Horoscope 8 August: ಸಂಗಾತಿಯೊಂದಿಗೆ ವಾಗ್ವಾದ, ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 08, 2023 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಆಗಸ್ಟ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ. 

Horoscope 8 August: ಸಂಗಾತಿಯೊಂದಿಗೆ ವಾಗ್ವಾದ, ಮಾನಸಿಕ ಖಿನ್ನತೆಗೆ ಒಳಗಾಗುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:48 ರಿಂದ ಸಂಜೆ 05:23ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ.

ಮೇಷ ರಾಶಿ: ಕೆಲಸದಲ್ಲಿ ಸಾವಧಾನತೆ ಇರಲಿ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಯಾರದೋ ಒತ್ತಡದಿಂದ ನಿಮ್ಮ ದಿನಚರಿಯನ್ನು ವ್ಯತ್ಯಾಸ‌ ಮಾಡಿಕೊಳ್ಳುವಿರಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿದರೆ ಉತ್ತಮ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸಣ್ಣ ವಿಚಾರವೂ ವಾಗ್ವಾದದಿಂದ ದೊಡ್ಡದಾಗಬಹುದು. ನೀರೀಕ್ಷಿಸಿದಂತೆ ಎಲ್ಲವೂ ನಡೆಯದೇ ಇರಬಹುದು. ಉತ್ತಮ‌ವಾದ ಸಮಯವನ್ನು ಎದುರು ನೋಡುವಿರಿ. ಹಣದ ಒಳ ಹರಿವು ನಿಮಗೆ ನೆಮ್ಮದಿಯನ್ನು ಕೊಟ್ಟೀತು.

ವೃಷಭ ರಾಶಿ: ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದಂತೆ ಆಗುವುದು. ಕೂಡಿಟ್ಟ ಹಣದಿಂದ ನಿಮಗೆ ಇಂದು ಪ್ರಯೋಜನವು ಸಿಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಕಛೇರಿಯಲ್ಲಿ ಅನ್ಯ ಕಾರಣಗಳಿಂದ ನಿಮ್ಮ ಕೆಲಸಗಳು ನಿಧಾನವಾಗಿ ಸಾಗಬಹುದು. ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಮತ್ತೆ ಮತ್ತೆ ಒಂದೇ ಘಟನೆಗಳು ನಿಮಗೆ ಬೇಸರ ತರಿಸಬಹುದು. ಆರ್ಥಿಕ‌ಭದ್ರತೆಯ ಕಡೆ ಅಧಿಕ ಗಮನವನ್ನು ಕೊಡುವಿರಿ. ಮನಸ್ಸಿಗೆ ನಕಾರಾತ್ಮಕ ಆಲೋಚನೆಯು ಬರದಂತೆ ನೋಡಿಕೊಳ್ಳಿ.

ಮಿಥುನ ರಾಶಿ: ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ನಿಮಗೆ ಪ್ರತಿಷ್ಠೆಯು ಬರಬಹುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗಿ ಇರದು. ನಿಮ್ಮ‌ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು. ವಾಹನ ಸಂಚಾರದಲ್ಲಿ ನಿಮಗೆ ಭಯವಾಗಬಹುದು. ಆರ್ಥಿಕವಾಗಿ ನೀವು ಬಲವಾಗಿತ್ತಿರುವುದು ನಿಮಗೆ ಹೆಮ್ಮೆಯ ವಿಚಾರವಾಗುವುದು. ಪ್ರಭಾವಿ ವ್ಯಕ್ತಿಗಳ ಜೊತೆ ಸೌಹಾರ್ದ ಮಾತುಕತೆಯನ್ನು ಮಾಡುವಿರಿ. ವಿಶ್ವಾಸ ಗಳಿಕೆಯು ನಿಮ್ಮ ಇಂದಿನ ಉದ್ದೇಶವಾಗಲಿದೆ.

ಕರ್ಕ ರಾಶಿ: ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಯಾರ‌ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳಬಹುದು. ಕಣ್ಣಿನ ಸಮಸ್ಯೆಯು ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ತೊಂದರೆಯಾಗಬಹುದು. ಕೆಲಸದಲ್ಲಿ ಮಂದಗತಿಯಲ್ಲಿ ಇರುವಿರಿ. ಬಂಧುಗಳನ್ನು ನೀವು ದೂರ ಮಾಡಿಕೊಳ್ಳುವಿರಿ. ಉದ್ಯೋಗವನ್ನೇ ನಂಬಿದ್ದರೆ ನಿಮಗೆ ಆತಂಕವು ಸೃಷ್ಟಿಯಾಗಬಹುದು.

ಸಿಂಹ ರಾಶಿ: ನಿಮ್ಮನ್ನು ಸ್ಥಾನದಿಂದ‌ ಕೆಳಗೆ ದೂಡಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ಸೌಲಭ್ಯಗಳು ಸಿಗಲಿದೆ. ಚೋರಭೀತಿಯು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗಬಹುದು. ನೀವು ಕೆಲವು ಸಮಸ್ಯೆಯನ್ನು ಅನಿರೀಕ್ಷಿತವಾಗಿ ಎದುರಿಸಬೇಕಾಗುವುದು. ನಿಮ್ಮ ದಾಖಲೆಗಳನ್ನು ಸರಿಯಾಗಿ ಇಟ್ಟಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಕುಟುಂಬದಿಂದ ಸಮಾಧಾನವು ಇರಲಿದೆ. ಇಷ್ಟದವರ ಭೇಟಿಯಾಗುವುದು ನಿಮಗೆ ಸಂತೋಷವನ್ನು ಕೊಡಲಿದೆ.

ಕನ್ಯಾ ರಾಶಿ: ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ನಿರಂತರ ಕಾರ್ಯದಿಂದ ನಿಮಗೆ ಫಲವು ಲಭ್ಯವಾಗುವುದು. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ. ಸಂಬಂಧವನ್ನು ಉಳಿಸಿಕೊಳ್ಳಲು ಸಮಯವನ್ನೂ ಕೊಡಬೇಕಾದೀತು. ಸ್ವ ಉದ್ಯೋಗವನ್ನು ನಡೆಸುತ್ತಿದ್ದರೆ, ಕೆಲಸದಿಂದ ಬಿಡುವಿರಿ. ನಿಮಗೆ ಕಾರ್ಯದಿಂದ ಪಾಪಪ್ರಜ್ಞೆಯು ಕಾಡಬಹುದು. ಹಿರಿಯರ ಜೊತೆಗೆ ಹೆಚ್ಚು ಸಮಯವನ್ನು ಕಳೆಯುವಿರಿ. ಮನಸ್ಸನ್ನು ನಿರ್ಲಿಪ್ತಗೊಳಿಸಲು ಪ್ರಯತ್ನಿಸುವಿರಿ. ಬಂಧುಗಳ ವಿಚಾರದಲ್ಲಿ ಅಸಮಾಧಾನವು ಇರುವುದು.

ತುಲಾ ರಾಶಿ: ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯದಂತೆ ಇರುವುದು. ಅತಿಯಾದ ವಿಶ್ವಾಸದಿಂದ ನಿಮಗೆ ವಂಚನೆಯಾಗಲಿದೆ. ನಿಮಗೂ ಸರ್ಕಾರದ ನಡುವೆಯೂ ವಿವಾದಗಳು ನಡೆಯಬಹುದು. ವ್ಯಾಯಾಮದ ಮೂಲಕ ನೀವು ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ಸಾಲದ ವಿಚಾರವು ನಿಮಗೆ ಇಷ್ಟವಿಲ್ಲದಿದ್ದರೂ ಅದನ್ನೇ ಮಾಡಬೇಕಾದೀತು. ಅದೃಷ್ಟವನ್ನು ನಂಬಿ ನಿಮ್ಮ ಪ್ರಯತ್ನವು ಇಲ್ಲದೆಯೂ ಇರಬಹುದು. ಉದ್ಯೋಗದ ಕಾರಣದಿಂದ ನೀವು ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ದಾಂಪತ್ಯದಲ್ಲಿ ನಡೆಯುತ್ತಿರುವ ಶೀತಲಸಮರವು ಸ್ಫೋಟವಾಗಬಹುದು. ಮಕ್ಕಳಿಗೆ ಬೇಕಾದ ತಿಳಿವಳಿಕೆಯನ್ನು ಕೊಡಲಿದ್ದೀರಿ.

ವೃಶ್ಚಿಕ ರಾಶಿ: ನಿಮಗೆ ಸ್ನೇಹಿತರಿಂದ ಧನಸಹಾಯವು ಸಿಗಲಿದೆ. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲು ಕಷ್ಟವಾದೀತು. ಅದಕ್ಕೆ ಏನಾದರೂ ತೊಂದರೆಯಾದೀತು. ಪ್ರಯಾಣಕ್ಕೆ ಇಂದು ಅನುಕೂಲವಿಲ್ಲ. ಕೆಲಸಗಳನ್ನು ಮಾಡಿಕೊಳ್ಳಲು ನಿಮಗೆ ಹಣವನ್ನು ನೀಡಬೇಕಾದೀತು. ಸ್ತ್ರೀಯರ ಸಹಾಯವನ್ನು ಪಡೆದು ನೀವು ಕಛೇರಿಯ ಕೆಲಸವನ್ನು ಮುಗಿಸುವಿರಿ. ನಿದ್ರೆಯ ವ್ಯತ್ಯಾಸದಿಂದ ನಿಮಗೆ ಕಿರಿಕಿರಿ ಆಗಬಹುದು. ಕಲಾವಿದರು ಹೆಚ್ಚಿನ ಆದಾಯವನ್ನು ಮಾಡಿಕೊಳ್ಳುವರು. ರಾಜಕೀಯಕ್ಕೆ ಹೋಗುವ ಮನಸ್ಸು ನಿಮಗೆ ಇರಲಿದೆ. ಹೊಸ ಜವಾಬ್ದಾರಿಗಳನ್ನು ಪಡೆಯಲು ನೀವು ಬಹಳ ಉತ್ಸುಕರಾಗಿ ಇರುವಿರಿ. ಪುಣ್ಯಕ್ಷೇತ್ರಕ್ಕೆ ನೀವು ಬಂಧುಗಳ ಜೊತೆಗೆ ಹೋಗುವಿರಿ.

ಧನು ರಾಶಿ: ಮನೆಯಲ್ಲಿಯೇ ಇದ್ದು ನಿರುಮ್ಮಳವಾಗಿ ಇರುಲಿರುವಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂಜರಿಯುವಿರಿ. ಬಂಧುಗಳ ವಿಯೋಗವಾಗಬಹುದು. ನಿಮ್ಮ ಜೀವನದ ದಿನಚರಿಯನ್ನು ಬದಲು ಮಾಡಿಕೊಳ್ಳಲು ಇಷ್ಟಪಡುವಿರಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಅದು ಸರಿಮಾಡಿಕೊಳ್ಳುವಿರಿ. ಯಾರಿಗಾದರೂ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳಬಹುದು. ಇಂದು ನಿಮ್ಮ ಮನಸ್ಸು ಉಲ್ಲಾಸದಿಂದ ಇರಲಿದೆ. ಸಹೋದರಿಗೆ ನೀವು ಧನಸಹಾಯವನ್ನು ಮಾಡುವ ಇಚ್ಛೆ ಉಳ್ಳವರಾಗುವಿರಿ. ನಿಮ್ಮ ಯೋಚನೆಯನ್ನು ಬಲಿಷ್ಠವಾಗಿದ್ದರೂ ಅದನ್ನು ಕ್ರಿಯಾರೂಪಕ್ಕೆ ತರುವುದು ಕಷ್ಟವಾದೀತು.

ಮಕರ ರಾಶಿ: ನಿಮ್ಮ ಕಾರ್ಯದಿಂದ ಶತ್ರುಗಳ ಇಲ್ಲವಾಗುವರು. ನಿಮ್ಮ ಪ್ರಭಾವವು ಎಲ್ಲರಿಗೂ ತಿಳಿಯಬಹುದು. ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿಯಾಗಲಿದೆ. ತಂದೆಯ ಸೇವೆಯನ್ನು ಮಾಡುವ ಮನಸ್ಸು ಆಗಲಿದೆ. ಬೇರೆಯವರ ಮಾತನ್ನು ಪೂರ್ಣವಾಗಿ ನಂಬಲು ನಿಮಗೆ ಇಷ್ಟವಾಗುವುದು. ನಿಮಗೆ ಮಕ್ಕಳಿಂದ ಹೆಚತಚಿ ಸಂತೋಷವು ನಿಮಗೆ ಸಿಗಲಿದೆ. ದುಶ್ಚಟಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಸ್ವಾಭಿಮಾನವು ನಿಮಗೆ ಕೈ ಕಟ್ಟಿದಂತೆ ಆಗುವುದು. ನಿಮ್ಮ ಗಮನವನ್ನು ಬೇರೆ ಕಡೆ ಸೆಳೆದು ವಂಚಿಸಬಹುದು. ಸ್ನೇಹಿತರ ಜೊತೆ ಪ್ರವಾಸ ಮಾಡುವ ಮನಸ್ಸಾಗಲಿದೆ. ಲಾಭಕ್ಕಾಗಿ ಎಂದು ಗೊತ್ತಿಲ್ಲದ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳಬೇಕಾದೀತು. ಸಾವಧಾನತೆಯಿಂದ ಇದ್ದರೆ ನಿಮಗೆ ಶುಭವಾಗುವುದು.

