AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಈ ರಾಶಿಯವರಿಗೆ ಆರೋಗ್ಯದಲ್ಲಿ ಇಂದು ವ್ಯತ್ಯಾಸ ಆಗುವ ಸಾಧ್ಯತೆ ಇದೆ

ಇಂದಿನ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Nithya Bhavishya: ಈ ರಾಶಿಯವರಿಗೆ ಆರೋಗ್ಯದಲ್ಲಿ ಇಂದು ವ್ಯತ್ಯಾಸ ಆಗುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Mar 21, 2023 | 5:00 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮಾರ್ಚ್ 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಮಂಗಳವಾರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ಶುಭ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 38 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 03:15 ರಿಂದ 05:12ರ ವರೆಗೆ, ಯಮಘಂಡ ಕಾಲ 09: 39 ರಿಂದ 11:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:40 ರಿಂದ 02:11ರ ವರೆಗೆ.

ಮೇಷ: ನೀವು ಇಂದು ಪ್ರಪಂಚವನ್ನು ಹೊಸದೃಷ್ಟಿಯಿಂದ ನೋಡುವಿರಿ. ಇಂದು ನಡೆಯುವ ನಕಾರಾತ್ಮಕ ವಾರ್ತೆಯನ್ನು ಲೆಕ್ಕಿಸದೇ ನಿಮ್ಮ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ ವ್ಯವಹಾರವು ನಿಮಗೆ ನಿಜವಾಗಿಯೂ ಸಂತೋಷವನ್ನು ನೀಡಲಿದೆ. ನಿಮ್ಮನ್ನು ಸುಧಾರಿಸಲು ಉದ್ದೇಶದಿಂದ ಕೆಲವು ಶಿಸ್ತಿನ ಕ್ರಮವನ್ನು ನೀವೇ ರೂಢಿಸಿಕೊಳ್ಳುವಿರಿ. ನಿಮ್ಮ ಅಧ್ಯಯನ ಶೀಲತೆ ನಿಮಗೆ ಭವಿಷ್ಯದಲ್ಲಿ ನಿಮಗೆ ಬಹಳಷ್ಟು ಸಹಾಯ ಮಾಡುತ್ತದೆ. ಬೆನ್ನುನೋವು ಕಾಣಿಸಿಕೊಂಡೀತು. ವ್ಯಾಯಾಮವನ್ನು ಮಾಡಿ.

ವೃಷಭ: ನಿಮ್ಮ ಆರೋಗ್ಯವು ಕ್ರಮೇಣ ಕಡಿಮೆಯಾಗುತ್ತಾ ಹೋಗಲಿದೆ. ಇಂದು ನಿಮಗೆ ಹಾಯೆನಿಸಬಹುದು. ನೀವು ಸದ್ಯ ಆರೋಗ್ಯಕರ ಆಹಾರ ಮತ್ತು ವ್ಯಾಯಾಮದತ್ತ ಗಮನ ಹರಿಸುವುದು ಉತ್ತಮ. ಆದಷ್ಟು ಹೊರಗಿನ ತಿಂಡಿಯನ್ನು ಕಡಿಮೆ ಮಾಡಿ. ಸೋಮಾರಿತನ ಮತ್ತು ಅಸಡ್ಡೆಯಿಂದ ಅವಕಾಶಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಅದನ್ನು ಗಮನಿಸಿಕೊಳ್ಳಿ. ಹೊಸತನ್ನು ಕಲಿಯುವ ನಿರ್ಧಾರವನ್ನು ಮಾಡಲಿದ್ದೀರಿ. ಪತಿಯ ಪ್ರೀತಿ ಇಂದು ಸಿಗಲಿದೆ. ಮನಚಾಂಚಲ್ಯವನ್ನು ಕಡಿಮೆ ಮಾಡಿಕೊಳ್ಳಿ. ಶಿವದೇವಾಲಯಕ್ಕೆ ಹೋಗಿ ಅಭಿಷೇಕ ಮಾಡಿಸಿ ಬನ್ನಿ.

ಮಿಥುನ: ಹದಗೆಟ್ಟ ಆರೋಗ್ಯವು ಸರಿಯಾಗುತ್ತ ಬರುತ್ತದೆ. ಕಛೇರಿಯಲ್ಲಿ ಕೆಲವು ಸವಾಲಗಳು ಇರಲಿವೆ. ಒತ್ತಡಕ್ಕೆ ಸಿಲುಕದೇ ಆಪ್ತರ ಜೊತೆ ಸಮಾಲೋಚನೆ ಮಾಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಸಾಲಕೊಟ್ಟ ಹಣವು ನಿಮಗೆ ಸಿಗಲಿದೆ. ನಿಮ್ಮವರು ನಿಮಗೆ ಸಹಾಯ ಮಾಡಿದಂತೆ ಕಂಡರೂ ಅದು ಸುಳ್ಳಾಗಲಿದೆ. ನೀವಿಟ್ಟ ನಂಬಕೆ ಹುಸಿಯಾಗುವ ಕಾಲ ಇಂದು.‌ ಬಹಳ ನೋವಾಗಲಿದೆ. ಆದರೆ ಬೇಗ ತಿಳಿಯಿತು ಎಂಬ ಸಮಾಧನ ಮಾಡಿಕೊಳ್ಳಿ. ಏಕಾಗ್ರತೆಯ ಕೊರತೆ ಕಾಣಲಿದೆ. ಬೆಳಗ್ಗೆ ಪ್ರಾಣಾಯಾಮ ಮಾಡಿ ಧ್ಯಾನ ಮಾಡಿ.

ಕಟಕ: ನಿಮಗೆ ಸಹೋದ್ಯೋಗಿಗಳ ಸಹಕಾರವು ಸಿಕ್ಕಿ ಕಛೇರಿಯ ಇಂದಿನ ಕೆಲಸವನ್ನು ಮಾಡಿ ಮುಗಿಸುವಿರಿ. ನಿದ್ರಾಹೀನತೆಯಿಂದ ಸ್ವಲ್ಪ ಆಲಸ್ಯವೂ ಇರಲಿದೆ. ಸಂಗಾತಿಯ ಜೊತೆ ದೂರಪ್ರಯಾಣ ಮಾಡಬಹುದು. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಆಡಿಕೊಳ್ಳುತ್ತಾರೆ. ಇದರಿಂದ ನಿಮಗೆ ಪ್ರಮೋಷನ್ ಗೆ ಸಮಸ್ಯೆಯಾಗಲಿದೆ. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಇಂದು ಸಿಗಲಿದೆ. ವಾತಕ್ಕೆ ಸಂಬಂಧಿಸಿದ ಖಾಯಿಲೆ ಬರಲಿದೆ. ಧನ್ವಂತರಿಯ ಸ್ತೋತ್ರ ಮಾಡಿ.

ಸಿಂಹ: ನೀವು ಆರೋಗ್ಯವಾಗಿರಲು ಏನು ಮಾಡಬೇಕು ಎನ್ನುವುದನ್ನು ಆಪ್ತರಿಂದಲೋ ವೈದ್ಯರಿಂದಲೋ ಸಲಹೆಯನ್ನು ಪಡೆಯಿರಿ. ಆಹಾರ ಮತ್ತು ಪಾನೀಯವನ್ನು ಸರಿಯಾದ ಕಾಲಕ್ಕೆ ಸ್ವೀಕರಿಸಿ. ನೀವು ದುರಭ್ಯಾಸವನ್ನು ರೂಢಿಸಿಕೊಳ್ಳಲಿದ್ದೀರಿ. ನಿಮಗಿಂದು ಹೆಚ್ಚು ಜವಾಬ್ದಾರಿಯ ಕೆಲಸ ಸಿಗಲಿದೆ. ಅನಗತ್ಯ ಆಲೋಚನೆಗಳನ್ನು ಬಿಟ್ಟು ಕೆಲಸದಲ್ಲಿ ಮಗ್ನರಾಗಿ. ಸರ್ಕಾರದ ಕೆಲಸವು ಸ್ವಲ್ಪ ವೇಗವನ್ನು ಪಡೆದುಕೊಳ್ಳುವುದು. ಇಷ್ಟುದಿನ ಮಾಡುತ್ತಿದ್ದವರ ಬಳಿಯಿಂದ ಹಣಕಾಸಿನ ವ್ಯವಹಾರವನ್ನು ಬದಲಾಯಿಸುವಿರಿ. ಸೂರ್ಯನಮಸ್ಕಾರವನ್ನು ಮಾಡಿ ಆರೋಗ್ಯದತ್ತ ಗಮನ ಕೊಡಿ.

