AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಮಹಿಳೆಯರಿಗೆ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ

 ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಫೆಬ್ರವರಿ​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ಮಹಿಳೆಯರಿಗೆ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 27, 2024 | 6:54 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಮಂಗಳ , ತಿಥಿ: ತೃತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:49 ರಿಂದ 11:17ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:46 ರಿಂದ 03:14ರ ವರೆಗೆ.

ಸಿಂಹ ರಾಶಿ: ಇಂದು ಮಹಿಳೆಯರ ಉದ್ಯೋಗದಲ್ಲಿ ಸಕಾರಾತ್ಮಕ ಬೆಳವಣಿಗೆ ಇರಲಿದೆ. ತಂತ್ರಜ್ಞಾನವನ್ನು ನೀವು ಹಿಂದಿರುವಂತೆ ನಿಮಗೆ ಭಾಸವಾಗಬಹುದು. ನಿಮ್ಮ ಸಹಾಯದ ಮನೋಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ಧಾರ್ಮಿಕ ಕಾರ್ಯಗಳಿಗೆ ಹಣವನ್ನು ಕೊಡುವಿರಿ. ನಿಮ್ಮಿಂದಾಗದ ಕೆಲಸಕ್ಕೆ ಕೈಹಾಕಿ ತೊಂದರೆಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ರಾಜಕಾರಣವನ್ನು ವೃತ್ತಿಯಾಗಿ ನೀವು ಸ್ವೀಕರಿಸುವ ಸಾಧ್ಯತೆ ಇದೆ. ಹೊಸ ವಾಹನದ ಖರೀದಿಯಿಂದ ಸಂತೋಷವಾಗುವುದು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿಮ್ಮ ಮೌನವು ನಿಮ್ಮರಿಗೆ ಭಯವನ್ನುಂಟುಮಾಡೀತು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಮಾತಿನಲ್ಲಿ ಹಿತ, ಮಿತವಿರಲಿ.

ಕನ್ಯಾ ರಾಶಿ: ನಿಮಗೆ ಇಂದು ಮಕ್ಕಳ ಆರೋಗ್ಯದ ಚಿಂತೆಯಾಗಬಹುದು. ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಆ ಕಡೆಗೇ ಗಮನ ಇರುವುದು. ನಿಮ್ಮ ಆರೋಗ್ಯವು ಉತ್ತಮವಾಗುವ ನಿರೀಕ್ಷೆಯಲ್ಲಿ ಇರುವಿರಿ. ಈ ದಿನ ಪೂರ್ತಿ ಹಣಕಾಸಿನ ಚಿಂತೆಯಲ್ಲಿ ಇರುವಿರಿ. ನಿಮ್ಮ ನೇರ ನುಡಿಯಿಂದ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಸತ್ಯವನ್ನು ಹೇಳಲು ಅಪಹಾಸ್ಯವಾಗಬಹುದು. ಕೇವಲ‌ ಕೊರತೆಯನ್ನು ನೀವು ಹೆಚ್ಚು ಚಿಂತಿಸುವಿರಿ. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾತ್ರ ಮಾಡಿ.

ತುಲಾ ರಾಶಿ: ಸಂಬಂಧಗಳಿಗೆ ಕೊಡಬೇಕಾದ ಬೆಲೆಯನ್ನು ಕೊಡುವಿರಿ. ಸಮಾರಂಭದಲ್ಲಿ ಭಾಗವಹಿಸುವ ಅವಕಾಶವು ಅನಿರೀಕ್ಷಿತವಾಗಿ ದೊರೆಯುವುದು. ಯಾರ ಜೊತೆಗೂ ವೈರವನ್ನು ಕಟ್ಟಿಕೊಳ್ಳದೇ ಹೊಂದಾಣಿಕೆಯಿಂದ ವ್ಯವಹರಿಸಿ. ಸುಲಭದ ಕೆಲಸವನ್ನು ಆದಷ್ಟು ಇಂದು ಮಾಡಿಮುಗಿಸಿಕೊಳ್ಳಿ. ತಂದೆ ಕಡೆಯ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಬಹುದು. ಹಣವನ್ನು ಬಹಳ ಗೌಪ್ಯವಾಗಿ ಇಟ್ಟುಕೊಳ್ಳುವಿರಿ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ವಾಹನ ಸೌಕರ್ಯದಿಂದ ಕಾರ್ಯಗಳು ಸುಲಭವಾಗಿ ಆಗುವುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಯೋಚನೆ ಸರಿಯಾಗಿರುವುದು. ಆತ್ಮೀಯ ಬಂಧುಗಳಿಗೆ ಸಮಯ ಕೊಡಲು ಆಗದೇ ವ್ಯಕ್ತಿಗಳನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಪೂರಕವಾದ ಜನರ ಗೆಳೆತನನ್ನು ಮಾಡಿಕೊಳ್ಳುವುದು ಉತ್ತಮ. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ಎಲ್ಲ ಘಟನೆಗಳನ್ನೂ ಒಂದೇ ರೀತಿಯಲ್ಲಿ ತೂಕಮಾಡಲಾಗದು. ಸಮಯವನ್ನು ತಿಳಿದುಕೊಳ್ಳುವುದು ಉತ್ತಮ. ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಅಧಿಕ ಒತ್ತಡವನ್ನು ಅನುಭವಿಸಬೇಕಾದೀತು. ಸಂದರ್ಭವನ್ನು ನೋಡಿ ಮಾತನಾಡಿ.

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು