಿದ್ದರೆ ತೊಂದರೆಗೆ ಸಿಲುಕಬಹುದು. ಇದು ನಿಮ್ಮ ದಕ್ಷತೆಯ ಮೇಲೂ ನಕಾರಾತ್ಮಕ ಪರಿಣಾಮ ಬೀರಬಹುದು. ಸಹೋದರರೊಂದಿಗೆ ಸಂಬಂಧವನ್ನು ಉಳಿಸಿಕೊಳ್ಳುವ ಅವಶ್ಯಕತೆಯಿದೆ. ಹೆಚ್ಚು ಚಿಂತಿಸುವುದರಿಂದ ಯಾವ ಪ್ರಯೋಜನವಾಗದು. ಹನುಮಾನ್ ಚಾಲೀಸ್ ಪಠಿಸಿರಿ.

ಕುಂಭ: ಅಪರೂಪದ ವಿಶೇಷ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ಅದರಿಂದ ನಿಮ್ಮ ಸ್ಥಾನಮಾನ, ಅಲೋಚನಾ ಕ್ರಮಗಳು ಬದಲಾಗುವುವು.‌ ಇಂದು ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಮತ್ತು ಏಕಾಗ್ರತೆಯನ್ನು ಹೊಂದಿರುವುದು ಖಂಡಿತವಾಗಿಯೂ ನಿಮಗೆ ಯಶಸ್ಸನ್ನು ನೀಡುತ್ತದೆ. ನಿಮ್ಮ ಹತ್ತಿರ ಇರುವವರ ಟೀಕಿಸುವರು. ಅದು ನಿಮ್ಮನ್ನು ಹತಾಶೆಗೊಳಿಸಬಹುದು. ಯಾರನ್ನೂ ಹೆಚ್ಚು ಅವಲಂಬಿಸಬೇಡಿ ಮತ್ತು ನಿಮ್ಮ ಯೋಜನೆಗಳನ್ನು ಘೋಷಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಮುಖ್ಯ. ಆಂಜನೇಯನನ್ನು ಧ್ಯಾನಿಸಿ ಕಾರ್ಯಕ್ಕೆ ತೆರಳಿ.

ಮೀನ: ಬಹಳ ದಿನಗಳಿಂದ ಹಾಗೆಯೇ ಇದ್ದ ಕೆಲಸಗಳು ಮುಕ್ತಾಯಗೊಳ್ಳವುವು. ಹತ್ತಿರದ ಸಂಬಂಧಿಗಳೊಂದಿಗೆ ಪ್ರಮುಖ ಚರ್ಚೆಯನ್ನು ಮಾಡುವಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದತ್ತ ಗಮನಹರಿಸುವರು. ನಿಮ್ಮ ಕೋಪವನ್ನು ನಿಯಂತ್ರಿಸಿ. ಪರಿಸ್ಥಿತಿಯ ಪ್ರತಿಕೂಲತೆಯು ನಿಮ್ಮ ಕೋಪಕ್ಕೆ ಕಾರಣವಾಗಬಹುದು. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳಬೇಡಿ. ಗಂಡ-ಹೆಂಡತಿ ತಮ್ಮ ಕೆಲಸದಲ್ಲಿ ನಿರತರಾಗಿರುವರು. ಮಕ್ಕಳಿಗೆ ಸಮಯ ಕೊಡಲಾಗದೇ ಬೇಸರಿಸಬಹುದು. ಶ್ರಮ ಹೆಚ್ಚು ಆದಾಯ ಕಡಿಮೆ ಎಂದು ಅನ್ನಿಸಬಹುದು. ಶಿವ ಸ್ತೋತ್ರ ಮಾಡಿ.

-ಲೋಹಿತಶರ್ಮಾ ಇಡುವಾಣಿ

ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್