ಕನ್ಯಾ: ನಿಮ್ಮ ಯಶಸ್ಸಿಗೆ ಅಸೂಯೆ ಪಡುವವರಿದ್ದಾರೆ. ನಿಮಗೆ ಅಪಮಾನ ಮಾಡಲು ಪಿತೂರಿಗಳೂ ಆಗಬಹುದು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡಿ. ಮತ್ತೆಲ್ಲವೂ ಮಾಯವಾಗುತ್ತದೆ. ಸಾರ್ವಜನಿಕವಾಗಿ ನಿಮಗೆ ಗೌರವಗಳು ಸಿಗಲಿವೆ. ವಿದ್ಯುದುಪಕರಣದಿಂದ ಹಣವು ಖರ್ಚಾಗುವುದು. ಮಕ್ಕಳಿಂದ ಸಂತಸದ ವಾತಾವರಣ ಇರಲಿದೆ. ದಾಂಪತ್ಯದಲ್ಲಿ ಬಿರುಕು ಸರಿಯಾಗಿ ಸಂತೋಷವನ್ನು ಅನುಭವಿಸುವಿರಿ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ ಇದೆ. ಸಾಲವನ್ನು ಕೊಡಲಿದ್ದೀರಿ. ರಾಮತಾರಕ ಮಂತ್ರವನ್ನು ಜಪಿಸಿ. ನಿಮ್ಮೊಳಗಿನ ಭಯವು ದೂರವಾಗುವುದು.

ತುಲಾ: ಆರೋಗ್ಯದಲ್ಲಿ ಇಂದು ಹೆಚ್ಚು ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಅದನ್ನು ಗಮನಿಸಿಕೊಂಡು ವೈದ್ಯರ ಸಲಹೆಯನ್ನು ಪಡೆಯಿರಿ. ಆಸ್ತಿಯ ವಿಚಾರವಾಗಿ ಮನಸ್ತಾಪಗಳು ಮನೆಯಲ್ಲಿ ಉಂಟಾಗಬಹುದು‌. ತಾಳ್ಮೆಯಿಂದ ಅವುಗಳನ್ನು ತಣ್ಣಗಾಗಿಸಿ. ಹೆಚ್ಚು ಮಾತನಾಡಿ ಇನ್ನೊಂದಕ್ಕೆ ನಾಂದಿ ಹಾಡಬೇಡಿ. ಭವಿಷ್ಯದ ಕುರಿತು ಅತಿಯಾದ ಚಿಂತನೆಯನ್ನು ಮಾಡಲಿದ್ದೀರಿ. ಕೆಲಸದ ಆಯಾಸವು ನಿಮಗೆ ನಿದ್ರೆಯ ಬೇಗ ತರುಸುತ್ತದೆ. ಸ್ವಲ್ಪ ಹೊತ್ತು ಏಕಾಂತಕ್ಕೆ ಹೊಗುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಸಮೀಪದ ದೇವಿಯ ದೇವಾಲಯಕ್ಕೆ ಹೋಗಿ ನಿಮ್ಮ ಮನೋಬಲವನ್ನು ಹೆಚ್ಚಿಸಿಕೊಳ್ಳಿ.