ಕುಂಭ ರಾಶಿ: ಉಳಿದಿದ್ದ ಎಲ್ಲ ಸಾಲವನ್ನೂ ತೀರಿಸುವಿರಿ. ಬೆನ್ನು ನೋವು ನಿಮ್ಮನ್ನು ಕಾಡಬಹುದು. ಸಹೋದರನ ಅಸಹಕಾರವು ನಿಮಗೆ ಹಿಂಸೆಯನ್ನು ಕೊಡುವುದು. ಅತಿಯಾದ ಅನಾರೋಗ್ಯವು ಉಂಟಾದರೆ ವೈದ್ಯರ ಸಲಹೆಯನ್ನು ಪಡೆಯಿರಿ. ಸಕಾರಾತ್ಮ ಆಲೋಚನೆಗಳೇ ನಿಮ್ಮನ್ನು ಸಂತೋಷವಾಗಿ ಇಡುವುದು. ಇನ್ನೊಬ್ಬರ ಅನವಶ್ಯಕ ವಿಚಾರಕ್ಕೆ ನೀವು ಸಲಹೆಗಾರರಾಗುವುದು ಬೇಡ. ತಂದೆಯಿಂದ ತಪ್ಪಿನ ಕೆಲಸಕ್ಕೆ ಬೈಗುಳ ಸಿಗಲಿದೆ. ಹೆಚ್ಚು ಆಯಾಸವಾಗುವ ಕೆಲಸದಿಂದ ನಿಮಗೆ ಆಲಸ್ಯವು ಬೇಗನೆ ಬರಬಹುದು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವವನ್ನು ಕೊಡುವಿರಿ. ಆಸ್ತಿಯ ರಕ್ಷಣೆಯನ್ನು ಮಾಡುವುದು ನಿಮಗೆ ಬಹಳ ಕ್ಲಿಷ್ಟ ಎನಿಸಬಹುದು. ಮಧ್ಯಗತಿಯಲ್ಲಿ ಇರುವ ಆರ್ಥಿಕತೆಯನ್ನು ಬಲಗೊಳಿಸುವ ಪ್ರಯತ್ನವು ನಡೆಯುವುದು.

ಮೀನ ರಾಶಿ: ನಿಮ್ಮ ವಿವಾಹವು ಮುಂದೆ ಮಂದೆ ಹೋಗುವುದಕ್ಕೆ ಕಾರಣವನ್ನು ದೈಜ್ಞರಿಂದ ಪಡೆಯಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಓದು ಅಸಮಾಧಾನ ತರಿಸಬಹುದು. ‌ಪ್ರಶಾಂತ ವಾತಾವರಣವನ್ನು ಹುಡುಕುವಿರಿ. ನಿಮ್ಮ ಮಾತೇ ನಿಮಗೆ ಬೇರೆಯವರ ಮೂಲಕ ಬರಬಹುದು. ಹೊಸ ವಾಹನದ ಖರೀದಿಗೆ ಹಣವನ್ನು ಖರ್ಚು ಮಾಡಬೇಕಾದೀತು‌. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರುವುದು. ನಾಯಕರಿಗೆ ಕೆಲವು ತೊಂದರೆಗಳು ಬರಬಹುದು. ನಿಮಗೆ ಕಾರ್ಯದ ಒತ್ತಡ ಇದ್ದರೂ ನಿಮ್ಮವರಿಗೆ ಸ್ವಲ್ಪ ಸಮಯವನ್ನು ಕೊಡುವಿರಿ. ಸಂಗಾತಿಯ ಸಂಪೂರ್ಣ ಬೆಂಬಲವು ಕೆಲಸದಲ್ಲಿ ಉತ್ಸಾಹವನ್ನು ತರುವುದು.

ಲೋಹಿತಶರ್ಮಾ – 8762924271 (what’s app only)