AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: Mar 24, 2023 | 6:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 24 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಅಶ್ವಿನಿ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:08 ರಿಂದ ಮಧ್ಯಾಹ್ನ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:41 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:06 ರಿಂದ 09:37ರ ವರೆಗೆ,

ಧನುಸ್ಸು: ಇಂದು ಹಳೆಯ ಸಂಬಂಧಗಳು ಪುನಃ ಹತ್ತಿರವಾಗಿ ಸಂತೋಷಕ್ಕೆ ಕಾರಣವಾಗಲಿದೆ. ಉನ್ನತ ಮಟ್ಟದ ಸಂಬಂಧಗಳು ದೂರಗಾಮಿ ಪ್ರಯೋಜನಗಳಿಗೆ ದಾರಿ ಮಾಡಿಕೊಡುತ್ತವೆ. ನೀವು ತಕ್ಷಣ ಪ್ರತಿಕ್ರಿಯಿಸದಿರುವುದು ಒಳ್ಳೆಯದು.‌ ಅನಗತ್ಯ ಧೈರ್ಯವನ್ನು ತೋರಿಸುವುದನ್ನು ತಪ್ಪಿಸುವುದು ಸೂಕ್ತ. ನೀವು ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ. ಅನುಭವಿ ಜನರನ್ನು ಸಂಪರ್ಕಿಸಲಾಗುವುದು. ಆರೋಗ್ಯ ದುರ್ಬಲವಾಗಬಹುದು. ಆಸ್ತಿಯ ವಿಚಾರ ಪುನಃ ಬೆಳಕಿಗೆ ಬಂದು ಸಣ್ಣ ಕಲಹದಲ್ಲಿ ಮುಕ್ತಾಯವಾದೀತು.

ಮಕರ: ಬಹು ದಿನಗಳ ಆಸೆಗಳು ಇಂದು ಈಡೇರಲಿದೆ. ಇಂದು ಮಹತ್ವದ ಕಾಮಗಾರಿಗಳು ನಿಮ್ಮ ಪಾಲಿಗೆ ಸಿಗಲಿದೆ. ಆರ್ಥಿಕವಾಗಿ ಅನೇಕ ಲಾಭಗಳು ಆಗಲಿವೆ. ಜನರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಹಿರಿಯರೊಂದಿಗೆ ಆತ್ಮೀಯತೆ ಬೆಳೆಯಲಿದೆ. ವ್ಯಾಪಾರವನ್ನು ಬೆಳಗಿಸಲು ಅನೇಕ ಅವಕಾಶಗಳಿವೆ, ಆದರೆ ನಿಮ್ಮ ನಿರ್ಲಕ್ಷ್ಯವು ಕೆಲಸವನ್ನು ಹಾಳು ಮಾಡಬಹುದು. ಸತ್ಯವನ್ನು ಮಾತನಾಡುವುದು ಬಹಳಷ್ಟು ಮಾಡುತ್ತದೆ. ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸುವುದು ಅವಶ್ಯಕ.

ಕುಂಭ: ಇಂದು ನೀವು ಸಂಸಾರದ ಸುಖವನ್ನು ಅನುಭವಿಸುವಿರಿ. ನಿಮ್ಮ ಊಹೆಯ ಅಳೆತೆಯು ಸರಿಯಾಗಿ ಇರಲಿದೆ. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕಲಿಕೆಯ ವಿಚಾರದಲ್ಲಿ ನೀವು ಎಂದಿಗಿಂತ ಹೆಚ್ಚು ಪ್ರಯತ್ನಶೀಲರು. ವಿವೇಚನೆ ಹೆಚ್ಚಲಿದೆ. ಯಾರೊಬ್ಬರ ಸಲಹೆ ಫಲ ನೀಡಲಿದೆ. ಕಾಲುಗಳು ಮತ್ತು ಸ್ನಾಯುಗಳಲ್ಲಿ ನೋವು ಇರುತ್ತದೆ.

ಮೀನ: ಇಂದು ನಿಮಗೆ ಸೌಂದರ್ಯಪ್ರಜ್ಞೆ ಹೆಚ್ಚಿರಲಿದೆ. ಪ್ರತಿಕೂಲಸ್ಥಿತಿಗಳು ದೂರವಾಗಲಿವೆ. ಶತ್ರಗಳು ಸೋಲು ಕಾಣುವರು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ದಿನದ ಆರಂಭದಲ್ಲಿ ಉತ್ಸಾಹದಿಂದ ಮಾಡುವ ಪ್ರಯತ್ನಗಳು ಫಲವನ್ನು ಕೊಡುವುವು. ಸರಿಯಾದ ಮಾರ್ಗ ಮಾತ್ರ ವಿಜಯಕ್ಕೆ ಕಾರಣವಾಗುತ್ತದೆ. ಹೊಸ ಆಲೋಚನೆಗಳನ್ನು ಪ್ರಶಂಸಿಸಲಾಗುತ್ತದೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.

-ಲೋಹಿತಶರ್ಮಾ ಇಡುವಾಣಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