ವೃಶ್ಚಿಕ: ಮಾನಸಿಕ ಮತ್ತು ದೈಹಿಕವಾಗಿ ನೀವಿಂದು ಸಬಲರು. ಬೆಳಗಿನಿಂದಲೇ ಉಲ್ಲಾಸ ಮತ್ತು ಸಂತೋಷಗಳು ಇರಲಿವೆ. ನಿಮಗಿಷ್ಟವಾದ ಸಮಾರಂಭಕ್ಕೆ ಭೇಟಿ ಕೊಡುವಿರಿ. ಆಪ್ತರನ್ನು ಭೇಟಿಯಾಗುವಿರಿ. ನಿಮ್ಮ ವಿರುದ್ಧ ಮಾತನಾಡಿದವರಿಗೆ ಬಹಳ ವೇಗವಾಗಿ ಪ್ರತಿಕ್ರಿಯೆ ನೀಡುವಿರಿ. ಸ್ನೇಹಕ್ಕೆ ಬೆಂಬಲವನ್ನು ಕೊಡಲು ಇಚ್ಛಿಸುವಿರಿ. ನಿಮ್ಮವರಿಂದ ಇಂದು ಯಾವುದನ್ನೂ ನಿರೀಕ್ಷಿಸದೇ ಇದ್ದರೂ ತಾನಾಗಿಯೇ ಬಂದು ಒದಗುವುದು. ಆರೋಗ್ಯದ ಬಗ್ಗೆ ಗಮನವಿರಲಿ. ಆಹಾರದ ವ್ಯತ್ಯಾಸದಿಂದ ಅನಾರೋಗ್ಯವು ಉಂಟಾಗುವುದು. ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಿ ಪೂಜೆ ಮಾಡಿಸಿ, ಪ್ರಸಾದವನ್ನು ಮನೆಗೆ ತೆಗೆದುಕೊಂಡು ಬನ್ನಿ.

ಧನುಸ್ಸು: ಕುಟುಂಬದವರ ಪ್ರೀತಿಯನ್ನು ನೀವು ಅನುಭವಿಸುವಿರಿ‌. ಮಾಡಲು ಕೆಲಸಗಳಿದ್ದರೂ ಅದಾವುದನ್ನೂ ಮಾಡದೇ ಸಮಯವನ್ನು ಹಾಳುಮಾಡುವಿರಿ. ದೂರದ ಊರಿಗೆ ಪ್ರಯಾಣವು ಅನಿರೀಕ್ಷಿತ ವಾಗಲಿದೆ. ನಿಮ್ಮವರನ್ನು ಚೆನ್ನಾಗಿ ನೋಡಿಕೊಳ್ಳಲು ಇಚ್ಛಿಸುವಿರಿ‌. ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವ ಅಥವಾ ಧಾರ್ಮಿಕ ಕ್ಷೇತ್ರಗಳಿಗೆ ಹೋಗಿವ ಮನಸ್ಸು ಇರಲಿದೆ. ಅನ್ಯರ ಜೊತೆ ಸಣ್ಣ ಕಲಹವನ್ನು ಮಾಡಿಕೊಳ್ಳಲಿದ್ದೀರಿ‌. ಅಪರೂಪದ ಬಂಧುಗಳು ನಿಮಗೆ ಪರಿಚಿತರಾಗಲಿದ್ದಾರೆ. ಆರ್ಥಿಕತೆ ಒಂದೇ ರೀತಿಯಲ್ಲಿ ಇರಲಿದೆ. ಮಹಾವಿಷ್ಣುವಿನ ಸ್ತೋತ್ರವನ್ನು ಮಾಡಿ.

ಮಕರ: ನಿಮಗೆ ನಿಮ್ಮ ಸಂಗಾತಿಯಿಂದ ಯಾವದೇ ಸ್ಪಂದನೆ ಸಿಗದು. ನಿಮ್ಮನ್ನು ತಾತ್ಸಾರ ಮಡುತ್ತಿದ್ದಾರೆ ಎಂಬ ಭಾವನೆ ನಿಮ್ಮಲ್ಲಿ ಮೂಡಲಿದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಪ್ರೀತಿಯ ಕೊರತೆಯಿಂದ ಇಬ್ಬರ ನಡುವೆ ಅಸಮಾಧಾನವಾಗಲಿದೆ. ಇಬ್ಬರೂ ಎಲ್ಲಿಯಾದರೂ ದೂರ ಹೋಗಿಬನ್ನಿ. ಮನಸ್ಸು ಹಗುರಾದೀತು. ಪಾಲುದಾರಿಕೆಯ ಉದ್ಯಮವು ಹೆಚ್ಚು ಫಲಕಾರಿಯಾಗಲಿದೆ. ಕೆಲಸದ ವಿಷಯದಲ್ಲಿ ನೀವು ಬಹಳ ಚುರುಕಾಗಿ ಇರಲಿದ್ದೀರಿ. ನಿಮ್ಮ ಜೊತೆ ಸಂವಹನವನ್ನು ಮಾಡುವವರಿಗೆ ಖುಷಿ ಸಿಗಲಿದೆ. ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳುವ ಸಮಯವಾಗಿದೆ‌. ಹನುಮಾನ್ ಚಾಲೀಸ್ ಪಠಣವು ನಿಮ್ಮ ಯಶಸ್ಸಿನ ಗುಟ್ಟಾಗಲಿದೆ.

ಕುಂಭ: ನಿಮಗೆ ಅತ್ಯಂತ ಸುಂದರವಾದ ದಿನವಿದಾಗಲಿದೆ. ಈ ದಿನ ನೀವು ಸಕಾರಾತ್ಮಕ ಚಿಂತನೆಯನ್ನು ಮಾಡುತ್ತ ಎಲ್ಲವನ್ನೂ ಸ್ವೀಕರಿಸುವಿರಿ. ನೂತನ ಗೃಹದ ಹುಡುಕಾಟ ಮಾಡಲಿದ್ದೀರಿ ಅಥವಾ ಹೊಸ ಮನೆಯ ಖರೀದಿಗೆ ಮನಸ್ಸು ಮಾಡುವಿರಿ. ಹೊಸ ಉದ್ಯಮವನ್ನು ಪ್ರಾರಂಭಿಸಲೂ ಯೋಚಿಸಬಹುದು. ನಿಮ್ಮ ಬಂಧುಗಳು ನಿಮ್ಮನ್ನು ಇಷ್ಟ ಪಡುವರು. ನಿಮ್ಮ ಜೊತೆ ಸಲುಗೆಯಿಂದ ಮಾತನಾಡಲು ಬಯಸುವರು. ಇನ್ನೊಬ್ಬರನ್ನು ಅರ್ಥಮಾಡಿಕೊಳ್ಳುವುದು ನಿಮಗೆ ಸಿದ್ಧಿಸಿದ ಗುಣವಾಗಿದೆ. ಆಲಸ್ಯವು ಸ್ವಲ್ಪವಿದ್ದರೂ ನಿಮ್ಮ ಇಂದಿನ ಕಾರ್ಯಗಳು ನಿಮ್ಮನ್ನು ಚುರುಕಾಗಿಸುತ್ತವೆ. ಮೃತ್ಯುಂಜಯನ ಮಂತ್ರವನ್ನು ಪಠಿಸಿ.

ಮೀನ: ನಿಮ್ಮ ಪ್ರೇಮಜೀವನವು ಹಿಂದಿಗಿಂತಲೂ ಉತ್ತಮವಾಗಿಯೂ ಪ್ರಣಯಪೂರ್ವಕವಾರುತ್ತದೆ. ಇಂದು ನಿಮಗೆ ಸಾಕಷ್ಟು ಸಮಯವಿದೆ. ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ಉತ್ತಮ ಮನೋಭಾವವನ್ನು ಹೊಂದಿರುವ ಸಾಧ್ಯತೆ ಇದೆ.‌ ನಿಮ್ಮವರು ನಿಮಗೆ ಕೆಲವು ಕಿವಿಮಾತನ್ನು ಹೇಳಬಹುದು. ವ್ಯಾಪಾರದಲ್ಲಿ ಸ್ವಲ್ಪ ನಷ್ಟವಾಗಲಿದೆ. ಅತಿಯಾದ ಚಿಂತಯನ್ನು ಮಾಡಬೇಡಿ. ಬೆಳಗಿನ ಉತ್ಸಾಹವೇ ನಿಮ್ಮ ಕಾರ್ಯಗಳನ್ನು ಪೂರೈಸುವುದು. ಮನಸ್ಸು ಚಂಚಲವಾಗಿದ್ದರೆ ಕ್ಷಣಕಾಲ ಧ್ಯಾನವನ್ನು ಮಾಡಿ ಸರಿ ಮಾಡಿಕೊಳ್ಳಿ.

ಲೋಹಿತಶರ್ಮಾ ಇಡುವಾಣಿ

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